AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದೇನು?

The Bengal Files: ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾದ ಟ್ರೈಲರ್ ಬಿಡುಗಡೆ ಆದಾಗ ತುಸು ವಿವಾದ ಹುಟ್ಟುಹಾಕಿತ್ತು. ಆಡಳಿತ ಸರ್ಕಾರದ ಬಗ್ಗೆ ಕಮ್ಯೂನಿಸ್ಟರ ಬಗ್ಗೆ, ಮುಸ್ಲೀಮರ ಬಗ್ಗೆ ದ್ವೇಷ ಮೂಡಿಸಲೆಂದೇ ನಿರ್ಮಿಸಲಾದ ಸಿನಿಮಾ ಇದೆಂಬ ಟೀಕೆಗೆ ಗುರಿ ಆಗಿತ್ತು. ಇದೀಗ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ನೋಡಿದವರು ತಮ್ಮ ಅಭಿಪ್ರಾಯಗಳನ್ನು ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ.

‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದೇನು?
The Bengal Files
ಮಂಜುನಾಥ ಸಿ.
|

Updated on: Sep 05, 2025 | 3:19 PM

Share

‘ದಿ ಕಶ್ಮೀರ್ ಫೈಲ್ಸ್’, ‘ವ್ಯಾಕ್ಸಿನ್ ವಾರ್’ ಸಿನಿಮಾಗಳ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇದೀಗ ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ನಿರ್ದೇಶನ ಮತ್ತು ನಿರ್ಮಾಣವನ್ನೂ ಮಾಡಿದ್ದಾರೆ. ವಿವೇಕ್ ಅಗ್ನಿಹೋತ್ರಿ ಹೇಳಿರುವಂತೆ ಅವರ ಈ ಸಿನಿಮಾ ಪಶ್ಚಿಮ ಬಂಗಾಳದ ರಾಜಕೀಯ ಮತ್ತು ಸಾಂಸ್ಕೃತಿಕ ಇತಿಹಾಸ ಹೇಳುವ ಸಿನಿಮಾ ಆಗಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಆದಾಗ ತುಸು ವಿವಾದ ಹುಟ್ಟುಹಾಕಿತ್ತು. ಆಡಳಿತ ಸರ್ಕಾರದ ಬಗ್ಗೆ ಕಮ್ಯೂನಿಸ್ಟರ ಬಗ್ಗೆ, ಮುಸ್ಲೀಮರ ಬಗ್ಗೆ ದ್ವೇಷ ಮೂಡಿಸಲೆಂದೇ ನಿರ್ಮಿಸಲಾದ ಸಿನಿಮಾ ಇದೆಂಬ ಟೀಕೆಗೆ ಗುರಿ ಆಗಿತ್ತು. ಇದೀಗ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ನೋಡಿದವರು ತಮ್ಮ ಅಭಿಪ್ರಾಯಗಳನ್ನು ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ.

ಲವ್ ಪ್ರೇಮ್ ಎಂಬುವರು ಟ್ವೀಟ್ ಮಾಡಿ, ‘ಇದೊಂದು ಕಣ್ಣು ತೆರೆಸುವ ಸಿನಿಮಾ. ಪಂಜಾಬ್ ಮತ್ತು ಕಾಶ್ಮೀರಗಳಲ್ಲಿ ಇಂಥಹಾ ಘಟನೆಗಳು ನಡೆದಿವೆ ಎಂದು ಕೇಳಿದ್ದೆ. ಆದರೆ ಪಶ್ಚಿಮ ಬಂಗಾಳದಲ್ಲಿಯೂ ಹೀಗೆ ನಡೆದಿದೆ ಎಂಬುದು ಗೊತ್ತಿರಲಿಲ್ಲ. ಕುಟುಂಬ ಮತ್ತು ಗೆಳೆಯರೊಟ್ಟಿಗೆ ನೋಡಲೇಬೇಕಾದ ಸಿನಿಮಾ. ಇಂಥಹಾ ಒಂದು ಕಣ್ತೆರೆಸುವ ಸಿನಿಮಾ ನೀಡಿದ್ದಕ್ಕೆ ವಿವೇಕ್ ಅಗ್ನಿಹೋತ್ರಿಗೆ ಧನ್ಯವಾದ ಎಂದಿದ್ದಾರೆ.

ರೋಹಿತ್ ಜೈಸ್ವಾಲ್ ಎಂಬುವರು ಟ್ವೀಟ್ ಮಾಡಿ, ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾದಲ್ಲಿ ಸಿಮ್ರತ್ ಕೌರ್ ಅವರ ಉದ್ದನೆಯ ಸಂಭಾಷಣೆಯೇ ನನ್ನ ತಲೆಯಲ್ಲಿ ಇನ್ನೂ ತಿರುಗುತ್ತಿದೆ. ಅದ್ಭುತವಾದ ನಟನೆಯನ್ನು ಸಿಮ್ರತ್ ಕೌರ್ ನೀಡಿದ್ದಾರೆ. ಸಿಮ್ರತ್ ಒಬ್ಬ ಅದ್ಭುತವಾದ ನಟಿ. ಅವರಿಗೆ ಪ್ರಶಸ್ತಿ ಸಿಗುವುದು ಪಕ್ಕಾ ಎಂದಿದ್ದಾರೆ.

ಈಶ್ವರ್ ಎಂಬುವರು ಟ್ವೀಟ್ ಮಾಡಿ, ‘ಸಿನಿಮಾನಲ್ಲಿ ಸ್ವಾತಂತ್ರ್ಯಕ್ಕೆ ಪೂರ್ವದಲ್ಲಿ ಬಂಗಾಳ ಹೇಗಿತ್ತು ಎಂಬುದನ್ನು ಸಿಮ್ರತ್ ಕೌರ್, ನಮಿಷಾ ಚಕ್ರಬರ್ತಿಗೆ ವಿವರಿಸುವ ದೃಶ್ಯ ಅದ್ಭುತವಾಗಿದೆ. ಆದರೆ ಈಗ ಅದು ಕೇವಲ ನೆಲದ ಒಂದು ತುಂಡಾಗಿದೆ ಎಂದಿದ್ದಾರೆ.

ಅಲೋಕ್ ರಂಜನ್ ಎಂಬುವರು ಟ್ವೀಟ್ ಮಾಡಿ, ‘ಬೆಂಗಾಲ್ ಫೈಲ್ಸ್ ಸಿನಿಮಾವನ್ನು ಈಗಷ್ಟೆ ನೋಡಿದೆ. ಅದ್ಭುತವಾದ ಸಿನಿಮಾ ಇದು. ಹೃದಯವನ್ನು ತಾಕುವ ಸಿನಿಮಾ, ಭಾವನಾತ್ಮಕ ಗೊಳಿಸುವ ಸಿನಿಮಾ. ಯಾರೂ ಹೇಳದ ಕತೆಯೊಂದನ್ನು ವಿವೇಕ್ ಅಗ್ನಿಹೋತ್ರಿ ಈ ಸಿನಿಮಾ ಮೂಲಕ ಹೇಳಿದ್ದಾರೆ ಎಂದಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಳಿಕ ವಿವೇಕ್ ಅಗ್ನಿಹೋತ್ರಿ ಮತ್ತೊಂದು ಅದ್ಭುತವಾದ ಸಿನಿಮಾ ನೀಡಿದ್ದಾರೆ. ಸಿನಿಮಾದ ಚಿತ್ರಕತೆ, ಸಂಭಾಷಣೆ ಮತ್ತು ಕಲಾವಿದರ ನಟನೆ ಅದ್ಭುತವಾಗಿದೆ. ಪ್ರತಿ ಭಾರತೀಯನೂ ನೋಡಲೇಬೇಕಾದ ಸಿನಿಮಾ ಇದಾಗಿದೆ ಎಂದು ಟ್ವೀಟ್ ಮಾಡಿರುವುದು ಸೂರ್ಯಕಾಂತ್ ಸಿಂಗ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ