AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ನಿವಾಸದ ಎದುರು ಭಾರೀ ಪ್ರತಿಭಟನೆ; ಮನ್ನತ್​ಗೆ ಬಿಗಿ ಭದ್ರತೆ ನೀಡಿದ ಪೊಲೀಸರು

ಶಾರುಖ್ ಖಾನ್ ಅವರು ಸ್ಟಾರ್ ಹೀರೋ. ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ಆನ್​ಲೈನ್​ ಗೇಮ್​ಗಳ ಜಾಹೀರಾತಲ್ಲಿ ಕಾಣಿಸಿಕೊಂಡಿದ್ದಾರೆ. ಹಣಕ್ಕಾಗಿ ಅವರು ಈ ರೀತಿ ಮಾಡಬಾರದಿತ್ತು ಅನ್ನೋದು ಕೆಲವರ ಅಭಿಪ್ರಾಯ. ಹೀಗಾಗಿ, ಜೂಜಿನ ಪ್ರಚಾರವನ್ನು ಶಾರುಖ್ ಬೆಂಬಲಿಸಬಾರದು ಎಂದು ಕೆಲವರು ಒತ್ತಾಯಿಸಿದ್ದಾರೆ.

ಶಾರುಖ್ ಖಾನ್ ನಿವಾಸದ ಎದುರು ಭಾರೀ ಪ್ರತಿಭಟನೆ; ಮನ್ನತ್​ಗೆ ಬಿಗಿ ಭದ್ರತೆ ನೀಡಿದ ಪೊಲೀಸರು
ಶಾರುಖ್​ ಖಾನ್​
ರಾಜೇಶ್ ದುಗ್ಗುಮನೆ
|

Updated on:Aug 28, 2023 | 8:29 AM

Share

ಬಾಲಿವುಡ್‌ನ ನಟ ಶಾರುಖ್ ಖಾನ್ (Shah Rukh Khan) ಅವರು ಸದ್ಯ ‘ಜವಾನ್’ ಸಿನಿಮಾ (Jawan Movie) ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನೋಡಲು ಲಕ್ಷಾಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಆ್ಯಕ್ಷನ್ ಅವತಾರ ತಾಳಲಿದ್ದಾರೆ. ಈ ಚಿತ್ರದ ಮೂಲಕ ಶಾರುಖ್ ಮತ್ತೊಮ್ಮೆ ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಈ ಮಧ್ಯೆ ಅವರ ನಿವಾಸ ಮನ್ನತ್ ಹೊರಗೆ ಕೆಲವರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಮುಂಬೈ ಪೊಲೀಸರು ತಡೆದಿದ್ದು, ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ. ಶಾರುಖ್ ಖಾನ್ ಮನೆ ಎದುರು ಪ್ರತಿಭಟನೆ ನಡೆಸಿದ ಫೋಟೋ-ವಿಡಿಯೋ ವೈರಲ್ ಆಗುತ್ತಿದೆ.

ಶಾರುಖ್ ಖಾನ್ ಅವರು ಸ್ಟಾರ್ ಹೀರೋ. ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ಆನ್​ಲೈನ್​ ಗೇಮ್​ಗಳ ಜಾಹೀರಾತಲ್ಲಿ ಕಾಣಿಸಿಕೊಂಡಿದ್ದಾರೆ. ಹಣಕ್ಕಾಗಿ ಅವರು ಈ ರೀತಿ ಮಾಡಬಾರದಿತ್ತು ಅನ್ನೋದು ಕೆಲವರ ಅಭಿಪ್ರಾಯ. ಹೀಗಾಗಿ, ಜೂಜಿನ ಪ್ರಚಾರವನ್ನು ಶಾರುಖ್ ಬೆಂಬಲಿಸಬಾರದು ಎಂದು ಕೆಲವರು ಒತ್ತಾಯಿಸಿದ್ದಾರೆ.

ಅನ್‌ಟಚ್ ಯೂತ್ ಫೌಂಡೇಶನ್ ಈ ಪ್ರತಿಭಟನೆ ನಡೆಸಿದೆ. ಆನ್‌ಲೈನ್ ಜೂಜನ್ನು ಅವರು ಉತ್ತೇಜಿಸುತ್ತಿದ್ದಾರೆ ಎಂದು ಈ ಫೌಂಡೇಷನ್ ಆರೋಪಿಸಿದೆ. ಈ ರೀತಿಯ ಅಪ್ಲಿಕೇಷನ್​ಗಳನ್ನು ಪ್ರಚಾರದಿಂದ ಯುವ ಪೀಳಿಗೆಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಪ್ರತಿಭಟನಕಾರರು ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣಕ್ಕೆ ಕೆಲವರು ಶಾರುಖ್ ಖಾನ್ ಅವರ ಮನೆ (ಮನ್ನತ್) ಹೊರಗೆ ಪ್ರತಿಭಟಿಸಲು ಪ್ರಯತ್ನಿಸಿದ್ದಾರೆ. ‘ಮನ್ನತ್’ ಹೊರಗೆ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಹೆಚ್ಚಿತು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕ್ರೇಜ್​; 21 ದಿನ ಮೊದಲೇ ಬುಕಿಂಗ್ ಓಪನ್

ಈ ಬಗ್ಗೆ ಮಾತನಾಡಿರುವ ಅನ್‌ಟಚ್ ಯೂತ್ ಫೌಂಡೇಶನ್ ಅಧ್ಯಕ್ಷ ಕೃಷ್ಣ ಚಂದ್ರ ಅಡಾಲ್, ‘ಶಾರುಖ್ ಅವರಂತಹ ದೊಡ್ಡ ಸ್ಟಾರ್​​ಗಳ ಮಾತುಗಳನ್ನು ಜನ ಕೇಳುತ್ತಾರೆ. ಅವರು ಅನೇಕ ಜೂಜಿನ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ಯುವ ಪೀಳಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇಂತಹ ಜೂಜಿನ ಅಪ್ಲಿಕೇಶನ್‌ಗಳನ್ನು ಅವರು ಪ್ರಚಾರ ಮಾಡಬಾರದು. ಇದನ್ನು ನಿಲ್ಲಿಸದಿದ್ದರೆ ನಾವು ಮತ್ತೆ ಮತ್ತೆ ಪ್ರತಿಭಟನೆ ಮಾಡಬೇಕಾಗುತ್ತದೆ. ಅಪ್ರಾಪ್ತರು ಜೂಜಾಡುವುದನ್ನು ಪೊಲೀಸರು ಕಂಡರೆ ಬಂಧಿಸುತ್ತಾರೆ. ದೊಡ್ಡ ತಾರೆಯರು ಇದು ತಪ್ಪು ಎಂದು ತಿಳಿದೂ ಅದನ್ನು ಪ್ರೋತ್ಸಾಹಿಸುತ್ತಾರೆ’ ಕೃಷ್ಣಚಂದ್ರ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:55 am, Mon, 28 August 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು