AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಯಪುರ ಫೈಲ್ಸ್: ಸಿನಿಮಾ ನಿಷೇಧಕ್ಕೆ ಕೋರ್ಟ್ ನಿರಾಕರಣೆ

Udaipur Files: ‘ಉದಯಪುರ ಫೈಲ್ಸ್: ಕನ್ಹಯ್ಯಲಾಲ್ ಟೈಲರ್ ಮರ್ಡರ್’ ಸಿನಿಮಾ ಕನ್ಹಯ್ಯ ಲಾಲ್ ಕೊಲೆಯ ಕುರಿತಾದ ಕತೆ ಒಳಗೊಂಡಿದೆ. ಸಿನಿಮಾ ಜುಲೈ 11 ಕ್ಕೆ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ತಡೆ ನೀಡಬೇಕೆಂದು ಕೆಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದೆಹಲಿ ಹೈಕೋರ್ಟ್​​ನಲ್ಲಿ ದಾಖಲಾಗಿದ್ದವು. ಸಿನಿಮಾ ಬಿಡುಗಡೆಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.

ಉದಯಪುರ ಫೈಲ್ಸ್: ಸಿನಿಮಾ ನಿಷೇಧಕ್ಕೆ ಕೋರ್ಟ್ ನಿರಾಕರಣೆ
Udaypura
ಮಂಜುನಾಥ ಸಿ.
|

Updated on: Jul 09, 2025 | 4:31 PM

Share

ಇತ್ತೀಚೆಗೆ ಧಾರ್ಮಿಕ ಸೂಕ್ಷ್ಮ ಅಥವಾ ರಾಜಕೀಯ ಸೂಕ್ಷ್ಮ ವಿಷಯಗಳ ಬಗ್ಗೆ ಸಿನಿಮಾ ಮಾಡುವ ಟ್ರೆಂಡ್ ಹೆಚ್ಚಾಗಿದೆ. ‘ಕಾಶ್ಮೀರ್ ಫೈಲ್ಸ್’, ‘ದಿ ಕೇರಳ ಫೈಲ್ಸ್’, ‘ವ್ಯಾಕ್ಸಿನ್ ವಾರ್’, ‘ಆಕ್ಸಿಡೆಂಟಲ್ ಪ್ರೈಂ ಮಿನಿಸ್ಟರ್’ ಈಗ ‘ಬಂಗಾಳ್ ಫೈಲ್ಸ್’ ಈ ರೀತಿಯ ಇನ್ನೂ ಹಲವಾರು ಸಿನಿಮಾಗಳು ಈಗಾಗಲೇ ನಿರ್ಮಾಣವಾಗಿ ಬಿಡುಗಡೆ ಆಗಿವೆ. ಈ ರೀತಿಯ ಸಿನಿಮಾಗಳು ಬಿಡುಗಡೆ ಆದಾಗಲೆಲ್ಲ ವಿವಾದಗಳು ಭುಗಿಲೇಳುವುದು ಖಾತ್ರಿ. ಇದೀಗ ಇದೇ ಮಾದರಿಯ ‘ಉದಯಪುರ ಫೈಲ್ಸ್’ ಹೆಸರಿನ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಕೆಲವರು ಸಿನಿಮಾ ನಿಷೇಧಕ್ಕೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಸಿನಿಮಾ ನಿಷೇಧಕ್ಕೆ ನ್ಯಾಯಾಲಯ ನಕಾರ ಹೇಳಿದೆ.

‘ಉದಯಪುರ ಫೈಲ್ಸ್: ಕನ್ಹಯ್ಯಲಾಲ್ ಟೈಲರ್ ಮರ್ಡರ್’ ಸಿನಿಮಾ ಕನ್ಹಯ್ಯ ಲಾಲ್ ಕೊಲೆಯ ಕುರಿತಾದ ಕತೆ ಒಳಗೊಂಡಿದೆ. ಸಿನಿಮಾ ಜುಲೈ 11 ಕ್ಕೆ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ತಡೆ ನೀಡಬೇಕೆಂದು ಕೆಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದೆಹಲಿ ಹೈಕೋರ್ಟ್​​ನಲ್ಲಿ ದಾಖಲಾಗಿದ್ದವು. ವಿಚಾರಣೆ ನಡೆಸಿದ ನ್ಯಾಯಾಲಯವು ಸಿನಿಮಾ ಬಿಡುಗಡೆಗೆ ತಡೆ ನೀಡಲಾಗದು ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಸಿನಿಮಾ ಬಿಡುಗಡೆ ಆಗಲಿ, ಆ ನಂತರ ವಿಚಾರಣೆ ಮುಂದುವರೆಯಲಿ ಎಂದಿದೆ. ಸಿನಿಮಾ ನೋಡಿದ ಜನ ಎಲ್ಲವನ್ನೂ ನಿರ್ಧಾರ ಮಾಡುತ್ತಾರೆ ಎಂದು ಸಹ ನ್ಯಾಯಾಲಯ ಹೇಳಿದೆ.

ಮಾತ್ರವಲ್ಲದೆ, ಸಿನಿಮಾ ನಿರ್ಮಾಪಕರಿಗೆ ಸೂಚನೆ ನೀಡಿರುವ ಹೈಕೋರ್ಟ್, ‘ಉದಯಪುರ ಫೈಲ್ಸ್’ ಸಿನಿಮಾವನ್ನು ವಿರೋಧಿಸುತ್ತಿರುವವರಿಗಾಗಿ ಆದಷ್ಟು ಬೇಗ ವಿಶೇಷ ಪ್ರದರ್ಶನ ಆಯೋಜಿಸಿ ಸಿನಿಮಾ ತೋರಿಸಿ ಎಂದು ಸಹ ಹೇಳಿದೆ. ಸುಪ್ರೀಂಕೋರ್ಟ್​ನಲ್ಲಿ ಸಹ ಇದೇ ಸಿನಿಮಾ ವಿಷಯವಾಗಿ ವಿಚಾರಣೆ ನಡೆದಿದ್ದು, ಸಿನಿಮಾ ಬಿಡುಗಡೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ:ಬಾಲಿವುಡ್​ಗೆ ಹೋಲಿಸಿದರೆ ಸ್ಯಾಂಡಲ್​ವುಡ್​ನಲ್ಲಿ ಕೆಲಸ ಮಾಡೋದು ಸುಲಭ ಎಂದ ರಶ್ಮಿಕಾ ಮಂದಣ್ಣ

ಜಾಮಿಯತ್ ಉಲಾಮ ಇ ಹಿಂದ್ ನ ಅಧ್ಯಕ್ಷ ಮೌಲಾನಾ ಅರ್ಷದ್ ಮದಾನಿ ಸಿನಿಮಾ ನಿಷೇಧಿಸುವಂತೆ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದರು. ಈ ಸಿನಿಮಾನಲ್ಲಿ ಮೊಹಮ್ಮದ್ ಪೈಗಂಬರರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಆದರೆ ಆರೋಪವನ್ನು ತಳ್ಳಿ ಹಾಕಿರುವ ನ್ಯಾಯಾಲಯ, ಸಿಬಿಎಫ್​ಸಿ ಎಲ್ಲವನ್ನೂ ಪರಿಶೀಲಿಸಿ ಸಿನಿಮಾ ಬಿಡುಗಡೆಗೆ ಅನುಮತಿ ನೀಡಿದೆ ಎಂದು ಹೇಳಿದೆ.

ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಟ್ರೈಲರ್​​ನಲ್ಲಿ ಧರ್ಮ, ಹಿಂದೂ-ಮುಸ್ಲಿಂ, ಮಂದಿರ-ಮಸೀದಿ ಕುರಿತಾದ ಹಲವಾರು ಸಂಭಾಷಣೆಗಳಿವೆ. ಟ್ರೈಲರ್​​ನಲ್ಲಿ ಬಿಜೆಪಿಯ ಮಾಜಿ ಮುಖಂಡ ನೂಪುರ್ ಶರ್ಮಾ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಸಹ ಬಳಸಿಕೊಳ್ಳಲಾಗಿದೆ. ಸಿನಿಮಾ ಬಿಡುಗಡೆಗೆ ವಿರೋಧಿಸಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ‘ಸಿನಿಮಾದ ಒಟ್ಟು ಉದ್ದೇಶವೇ ಹಿಂಸೆಗೆ ಉತ್ತೇಜನ ನೀಡುವುದಾಗಿದೆ, ಅದು ಅವರು ಬಿಡುಗಡೆ ಮಾಡಿರುವ ಟ್ರೈಲರ್​​ನಲ್ಲೂ ಗೊತ್ತಾಗುತ್ತಿದೆ’ ಎಂದಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ