Pathaan Review: ‘ಪಠಾಣ್​’ ಚಿತ್ರದ ನಕಲಿ ವಿಮರ್ಶೆ ಹಂಚಿಕೊಂಡ ಉಮೈರ್​ ಸಂಧು; ಸಾಕ್ಷಿ ಸಮೇತ ಬಯಲಿಗೆಳೆದ ತರಣ್​ ಆದರ್ಶ್​

Pathaan Movie Review | Taran Adarsh: ಉಮೈರ್​ ಸಂಧು ಅವರು ವಿದೇಶಿ ಸೆನ್ಸಾರ್​ ಮಂಡಳಿಯ ಸದಸ್ಯ ಎಂದು ತಮ್ಮನ್ನು ತಾವು ಕರೆದುಕೊಂಡಿದ್ದಾರೆ. ತಾವೊಬ್ಬ ವಿಮರ್ಶಕ ಎಂಬುದಾಗಿಯೂ ಹೇಳಿಕೊಂಡಿದ್ದಾರೆ.

Pathaan Review: ‘ಪಠಾಣ್​’ ಚಿತ್ರದ ನಕಲಿ ವಿಮರ್ಶೆ ಹಂಚಿಕೊಂಡ ಉಮೈರ್​ ಸಂಧು; ಸಾಕ್ಷಿ ಸಮೇತ ಬಯಲಿಗೆಳೆದ ತರಣ್​ ಆದರ್ಶ್​
ಶಾರುಖ್ ಖಾನ್
Follow us
|

Updated on: Jan 22, 2023 | 8:30 AM

ಭಾರಿ ಹೈಪ್​ ಸೃಷ್ಟಿ ಮಾಡಿರುವ ‘ಪಠಾಣ್​’ ಸಿನಿಮಾವನ್ನು (Pathaan Movie) ಮೊದಲ ದಿನವೇ ನೋಡಲು ಶಾರುಖ್​ ಖಾನ್​ ಅಭಿಮಾನಿಗಳು ಕಾದಿದ್ದಾರೆ. ಈ ಸಿನಿಮಾ ಹೇಗಿದೆ ಎಂಬುದನ್ನು ತಿಳಿಯುವ ಕೌತುಕ ಸಿನಿಪ್ರಿಯರಲ್ಲಿದೆ. ಈ ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕರೆ ಬಾಕ್ಸ್​ ಆಫೀಸ್​ ಗಳಿಕೆಗೆ ಸಹಕಾರಿ ಆಗಲಿದೆ. ಮೊದಲ ದಿನವೇ ಕೆಟ್ಟ ವಿಮರ್ಶೆ ಕೇಳಿಬಂದರೆ ಸಿನಿಮಾ ನೋಡುವವರ ಸಂಖ್ಯೆ ಇಳಿಮುಖ ಆಗುತ್ತದೆ. ಆ ದೃಷ್ಟಿಯಿಂದ ಮೊದಲ ವಿಮರ್ಶೆ ತುಂಬ ಮುಖ್ಯವಾಗುತ್ತದೆ. ಹೀಗಿರುವಾಗ ಉಮೈರ್​ ಸಂಧು (Umair Sandhu) ಅವರು ಫೇಕ್​ ವಿಮರ್ಶೆ ಹಂಚಿಕೊಂಡಿದ್ದಾರೆ. ಅವರು ಟ್ವಿಟರ್​ನಲ್ಲಿ ಬರೆದುಕೊಂಡಿರುವ ‘ಪಠಾಣ್​’ ಸಿನಿಮಾದ ವಿಮರ್ಶೆ ಸಂಪೂರ್ಣ ಕಾಪಿ ಪೇಸ್ಟ್​ ಎಂಬುದನ್ನು ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ (Taran Adarsh)​ ಅವರು ಬಯಲು ಮಾಡಿದ್ದಾರೆ.

ಉಮೈರ್​ ಸಂಧು ಅವರು ವಿದೇಶಿ ಸೆನ್ಸಾರ್​ ಮಂಡಳಿಯ ಸದಸ್ಯ ಎಂದು ತಮ್ಮನ್ನು ತಾವು ಕರೆದುಕೊಂಡಿದ್ದಾರೆ. ವಿಮರ್ಶಕ ಎಂಬುದಾಗಿಯೂ ಹೇಳಿಕೊಂಡಿದ್ದಾರೆ. ಈ ಹಿಂದೆ ಅನೇಕ ಸಿನಿಮಾಗಳ ವಿಮರ್ಶೆಯನ್ನು ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದುಂಟು. ಭಾರತದಲ್ಲಿ ಸಿನಿಮಾಗಳು ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಅವುಗಳ ವಿಮರ್ಶೆ ತಿಳಿಸಿದ್ದರು. ಆದರೆ ಈ ಬಾರಿ ಅವರು ನಗೆಪಾಟಲಿಗೆ ಒಳಗಾಗುವಂತೆ ಆಗಿದೆ.

ಇದನ್ನೂ ಓದಿ
Image
Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್​’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್​ಟೈಟಲ್​ ಅಳವಡಿಸಲು ಕೋರ್ಟ್​ ಸೂಚನೆ
Image
Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​
Image
Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ
Image
Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​

‘ಪಠಾಣ್​’ ಸಿನಿಮಾ ಹಾಗಿದೆ.. ಹೀಗಿದೆ.. ಎಂದು ಪುಂಕಾನುಪುಂಕವಾಗಿ ಉಮೈರ್​ ಸಂಧು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದರು. ಆದರೆ ಆ ಸಾಲುಗಳ ಮೂಲವನ್ನು ತರಣ್​ ಆದರ್ಶ್​ ಅವರು ಪತ್ತೆ ಹಚ್ಚಿದ್ದಾರೆ. ಈ ಹಿಂದೆ ‘ಏಕ್​ ಥಾ ಟೈಗರ್​’ ಚಿತ್ರಕ್ಕೆ ತರಣ್​ ಆದರ್ಶ್​ ಬರೆದ ವಿಮರ್ಶೆಯನ್ನೇ ಈಗ ಉಮೈರ್​ ಸಂಧು ಕಾಪಿ ಪೇಸ್ಟ್​ ಮಾಡಿದ್ದಾರೆ. ಸಲ್ಮಾನ್​ ಖಾನ್​ ಹೆಸರಿನ ಬದಲು ಶಾರುಖ್​ ಖಾನ್​ ಹೆಸರನ್ನು ಸೇರಿಸಿದ್ದಾರೆ ಅಷ್ಟೇ!

ಇದನ್ನು ಪತ್ತೆ ಹಚ್ಚಿರುವ ತರಣ್​ ಆದರ್ಶ್​​ ಅವರು ಟ್ವಿಟರ್​ನಲ್ಲಿಯೇ ತಿರುಗೇಟು ಕೊಟ್ಟಿದ್ದಾರೆ. ‘ಇಂಥ ನಾನ್​ಸೆನ್ಸ್​ ನಿಲ್ಲಿಸಿ’ ಎಂದು ಅವರು ಖಡಕ್​ ವಾರ್ನಿಂಗ್​ ನೀಡಿದ್ದಾರೆ. ಒಟ್ಟಿನಲ್ಲಿ ಉಮೈರ್​ ಸಂಧು ಬರೆಯುವ ವಿಮರ್ಶೆಯಲ್ಲಿ ಅಸಲಿತನ ಇರುವುದಿಲ್ಲ ಎಂಬುದು ಈ ಮೂಲಕ ಸಾಬೀತಾದಂತೆ ಆಗಿದೆ. ಈಗ ಅವರು ತಮ್ಮ ಟ್ವೀಟ್​ ಡಿಲೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!