AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಹತ್ತು ವರ್ಷಗಳ ಯೋಜನೆ ತಿಳಿಸಿದ ಆಮಿರ್ ಖಾನ್

Aamir Khan: ಟಿವಿ9 ಆಯೋಜಿಸಿದ್ದ ‘ವಾಟ್ ಇಂಡಿಯಾ ಥಿಂಕ್ ಟುಡೆ’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಆಮಿರ್ ಖಾನ್, ತಮ್ಮ ವೃತ್ತಿ ಜೀವನದ ಮುಂದಿನ 10 ವರ್ಷಗಳ ಯೋಜನೆ ಬಗ್ಗೆ ಮಾತನಾಡಿದ್ದಾರೆ.

ಮುಂದಿನ ಹತ್ತು ವರ್ಷಗಳ ಯೋಜನೆ ತಿಳಿಸಿದ ಆಮಿರ್ ಖಾನ್
Follow us
ಮಂಜುನಾಥ ಸಿ.
|

Updated on: Feb 27, 2024 | 10:36 PM

ಟಿವಿ9 ಆಯೋಜಿಸಿದ್ದ ‘ವಾಟ್ ಇಂಡಿಯಾ ಥಿಂಕ್ ಟುಡೆ’ ಕಾರ್ಯಕ್ರಮದಲ್ಲಿ ಮಂಗಳವಾರ ಆಮಿರ್ ಖಾನ್ (Aamir Khan) ತಮ್ಮ ಮಾಜಿ ಪತ್ನಿ ಕಿರಣ್ ರಾವ್ ಜೊತೆ ಭಾಗಿಯಾಗಿ ಹಲವು ವಿಷಯಗಳನ್ನು ಮಾತನಾಡಿದರು. ತಮ್ಮ ವಿಚ್ಛೇದನ, ವಿಚ್ಛೇದನದ ಬಳಿಕವೂ ಒಟ್ಟಿಗೆ ಕೆಲಸ ಮಾಡುತ್ತಿರುವುದು, ತಮ್ಮ ಗೆಳೆತನ, ಮಕ್ಕಳು ಇನ್ನಿತರೆ ವಿಷಯಗಳ ಜೊತೆಗೆ ಆಮಿರ್ ಖಾನ್ ತಮ್ಮ ವೃತ್ತಿ ಜೀವನದ ಭವಿಷ್ಯದ ಬಗ್ಗೆಯೂ ಕೆಲವು ವಿಷಯಗಳನ್ನು ಹಂಚಿಕೊಂಡರು.

ಆಮಿರ್ ಖಾನ್ ಸಿನಿಮಾ ಮಾಡಲು ಹಲವು ವರ್ಷಗಳನ್ನು ತೆಗೆದುಕೊಳ್ಳುತ್ತಾರೆ. ಆಮಿರ್ ನಟಿಸಿದ ಕಳೆದ ಸಿನಿಮಾ ‘ಲಾಲ್ ಸಿಂಗ್ ಚಡ್ಡ’ ಧಾರುಣ ಸೋಲು ಕಂಡಿದೆ. ಈ ಧಾರುಣ ಸೋಲಿನಿಂದ ಆಮಿರ್ ಖಾನ್ ಕೆಲವು ಪಾಠಗಳನ್ನು ಕಲಿತಂತಿದ್ದಾರೆ. ತಮ್ಮ ವೃತ್ತಿ ಜೀವನದ ಯೋಜನೆಗಳ ಬಗ್ಗೆ ಟಿವಿ9 ‘ವಾಟ್ ಇಂಡಿಯಾ ಥಿಂಕ್ ಟುಡೆ’ ಕಾರ್ಯಕ್ರಮದಲ್ಲಿ ಮಾತನಾಡಿರುವ ಆಮಿರ್ ಖಾನ್, ‘ಇನ್ನು ಮುಂದೆ ವರ್ಷಕ್ಕೆ ಒಂದು ಸಿನಿಮಾ ಮಾಡುವ ಯೋಜನೆ ಹಾಕಿಕೊಂಡಿದ್ದೇನೆ’ ಎಂದಿದ್ದಾರೆ.

ಮಾತ್ರವಲ್ಲದೆ ತಮ್ಮ ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಸಿನಿಮಾ ನಿರ್ಮಾಣ ಸಂಸ್ಥೆಯ ಮೂಲಕ ಹೆಚ್ಚು ಹೆಚ್ಚು ಸಿನಿಮಾಗಳನ್ನು ಮಾಡಲು ಉದ್ದೇಶಿಸಿರುವುದಾಗಿಯೂ ಹೇಳಿದ್ದಾರೆ. ಅದರಲ್ಲಿಯೂ ತಮ್ಮ ನಿರ್ಮಾಣ ಸಂಸ್ಥೆಯು ಹೊಸ ಪ್ರತಿಭಾವಂತ ನಟ-ನಟಿಯರಿಗೆ ಹಾಗೂ ತಂತ್ರಜ್ಞರಿಗೆ ವೇದಿಕೆ ಕಲ್ಪಿಸುವಂತೆ ನೋಡಿಕೊಳ್ಳುವ ಇರಾದೆ ಹೊಂದಿರುವುದಾಗಿಯೂ ಆಮಿರ್ ಖಾನ್ ಹೇಳಿದ್ದಾರೆ.

ಇದನ್ನೂ ಓದಿ:ಆಮಿರ್ ಖಾನ್ ಸಿನಿಮಾ ನಿರ್ಮಾಪಕನಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಆಮಿರ್ ಖಾನ್ ನಿರ್ಮಾಣ ಸಂಸ್ಥೆಯಿಂದ ‘ಲಾಪತಾ ಲೇಡೀಸ್’ ಸಿನಿಮಾ ನಿರ್ಮಿಸಲಾಗಿದೆ. ಸಿನಿಮಾವನ್ನು ಕಿರಣ್ ರಾವ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಐಐಎಂನ ವಿದ್ಯಾರ್ಥಿಗಳೊಟ್ಟಿಗೆ ಸಿನಿಮಾವನ್ನು ಆಮಿರ್ ಖಾನ್ ವೀಕ್ಷಿಸಿದರು. ಸಿನಿಮಾ ನೋಡಿದ ಹಲವರು ಸಿನಿಮಾ ಬಗ್ಗೆ ಬಹಳ ಒಳ್ಳೆಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

ಇನ್ನು ಆಮಿರ್ ಖಾನ್ ‘ಸಿತಾರೆ ಜಮೀನ್ ಪರ್’ ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಜೆನಿಲಿಯಾ ನಾಯಕಿಯ ಪಾತ್ರದಲ್ಲಿ ನಟಿಸಲಿದ್ದಾರಂತೆ. ಇದರ ಹೊರತಾಗಿ ಹೊಸ ಕತೆಯೊಂದನ್ನು ಆಮಿರ್ ಖಾನ್ ಕೇಳುತ್ತಿದ್ದು, ಅದು ರೆಟ್ರೊ ಸಿನಿಮಾ ಆಗಿರಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​