AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’​ ಚಿತ್ರದ ಬೋಲ್ಡ್​ ದೃಶ್ಯ ಹೇಗೆ ಶೂಟ್​ ಮಾಡಲಾಯ್ತು? ವಿವರಿಸಿದ ನಟಿ

ಇಂಥ ಬೋಲ್ಡ್​ ದೃಶ್ಯದ ಚಿತ್ರೀಕರಣದ ಸಮಯದಲ್ಲಿ ಕೋಣೆಯಲ್ಲಿ ಇದ್ದಿದ್ದು ಕೇವಲ ನಾಲ್ಕು ಜನ ಎಂಬುದನ್ನು ತೃಪ್ತಿ ದಿಮ್ರಿ ಬಹಿರಂಗಪಡಿಸಿದ್ದಾರೆ. ‘ನಾನು, ರಣಬೀರ್ ಕಪೂರ್, ನಿರ್ದೇಶಕ ಸಂದೀಪ್ ಮತ್ತು ಕ್ಯಾಮೆರಾ ಪರ್ಸನ್​ ಮಾತ್ರ ಇದ್ದೆವು. ತನಗೆ ಇದು ಕಂಫರ್ಟ್​ ಇದೆಯೇ ಎಂದು ನಿರ್ದೇಶಕರು ಆಗಾಗ ಕೇಳುತ್ತಿದ್ದರು’ ಎಂದು ಅವರು ಹೇಳಿದ್ದಾರೆ.

‘ಅನಿಮಲ್​’​ ಚಿತ್ರದ ಬೋಲ್ಡ್​ ದೃಶ್ಯ ಹೇಗೆ ಶೂಟ್​ ಮಾಡಲಾಯ್ತು? ವಿವರಿಸಿದ ನಟಿ
ರಣಬೀರ್​ ಕಪೂರ್​, ತೃಪ್ತಿ ದಿಮ್ರಿ
ಮದನ್​ ಕುಮಾರ್​
|

Updated on: Dec 08, 2023 | 12:52 PM

Share

ರಣಬೀರ್​ ಕಪೂರ್​ ನಟನೆಯ ‘ಅನಿಮಲ್​’ ಸಿನಿಮಾ (Animal Movie) ಸೂಪರ್​ ಹಿಟ್​ ಆಗಿದೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ. ಅದೇ ರೀತಿ ಇನ್ನೊಂದು ಪ್ರಮುಖ ಪಾತ್ರದಲ್ಲಿ ನಟಿಸಿರುವ ತೃಪ್ತಿ ದಿಮ್ರಿ (Tripti Dimri) ಕೂಡ ಸಖತ್​ ಸುದ್ದಿ ಆಗುತ್ತಿದ್ದಾರೆ. ‘ಅನಿಮಲ್’ ಚಿತ್ರದಲ್ಲಿ ಅವರು ನಟಿಸಿದ ಬೋಲ್ಡ್ ದೃಶ್ಯಗಳು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಆ ಕಾರಣದಿಂದ ಅವರ ಹೆಸರು ಚಾಲ್ತಿಗೆ ಬಂದಿದೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್ (Ranbir Kapoor) ಮತ್ತು ತೃಪ್ತಿ ದಿಮ್ರಿ ಅವರು ನಟಿಸಿದ ಹಸಿಬಿಸಿ ದೃಶ್ಯಗಳು ದ್ವಿತೀಯಾರ್ಧದಲ್ಲಿ ಬರುತ್ತವೆ. ಅದರ ಮೇಕಿಂಗ್​ ಬಗ್ಗೆ ಈಗ ತೃಪ್ತಿ ದಿಮ್ರಿ ಮಾತನಾಡಿದ್ದಾರೆ.

ಈ ರೀತಿಯ ದೃಶ್ಯಗಳಲ್ಲಿ ನಟಿಸುವಾಗ ಧೈರ್ಯ ಬೇಕಾಗುತ್ತದೆ ಎಂದು ತೃಪ್ತಿ ಹೇಳಿದ್ದಾರೆ. ಬಿಡುಗಡೆಯ ದಿನದಂದು ಅವರ ಬಗ್ಗೆ ಹೆಚ್ಚು ಸುದ್ದಿ ಇರಲಿಲ್ಲ. ಆದರೆ ಎರಡನೇ ದಿನದಿಂದ ಜನರು ಅವರ ಬಗ್ಗೆ ಮಾತನಾಡಲು ಪ್ರಾರಂಭಿಸಿದರು. ಈ ದೃಶ್ಯಕ್ಕೆ ಸಂಬಂಧಿಸಿದಂತೆ ತಮಗೆ ಹಲವಾರು ಸಂದೇಶಗಳು ಮತ್ತು ಫೋನ್ ಕರೆಗಳು ಬಂದಿವೆ ಎಂದು ತೃಪ್ತಿ ಹೇಳಿದ್ದಾರೆ. ‘ಅನಿಮಿಲ್​’ ಚಿತ್ರದಲ್ಲಿ ಇಂಥ ದೃಶ್ಯಗಳು ಇರಲಿವೆ ಎಂದು ನಿರ್ದೇಶಕ ಸಂದೀಪ್ ವಂಗಾ ಅವರು ಮೊದಲೇ ಚರ್ಚಿಸಿದರು ಹಾಗೂ ಕಥೆಗೆ ಈ ದೃಶ್ಯಗಳು ಬಹಳ ಮುಖ್ಯ ಎಂದು ಹೇಳಿದ್ದರು ಎಂದು ತೃಪ್ತಿ ತಿಳಿಸಿದ್ದಾರೆ.

ಇಂಥ ಬೋಲ್ಡ್​ ದೃಶ್ಯದ ಚಿತ್ರೀಕರಣದ ಸಮಯದಲ್ಲಿ ಕೋಣೆಯಲ್ಲಿ ಕೇವಲ ನಾಲ್ಕು ಜನರು ಇದ್ದರು ಎಂಬುದನ್ನು ಕೂಡ ತೃಪ್ತಿ ದಿಮ್ರಿ ಬಹಿರಂಗಪಡಿಸಿದ್ದಾರೆ. ‘ನಾನು, ರಣಬೀರ್ ಕಪೂರ್, ನಿರ್ದೇಶಕ ಸಂದೀಪ್ ಮತ್ತು ಕ್ಯಾಮೆರಾ ಪರ್ಸನ್​ ಮಾತ್ರ ಇದ್ದಿದ್ದು. ತನಗೆ ಇದು ಕಂಫರ್ಟ್​ ಇದೆಯೇ ಎಂದು ನಿರ್ದೇಶಕರು ಆಗಾಗ ಕೇಳುತ್ತಿದ್ದರು. ರಣಬೀರ್ ನರ್ವಸ್​ ಆಗಿದ್ದರೂ ಕೂಡ ಶೂಟಿಂಗ್​ ಸಮಯದಲ್ಲಿ ವೃತ್ತಿಪರರಾಗಿ ನಡೆದುಕೊಂಡರು’ ಎಂದಿದ್ದಾರೆ ತೃಪ್ತಿ ದಿಮ್ರಿ.

ಇದನ್ನೂ ಓದಿ: ‘ಅನಿಮಲ್’ ಚಿತ್ರದಲ್ಲಿ ತೃಪ್ತಿ ಬೋಲ್ಡ್ ಅವತಾರ

ಇನ್ನು, ತೃಪ್ತಿ ದಿಮ್ರಿ ಅವರಿಗೆ ಶಾರುಖ್ ಖಾನ್ ಮೊದಲ ಕ್ರಶ್ ಆಗಿದ್ದರೆ, ರಣಬೀರ್ ಕಪೂರ್ ಎರಡನೇ ಕ್ರಶ್ ಆಗಿದ್ದಾರಂತೆ. ರಣಬೀರ್ ಕಪೂರ್​ ಓರ್ವ ಶ್ರೇಷ್ಠ ನಟ ಮತ್ತು ವ್ಯಕ್ತಿ ಎಂದು ಅವರು ಹೊಗಳಿದ್ದಾರೆ. ಅವರ ಜೊತೆ ಕೆಲಸ ಮಾಡಿದ್ದು ಸಂತಸ ನೀಡಿದೆ ಎಂದು ಅವರು ಹೇಳಿದ್ದಾರೆ. ‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರಿಗೆ ಬೇಡಿಕೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ