ಶಾರುಖ್ ಖಾನ್ ನಿವಾಸದ ಎದುರು ಭಾರೀ ಪ್ರತಿಭಟನೆ; ಮನ್ನತ್​ಗೆ ಬಿಗಿ ಭದ್ರತೆ ನೀಡಿದ ಪೊಲೀಸರು

ಶಾರುಖ್ ಖಾನ್ ಅವರು ಸ್ಟಾರ್ ಹೀರೋ. ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ಆನ್​ಲೈನ್​ ಗೇಮ್​ಗಳ ಜಾಹೀರಾತಲ್ಲಿ ಕಾಣಿಸಿಕೊಂಡಿದ್ದಾರೆ. ಹಣಕ್ಕಾಗಿ ಅವರು ಈ ರೀತಿ ಮಾಡಬಾರದಿತ್ತು ಅನ್ನೋದು ಕೆಲವರ ಅಭಿಪ್ರಾಯ. ಹೀಗಾಗಿ, ಜೂಜಿನ ಪ್ರಚಾರವನ್ನು ಶಾರುಖ್ ಬೆಂಬಲಿಸಬಾರದು ಎಂದು ಕೆಲವರು ಒತ್ತಾಯಿಸಿದ್ದಾರೆ.

ಶಾರುಖ್ ಖಾನ್ ನಿವಾಸದ ಎದುರು ಭಾರೀ ಪ್ರತಿಭಟನೆ; ಮನ್ನತ್​ಗೆ ಬಿಗಿ ಭದ್ರತೆ ನೀಡಿದ ಪೊಲೀಸರು
ಶಾರುಖ್​ ಖಾನ್​
Follow us
|

Updated on:Aug 28, 2023 | 8:29 AM

ಬಾಲಿವುಡ್‌ನ ನಟ ಶಾರುಖ್ ಖಾನ್ (Shah Rukh Khan) ಅವರು ಸದ್ಯ ‘ಜವಾನ್’ ಸಿನಿಮಾ (Jawan Movie) ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನೋಡಲು ಲಕ್ಷಾಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಆ್ಯಕ್ಷನ್ ಅವತಾರ ತಾಳಲಿದ್ದಾರೆ. ಈ ಚಿತ್ರದ ಮೂಲಕ ಶಾರುಖ್ ಮತ್ತೊಮ್ಮೆ ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಈ ಮಧ್ಯೆ ಅವರ ನಿವಾಸ ಮನ್ನತ್ ಹೊರಗೆ ಕೆಲವರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಮುಂಬೈ ಪೊಲೀಸರು ತಡೆದಿದ್ದು, ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ. ಶಾರುಖ್ ಖಾನ್ ಮನೆ ಎದುರು ಪ್ರತಿಭಟನೆ ನಡೆಸಿದ ಫೋಟೋ-ವಿಡಿಯೋ ವೈರಲ್ ಆಗುತ್ತಿದೆ.

ಶಾರುಖ್ ಖಾನ್ ಅವರು ಸ್ಟಾರ್ ಹೀರೋ. ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ಆನ್​ಲೈನ್​ ಗೇಮ್​ಗಳ ಜಾಹೀರಾತಲ್ಲಿ ಕಾಣಿಸಿಕೊಂಡಿದ್ದಾರೆ. ಹಣಕ್ಕಾಗಿ ಅವರು ಈ ರೀತಿ ಮಾಡಬಾರದಿತ್ತು ಅನ್ನೋದು ಕೆಲವರ ಅಭಿಪ್ರಾಯ. ಹೀಗಾಗಿ, ಜೂಜಿನ ಪ್ರಚಾರವನ್ನು ಶಾರುಖ್ ಬೆಂಬಲಿಸಬಾರದು ಎಂದು ಕೆಲವರು ಒತ್ತಾಯಿಸಿದ್ದಾರೆ.

ಅನ್‌ಟಚ್ ಯೂತ್ ಫೌಂಡೇಶನ್ ಈ ಪ್ರತಿಭಟನೆ ನಡೆಸಿದೆ. ಆನ್‌ಲೈನ್ ಜೂಜನ್ನು ಅವರು ಉತ್ತೇಜಿಸುತ್ತಿದ್ದಾರೆ ಎಂದು ಈ ಫೌಂಡೇಷನ್ ಆರೋಪಿಸಿದೆ. ಈ ರೀತಿಯ ಅಪ್ಲಿಕೇಷನ್​ಗಳನ್ನು ಪ್ರಚಾರದಿಂದ ಯುವ ಪೀಳಿಗೆಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಪ್ರತಿಭಟನಕಾರರು ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣಕ್ಕೆ ಕೆಲವರು ಶಾರುಖ್ ಖಾನ್ ಅವರ ಮನೆ (ಮನ್ನತ್) ಹೊರಗೆ ಪ್ರತಿಭಟಿಸಲು ಪ್ರಯತ್ನಿಸಿದ್ದಾರೆ. ‘ಮನ್ನತ್’ ಹೊರಗೆ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಹೆಚ್ಚಿತು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕ್ರೇಜ್​; 21 ದಿನ ಮೊದಲೇ ಬುಕಿಂಗ್ ಓಪನ್

ಈ ಬಗ್ಗೆ ಮಾತನಾಡಿರುವ ಅನ್‌ಟಚ್ ಯೂತ್ ಫೌಂಡೇಶನ್ ಅಧ್ಯಕ್ಷ ಕೃಷ್ಣ ಚಂದ್ರ ಅಡಾಲ್, ‘ಶಾರುಖ್ ಅವರಂತಹ ದೊಡ್ಡ ಸ್ಟಾರ್​​ಗಳ ಮಾತುಗಳನ್ನು ಜನ ಕೇಳುತ್ತಾರೆ. ಅವರು ಅನೇಕ ಜೂಜಿನ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ಯುವ ಪೀಳಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇಂತಹ ಜೂಜಿನ ಅಪ್ಲಿಕೇಶನ್‌ಗಳನ್ನು ಅವರು ಪ್ರಚಾರ ಮಾಡಬಾರದು. ಇದನ್ನು ನಿಲ್ಲಿಸದಿದ್ದರೆ ನಾವು ಮತ್ತೆ ಮತ್ತೆ ಪ್ರತಿಭಟನೆ ಮಾಡಬೇಕಾಗುತ್ತದೆ. ಅಪ್ರಾಪ್ತರು ಜೂಜಾಡುವುದನ್ನು ಪೊಲೀಸರು ಕಂಡರೆ ಬಂಧಿಸುತ್ತಾರೆ. ದೊಡ್ಡ ತಾರೆಯರು ಇದು ತಪ್ಪು ಎಂದು ತಿಳಿದೂ ಅದನ್ನು ಪ್ರೋತ್ಸಾಹಿಸುತ್ತಾರೆ’ ಕೃಷ್ಣಚಂದ್ರ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:55 am, Mon, 28 August 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ