AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್​ವರ್ಡ್​ ಡಾನ್ ದಾವೂದ್ ಎದುರು ಡ್ಯಾನ್ಸ್ ಮಾಡ್ತಿದ್ರಾ ಟ್ವಿಂಕಲ್ ಖನ್ನಾ?

1995ರಲ್ಲಿ ರಿಲೀಸ್ ಆದ ‘ಬರ್ಸಾತ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು ಟ್ವಿಂಕಲ್ ಖನ್ನಾ. 2001ರವರೆಗೆ ಅವರು ನಟಿಯಾಗಿ ಗುರುತಿಸಿಕೊಂಡರು. ಈ ಅವಧಿಯಲ್ಲಿ ದಾವೂದ್ ಇಬ್ರಾಹಿಂ ಜೊತೆ ಅವರು ಸಂಪರ್ಕದಲ್ಲಿ ಇದ್ದರು ಎಂದು ಹೇಳಲಾಗಿತ್ತು. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು.

ಅಂಡರ್​ವರ್ಡ್​ ಡಾನ್ ದಾವೂದ್ ಎದುರು ಡ್ಯಾನ್ಸ್ ಮಾಡ್ತಿದ್ರಾ ಟ್ವಿಂಕಲ್ ಖನ್ನಾ?
ಟ್ವಿಂಕಲ್-ದಾವೂದ್
ರಾಜೇಶ್ ದುಗ್ಗುಮನೆ
|

Updated on: Apr 22, 2024 | 12:14 PM

Share

ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಅವರು ನಟಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಆ ಬಳಿಕ ಅವರು ಬರಹಗಾರ್ತಿ ಆದರು. ಅವರು ಅಂಕಣಕಾರ್ತಿಯಾಗೂ ಫೇಮಸ್ ಆಗಿದ್ದಾರೆ. ಟ್ವಿಂಕಲ್ ಖನ್ನಾ ಬಗ್ಗೆ ಒಂದು ದೊಡ್ಡ ವದಂತಿ ಇತ್ತು. ಅವರು, ದಾವೂದ್ ಇಬ್ರಾಹಿಂ (Dawaood Ibrahim) ಎದುರು ಡ್ಯಾನ್ಸ್ ಮಾಡುತ್ತಿದ್ದರು ಎನ್ನಲಾಗಿತ್ತು. ಈ ವಿವಾದದ ಬಗ್ಗೆ ಅವರು ಈಗ ಮಾತನಾಡಿದ್ದಾರೆ. ಇದನ್ನು ಅವರು ಸುಳ್ಳು ಎಂದಿದ್ದಾರೆ. ಜೊತೆಗೆ ತಮ್ಮ ಡ್ಯಾನ್ಸ್ ಸ್ಕಿಲ್ ಬಗ್ಗೆ ಹೇಳಿದ್ದಾರೆ.

1995ರಲ್ಲಿ ರಿಲೀಸ್ ಆದ ‘ಬರ್ಸಾತ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು ಟ್ವಿಂಕಲ್ ಖನ್ನಾ. 2001ರವರೆಗೆ ಅವರು ನಟಿಯಾಗಿ ಗುರುತಿಸಿಕೊಂಡರು. ಈ ಅವಧಿಯಲ್ಲಿ ದಾವೂದ್ ಇಬ್ರಾಹಿಂ ಜೊತೆ ಅವರು ಸಂಪರ್ಕದಲ್ಲಿ ಇದ್ದರು ಎಂದು ಹೇಳಲಾಗಿತ್ತು. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಆದರೆ, ಇದನ್ನು ಅವರು ಅಲ್ಲಗಳೆದಿದ್ದಾರೆ.

‘ದಾವೂದ್ ಎದುರು ನಾನು ಡ್ಯಾನ್ಸ್ ಮಾಡಿದ್ದೇನೆ ಎನ್ನುವ ಸುದ್ದಿಗಳನ್ನು ಕೆಲವು ವಾಹಿನಿಗಳಲ್ಲಿ ನೋಡಿದ್ದೇನೆ. ನನ್ನ ಮಕ್ಕಳು ನನ್ನ ನೃತ್ಯದ ಬಗ್ಗೆ ಟೀಕೆ ಮಾಡಿದ್ದಿದೆ. ದಾವೂದ್ ಅವರು ಒಳ್ಳೆಯ ನೃತ್ಯಗಾರ್ತಿಯನ್ನು ಆಯ್ಕೆ ಮಾಡುತ್ತಾರೆ ಅನ್ನೋದು ಗೊತ್ತಿರಬೇಕಿತ್ತು. ನನ್ನ  ಬಗ್ಗೆ ಹರಿದಾಡಿದ್ದು ಫೇಕ್ ನ್ಯೂಸ್’ ಎಂದಿದ್ದಾರೆ ಅವರು.

ಟ್ವಿಂಕಲ್ ಖನ್ನಾ ಅವರ ತಂದೆಯೊಬ್ಬರು ಜ್ಯೋತಿಷಿ ಒಬ್ಬರ ಬಳಿ ಭವಿಷ್ಯ ಕೇಳುತ್ತಿದ್ದರು. ಈ ವೇಳೆ ಟ್ವಿಂಕಲ್ ಖನ್ನಾ ಬರಹಗಾರ್ತಿ ಆಗುತ್ತಾರೆ ಎಂದು ಭವಿಷ್ಯ ನುಡಿಯಲಾಗಿತ್ತು. ಇದನ್ನು ಕೇಳಿ ಟ್ವಿಂಕಲ್ ಖನ್ನಾ ನಕ್ಕಿದ್ದರು. ಕೊನೆಗೂ ಈ ವಿಚಾರ ನಿಜವಾಯಿತು. ಅವರು ಈಗ ಬರಹಗಾರ್ತಿ ಆಗಿದ್ದಾರೆ.

ಇದನ್ನೂ ಓದಿ: ‘ಅಕ್ಷಯ್​ ಕುಮಾರ್ ಎಂಬ ವ್ಯಕ್ತಿ ಜೊತೆ ನಿನ್ನ ಮದುವೆ’; ಟ್ವಿಂಕಲ್ ಖನ್ನಾಗೆ ಭವಿಷ್ಯ ನುಡಿದಿದ್ದ ಜ್ಯೋತಿಷಿ

ಅಕ್ಷಯ್ ಕುಮಾರ್ ಅವರು ಸದ್ಯ ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರ ನಟನೆಯ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಾಣೋಕೆ ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ