AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಇಬ್ಬರಿಗೆ ಜಾಮೀನು ಮಂಜೂರು; ಆರ್ಯನ್​ಗೂ ಬೇಲ್ ಸಿಗುವ ನಿರೀಕ್ಷೆ

Aryan Khan Case: ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್​​ನಲ್ಲಿ ಮುಂದುವರೆಯಲಿದೆ. ಇದೇ ಪ್ರಕರಣದಲ್ಲಿ ಎನ್​ಡಿಪಿಎಸ್ ಕೋರ್ಟ್ ಇಬ್ಬರಿಗೆ ಜಾಮೀನು ನೀಡಿದ್ದು, ಆರ್ಯನ್ ಪರ ವಾದಕ್ಕೆ ಸಹಕಾರಿಯಾಗಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

Aryan Khan: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಇಬ್ಬರಿಗೆ ಜಾಮೀನು ಮಂಜೂರು; ಆರ್ಯನ್​ಗೂ ಬೇಲ್ ಸಿಗುವ ನಿರೀಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 27, 2021 | 11:36 AM

Share

ಮುಂಬೈ: ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan Khan) ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇಂದು (ಅಕ್ಟೋಬರ್ 27) ಮುಂದುವರೆಸಲಿದೆ. ಮಧ್ಯಾಹ್ನ 2.30ಕ್ಕೆ  ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳಿಗೆ ನಿನ್ನೆ ಸೆಷನ್ಸ್ ಕೋರ್ಟ್​​ನಿಂದ ಜಾಮೀನು ಮಂಜೂರಾಗಿದೆ. ಹೀಗಾಗಿ ಅದೇ ಮಾನದಂಡದಲ್ಲಿ ಆರ್ಯನ್ ಖಾನ್​ಗೂ ಜಾಮೀನು ನೀಡಲು ವಕೀಲರು ಕೋರ್ಟ್​ಗೆ ಮನವಿ ಮಾಡುವ ಸಾಧ್ಯತೆ ಇದೆ.

ನಿನ್ನೆ ನಡೆದ ವಿಚಾರಣೆಯಲ್ಲಿ ಆರ್ಯನ್ ಪರ ವಾದ ಮಾಡಿರುವ ವಕೀಲರಾದ ಮುಕುಲ್ ರೋಹಟಗಿ, ಆರ್ಯನ್ ಖಾನ್ ನಿಂದ ಡ್ರಗ್ಸ್ ವಶಪಡಿಸಿಕೊಂಡಿಲ್ಲ. ಆರ್ಯನ್ ಖಾನ್​ಗೆ ಡ್ರಗ್ಸ್ ಸೇವನೆ ಬಗ್ಗೆ ವೈದ್ಯಕೀಯ ಪರೀಕ್ಷೆಯನ್ನೇ ನಡೆಸಿಲ್ಲ. ಬೇರೆಯವರ ಬಳಿ ಡ್ರಗ್ಸ್ ಇದ್ದರೆ ಅದಕ್ಕೆ ಆರ್ಯನ್ ಖಾನ್ ಹೊಣೆಯಲ್ಲ. ಆರ್ಯನ್ ಖಾನ್, ವಾಟ್ಸಾಪ್ ಚಾಟ್​ಗೂ ಈ ಕೇಸ್​ಗೂ ಸಂಬಂಧ ‌ಇಲ್ಲ. ಆರ್ಯನ್ ಖಾನ್ ಬಂಧನವೇ ಆಕ್ರಮ ಎಂದು ವಾದ ಮಂಡಿಸಿದ್ದರು. ಇಂದು ಎನ್​ಸಿಬಿ ಪರ ಎಎಸ್​ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಲಿದ್ದಾರೆ. ವಾದ ಪ್ರತಿವಾದ ಇಂದು ಮುಕ್ತಾಯವಾಗುವ ನಿರೀಕ್ಷೆ ಇದ್ದು, ಬಳಿಕ ಜಾಮೀನು ಅರ್ಜಿಯ ಬಗ್ಗೆ ಬಾಂಬೆ ಹೈಕೋರ್ಟ್ ಆದೇಶ ನೀಡಲಿದೆ.

ಈ ಮೊದಲು ಎರಡು ಬಾರಿ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿತ್ತು. ಅಕ್ಟೋಬರ್ 2ರಂದು ಕ್ರೋಸ್ ಶಿಪ್ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ಸದ್ಯ ಆರ್ಯನ್ ಖಾನ್ ಆರ್ಥರ್ ರೋಡ್ ಜೈಲಿನಲ್ಲಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 30ರವರೆಗೆ ವಿಸ್ತರಿಸಲಾಗಿದೆ.

ಎನ್​ಸಿಬಿ ಅಧಿಕಾರಿಗಳಿಂದ ಸಮೀರ್ ವಾಂಖೆಡೆ ವಿಚಾರಣೆ: ಸಮೀರ್ ವಾಂಖೆಡೆ ವಿರುದ್ಧ ಲಂಚ ವಸೂಲಿ ಆರೋಪ ಪ್ರಕರಣಕ್ಕೆ ಸಂಬಂದಪಟ್ಟಂತೆ ಇಂದು ಎನ್​ಸಿಬಿ ಅಧಿಕಾರಿಗಳಿಂದ ಸಮೀರ್ ವಾಂಖೆಡೆ ವಿಚಾರಣೆ ನಡೆಯಲಿದೆ. ಡೆಪ್ಯುಟಿ ಡೈರೆಕ್ಟರ್ ಜನರಲ್‌ ಜ್ಞಾನೇಂದ್ರ ಸಿಂಗ್ ನೇತೃತ್ವದಲ್ಲಿ ಐವರು ಎನ್​ಸಿಬಿ ಅಧಿಕಾರಿಗಳಿಂದ ವಿಚಾರಣೆ ನಡೆಯಲಿದೆ. ಕೆ.ಪಿ‌ ಗೋಸಾವಿ ಹಾಗೂ ಪ್ರಭಾಕರ್ ಸೈಲ್‌ ಅವರನ್ನೂ ಕೂಡ ಎನ್​ಸಿಬಿ ತಂಡ  ವಿಚಾರಣೆ ನಡೆಸಲಿದೆ.

ಇದನ್ನೂ ಓದಿ:

Trishulam: ಹೈದರಾಬಾದ್ ಫಿಲ್ಮ್ ಫೆಡರೇಷನ್‌ನಿಂದ ಹಣಕ್ಕೆ ಬೇಡಿಕೆ; ರವಿಚಂದ್ರನ್, ಉಪೇಂದ್ರ ನಟನೆಯ ‘ತ್ರಿಶೂಲಂ’ ಶೂಟಿಂಗ್​ಗೆ ಅಡ್ಡಿ

Aryan Khan: ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್; ಮುಂದಿನ ವಿಚಾರಣೆ ಯಾವಾಗ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್