AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ಮಾಡ ಹೊರಟ ರಾಜಮೌಳಿಗೆ ಹಿನ್ನಡೆ; ಕುಟುಂಬದಿಂದ ವಿರೋಧ

ದಾದಾಸಾಹೇಬ್ ಫಾಲ್ಕೆ ಅವರ ಜೀವನ ಕಥೆಯನ್ನು ಆಧರಿಸಿ ಎರಡು ಸಿನಿಮಾ ನಿರ್ಮಾಣವಾಗುತ್ತಿವೆ. ಒಂದು ರಾಜಮೌಳಿ ನಿರ್ದೇಶನದಲ್ಲಿ, ಇನ್ನೊಂದು ಆಮಿರ್ ಖಾನ್ ಮತ್ತು ರಾಜ್ ಕುಮಾರ್ ಹಿರಾನಿ ಅವರ ತಂಡದಿಂದ ಸಿನಿಮಾ ಮೂಡಿ ಬರುತ್ತಿದೆ. ಫಾಲ್ಕೆ ಅವರ ಕುಟುಂಬ ರಾಜಮೌಳಿ ಯೋಜನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ಮಾಡ ಹೊರಟ ರಾಜಮೌಳಿಗೆ ಹಿನ್ನಡೆ; ಕುಟುಂಬದಿಂದ ವಿರೋಧ
ರಾಜಮೌಳಿ-ದಾದಾಸಾಹೇಬ್
ರಾಜೇಶ್ ದುಗ್ಗುಮನೆ
|

Updated on: May 17, 2025 | 7:33 AM

Share

ಭಾರತದ ಸಿನಿಮಾದ ಹರಿಕಾರ ದಾದಾಸಾಹೇಬ್ ಫಾಲ್ಕೆ (Dadasaheb Phalke) ಅವರ ಬಗ್ಗೆ ಬಯೋಪಿಕ್ ಮಾಡಲು ಸಿದ್ಧತೆ ನಡೆದಿದೆ. 1903ರಲ್ಲಿ ಭಾರತದ ಮೊಟ್ಟ ಮೊದಲ ಪೂರ್ಣ ಪ್ರಮಾಣದ ಚಿತ್ರವನ್ನು ನಿರ್ದೇಶನ ಹಾಗೂ ನಿರ್ಮಾಣ ಮಾಡಿದ ಖ್ಯಾತಿ ದಾದಾಸಾಹೇಬ್ ಫಾಲ್ಕೆ ಅವರಿಗೆ ಇದೆ. ಆಗಿನ ಕಾಲಕ್ಕೆ ಅವರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಇದನ್ನು ಶತಮಾನಗಳ ಬಳಿಕ ತೆರೆಮೇಲೆ ತೋರಿಸುವ ಪ್ರಯತ್ನ ಆಗುತ್ತಿದೆ. ಆದರೆ, ಎರಡು ಖ್ಯಾತ ನಾಮರು ಇದಕ್ಕೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದಾದಾಸಾಹೇಬ್ ಫಾಲ್ಕೆ ಮೊಮ್ಮೊಗ ಚಂದ್ರಶೇಖರ್ ಶ್ರೀಕೃಷ್ಣ ಪುಸಾಲ್ಕರ್ ಮಾತನಾಡಿದ್ದಾರೆ. ರಾಜಮೌಳಿ ಬಗ್ಗೆ ಅವರು ಅಸಮಾಧಾನ ಹೊರಹಾಕಿದ್ದಾರೆ.

ಖ್ಯಾತ ನಿರ್ದೇಶಕ ರಾಜಮೌಳಿ ಹಾಗೂ ಕೆಲವರು ಸೇರಿಕೊಂಡು ದಾದಾಸಾಹೇಬ್ ಫಾಲ್ಕೆ ಚಿತ್ರವನ್ನು ನಿರ್ಮಾಣ ಮಾಡಲು ಹೊರಟಿದ್ದಾರೆ. ಈ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಅವರು ದಾದಾಸಾಹೇಬ್ ಫಾಲ್ಕೆ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿತ್ತು. ಎನ್​ಟಿಆರ್ ಅವರು ದಾದಾಸಾಹೇಬ್ ಲುಕ್​ನಲ್ಲಿರುವ ಸಾಕಷ್ಟು ಎಐ ಫೋಟೋಗಳು ವೈರಲ್ ಆಗಿವೆ.

ಈ ಬಗ್ಗೆ ಚಂದ್ರಶೇಖರ್ ಶ್ರೀಕೃಷ್ಣ ಅಸಮಾಧಾನ ಹೊರಹಾಕಿದ್ದಾರೆ. ಏಕೆಂದರೆ ಮತ್ತೊಂದು ಕಡೆ ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ಮಾಡಲು ಆಮಿರ್ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಸಿದ್ಧತೆ ಮಾಡಿಕೊಂಡಿದ್ದಾರೆ. ಇವರು ದಾದಾಸಾಹೇಬ್ ಫಾಲ್ಕೆ ಕುಟುಂಬವನ್ನು ಸಂಪರ್ಕಿಸಿ ಸ್ಕ್ರಿಪ್ಟ್ ಆರಂಭಿಸಿದ್ದರು. ರಾಜಮೌಳಿ ಅವರು ಬೇರೆ ಬೇರೆ ಪುಸ್ತಕಗಳನ್ನು ಆಧಿರಿಸಿ ಸಿನಿಮಾ ಮಾಡುತ್ತಿದ್ದಾರೆ. ಅವರು ಈವರೆಗೆ ಕುಟುಂಬದವರನ್ನು ಸಂಪರ್ಕಿಸಿಯೇ ಇಲ್ಲ. ಇದು ಚಂದ್ರಶೇಖರ್ ಅವರ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ
Image
ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ
Image
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
Image
VIDEO: ಲೈವ್​ಸ್ಟ್ರೀಮ್ ಮಾಡುವಾಗಲೇ ಗುಂಡಿಕ್ಕಿ ಇನ್​ಫ್ಲುಯೆನ್ಸರ್ ಹತ್ಯೆ
Image
ಸಿನಿಮಾ ರಂಗದ ಹರಿಕಾರ ದಾದಾಸಾಹೇಬ್ ಫಾಲ್ಕೆ ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್?

‘ರಾಜಮೌಳಿ ಅವರು ಮಾಡುತ್ತಿರುವ ಪ್ರಾಜೆಕ್ಟ್ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ ಅವರು ನನ್ನನ್ನು ಎಂದಿಗೂ ಸಂಪರ್ಕಿಸಲಿಲ್ಲ. ಯಾರಾದರೂ ಫಾಲ್ಕೆ ಬಗ್ಗೆ ಸಿನಿಮಾ ಮಾಡುತ್ತಿದ್ದಾರೆ ಎಂದರೆ ಕನಿಷ್ಠ ಪಕ್ಷ ಅವರ ಕುಟುಂಬದೊಂದಿಗೆ ಮಾತನಾಡಬೇಕು’ ಎಂದು ಅವರು ಅಭಿಪ್ರಾಯ ಹೊರಹಾಕಿದ್ದಾರೆ.

ಇದನ್ನೂ ಓದಿ: ಸಿನಿಮಾ ರಂಗದ ಹರಿಕಾರ ದಾದಾಸಾಹೇಬ್ ಫಾಲ್ಕೆ ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್?

ರಾಜ್​ಕುಮಾರ್ ಹಿರಾನಿ ಹಾಗೂ ಆಮಿರ್ ಖಾನ್ ತಂಡ ಕಳೆದ ಮೂರು ವರ್ಷಗಳಿಂದ ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಶೇಷ ಎಂದರೆ ಈ ತಂಡ ಕಳೆದ ಮೂರು ವರ್ಷಗಳಿಂದ ಚಂದ್ರಶೇಖರ್ ಜೊತೆ ಸಂಪರ್ಕದಲ್ಲಿ ಇದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು