AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಇಬ್ಬರಿಗೆ ಜಾಮೀನು ಮಂಜೂರು; ಆರ್ಯನ್​ಗೂ ಬೇಲ್ ಸಿಗುವ ನಿರೀಕ್ಷೆ

Aryan Khan Case: ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್​​ನಲ್ಲಿ ಮುಂದುವರೆಯಲಿದೆ. ಇದೇ ಪ್ರಕರಣದಲ್ಲಿ ಎನ್​ಡಿಪಿಎಸ್ ಕೋರ್ಟ್ ಇಬ್ಬರಿಗೆ ಜಾಮೀನು ನೀಡಿದ್ದು, ಆರ್ಯನ್ ಪರ ವಾದಕ್ಕೆ ಸಹಕಾರಿಯಾಗಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

Aryan Khan: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಇಬ್ಬರಿಗೆ ಜಾಮೀನು ಮಂಜೂರು; ಆರ್ಯನ್​ಗೂ ಬೇಲ್ ಸಿಗುವ ನಿರೀಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 27, 2021 | 11:36 AM

Share

ಮುಂಬೈ: ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan Khan) ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇಂದು (ಅಕ್ಟೋಬರ್ 27) ಮುಂದುವರೆಸಲಿದೆ. ಮಧ್ಯಾಹ್ನ 2.30ಕ್ಕೆ  ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳಿಗೆ ನಿನ್ನೆ ಸೆಷನ್ಸ್ ಕೋರ್ಟ್​​ನಿಂದ ಜಾಮೀನು ಮಂಜೂರಾಗಿದೆ. ಹೀಗಾಗಿ ಅದೇ ಮಾನದಂಡದಲ್ಲಿ ಆರ್ಯನ್ ಖಾನ್​ಗೂ ಜಾಮೀನು ನೀಡಲು ವಕೀಲರು ಕೋರ್ಟ್​ಗೆ ಮನವಿ ಮಾಡುವ ಸಾಧ್ಯತೆ ಇದೆ.

ನಿನ್ನೆ ನಡೆದ ವಿಚಾರಣೆಯಲ್ಲಿ ಆರ್ಯನ್ ಪರ ವಾದ ಮಾಡಿರುವ ವಕೀಲರಾದ ಮುಕುಲ್ ರೋಹಟಗಿ, ಆರ್ಯನ್ ಖಾನ್ ನಿಂದ ಡ್ರಗ್ಸ್ ವಶಪಡಿಸಿಕೊಂಡಿಲ್ಲ. ಆರ್ಯನ್ ಖಾನ್​ಗೆ ಡ್ರಗ್ಸ್ ಸೇವನೆ ಬಗ್ಗೆ ವೈದ್ಯಕೀಯ ಪರೀಕ್ಷೆಯನ್ನೇ ನಡೆಸಿಲ್ಲ. ಬೇರೆಯವರ ಬಳಿ ಡ್ರಗ್ಸ್ ಇದ್ದರೆ ಅದಕ್ಕೆ ಆರ್ಯನ್ ಖಾನ್ ಹೊಣೆಯಲ್ಲ. ಆರ್ಯನ್ ಖಾನ್, ವಾಟ್ಸಾಪ್ ಚಾಟ್​ಗೂ ಈ ಕೇಸ್​ಗೂ ಸಂಬಂಧ ‌ಇಲ್ಲ. ಆರ್ಯನ್ ಖಾನ್ ಬಂಧನವೇ ಆಕ್ರಮ ಎಂದು ವಾದ ಮಂಡಿಸಿದ್ದರು. ಇಂದು ಎನ್​ಸಿಬಿ ಪರ ಎಎಸ್​ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಲಿದ್ದಾರೆ. ವಾದ ಪ್ರತಿವಾದ ಇಂದು ಮುಕ್ತಾಯವಾಗುವ ನಿರೀಕ್ಷೆ ಇದ್ದು, ಬಳಿಕ ಜಾಮೀನು ಅರ್ಜಿಯ ಬಗ್ಗೆ ಬಾಂಬೆ ಹೈಕೋರ್ಟ್ ಆದೇಶ ನೀಡಲಿದೆ.

ಈ ಮೊದಲು ಎರಡು ಬಾರಿ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿತ್ತು. ಅಕ್ಟೋಬರ್ 2ರಂದು ಕ್ರೋಸ್ ಶಿಪ್ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ಸದ್ಯ ಆರ್ಯನ್ ಖಾನ್ ಆರ್ಥರ್ ರೋಡ್ ಜೈಲಿನಲ್ಲಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 30ರವರೆಗೆ ವಿಸ್ತರಿಸಲಾಗಿದೆ.

ಎನ್​ಸಿಬಿ ಅಧಿಕಾರಿಗಳಿಂದ ಸಮೀರ್ ವಾಂಖೆಡೆ ವಿಚಾರಣೆ: ಸಮೀರ್ ವಾಂಖೆಡೆ ವಿರುದ್ಧ ಲಂಚ ವಸೂಲಿ ಆರೋಪ ಪ್ರಕರಣಕ್ಕೆ ಸಂಬಂದಪಟ್ಟಂತೆ ಇಂದು ಎನ್​ಸಿಬಿ ಅಧಿಕಾರಿಗಳಿಂದ ಸಮೀರ್ ವಾಂಖೆಡೆ ವಿಚಾರಣೆ ನಡೆಯಲಿದೆ. ಡೆಪ್ಯುಟಿ ಡೈರೆಕ್ಟರ್ ಜನರಲ್‌ ಜ್ಞಾನೇಂದ್ರ ಸಿಂಗ್ ನೇತೃತ್ವದಲ್ಲಿ ಐವರು ಎನ್​ಸಿಬಿ ಅಧಿಕಾರಿಗಳಿಂದ ವಿಚಾರಣೆ ನಡೆಯಲಿದೆ. ಕೆ.ಪಿ‌ ಗೋಸಾವಿ ಹಾಗೂ ಪ್ರಭಾಕರ್ ಸೈಲ್‌ ಅವರನ್ನೂ ಕೂಡ ಎನ್​ಸಿಬಿ ತಂಡ  ವಿಚಾರಣೆ ನಡೆಸಲಿದೆ.

ಇದನ್ನೂ ಓದಿ:

Trishulam: ಹೈದರಾಬಾದ್ ಫಿಲ್ಮ್ ಫೆಡರೇಷನ್‌ನಿಂದ ಹಣಕ್ಕೆ ಬೇಡಿಕೆ; ರವಿಚಂದ್ರನ್, ಉಪೇಂದ್ರ ನಟನೆಯ ‘ತ್ರಿಶೂಲಂ’ ಶೂಟಿಂಗ್​ಗೆ ಅಡ್ಡಿ

Aryan Khan: ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್; ಮುಂದಿನ ವಿಚಾರಣೆ ಯಾವಾಗ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ