AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ನಿವಾಸದ ಎದುರು ಭಾರೀ ಪ್ರತಿಭಟನೆ; ಮನ್ನತ್​ಗೆ ಬಿಗಿ ಭದ್ರತೆ ನೀಡಿದ ಪೊಲೀಸರು

ಶಾರುಖ್ ಖಾನ್ ಅವರು ಸ್ಟಾರ್ ಹೀರೋ. ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ಆನ್​ಲೈನ್​ ಗೇಮ್​ಗಳ ಜಾಹೀರಾತಲ್ಲಿ ಕಾಣಿಸಿಕೊಂಡಿದ್ದಾರೆ. ಹಣಕ್ಕಾಗಿ ಅವರು ಈ ರೀತಿ ಮಾಡಬಾರದಿತ್ತು ಅನ್ನೋದು ಕೆಲವರ ಅಭಿಪ್ರಾಯ. ಹೀಗಾಗಿ, ಜೂಜಿನ ಪ್ರಚಾರವನ್ನು ಶಾರುಖ್ ಬೆಂಬಲಿಸಬಾರದು ಎಂದು ಕೆಲವರು ಒತ್ತಾಯಿಸಿದ್ದಾರೆ.

ಶಾರುಖ್ ಖಾನ್ ನಿವಾಸದ ಎದುರು ಭಾರೀ ಪ್ರತಿಭಟನೆ; ಮನ್ನತ್​ಗೆ ಬಿಗಿ ಭದ್ರತೆ ನೀಡಿದ ಪೊಲೀಸರು
ಶಾರುಖ್​ ಖಾನ್​
Follow us
ರಾಜೇಶ್ ದುಗ್ಗುಮನೆ
|

Updated on:Aug 28, 2023 | 8:29 AM

ಬಾಲಿವುಡ್‌ನ ನಟ ಶಾರುಖ್ ಖಾನ್ (Shah Rukh Khan) ಅವರು ಸದ್ಯ ‘ಜವಾನ್’ ಸಿನಿಮಾ (Jawan Movie) ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನೋಡಲು ಲಕ್ಷಾಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಆ್ಯಕ್ಷನ್ ಅವತಾರ ತಾಳಲಿದ್ದಾರೆ. ಈ ಚಿತ್ರದ ಮೂಲಕ ಶಾರುಖ್ ಮತ್ತೊಮ್ಮೆ ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಈ ಮಧ್ಯೆ ಅವರ ನಿವಾಸ ಮನ್ನತ್ ಹೊರಗೆ ಕೆಲವರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಮುಂಬೈ ಪೊಲೀಸರು ತಡೆದಿದ್ದು, ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ. ಶಾರುಖ್ ಖಾನ್ ಮನೆ ಎದುರು ಪ್ರತಿಭಟನೆ ನಡೆಸಿದ ಫೋಟೋ-ವಿಡಿಯೋ ವೈರಲ್ ಆಗುತ್ತಿದೆ.

ಶಾರುಖ್ ಖಾನ್ ಅವರು ಸ್ಟಾರ್ ಹೀರೋ. ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ಆನ್​ಲೈನ್​ ಗೇಮ್​ಗಳ ಜಾಹೀರಾತಲ್ಲಿ ಕಾಣಿಸಿಕೊಂಡಿದ್ದಾರೆ. ಹಣಕ್ಕಾಗಿ ಅವರು ಈ ರೀತಿ ಮಾಡಬಾರದಿತ್ತು ಅನ್ನೋದು ಕೆಲವರ ಅಭಿಪ್ರಾಯ. ಹೀಗಾಗಿ, ಜೂಜಿನ ಪ್ರಚಾರವನ್ನು ಶಾರುಖ್ ಬೆಂಬಲಿಸಬಾರದು ಎಂದು ಕೆಲವರು ಒತ್ತಾಯಿಸಿದ್ದಾರೆ.

ಅನ್‌ಟಚ್ ಯೂತ್ ಫೌಂಡೇಶನ್ ಈ ಪ್ರತಿಭಟನೆ ನಡೆಸಿದೆ. ಆನ್‌ಲೈನ್ ಜೂಜನ್ನು ಅವರು ಉತ್ತೇಜಿಸುತ್ತಿದ್ದಾರೆ ಎಂದು ಈ ಫೌಂಡೇಷನ್ ಆರೋಪಿಸಿದೆ. ಈ ರೀತಿಯ ಅಪ್ಲಿಕೇಷನ್​ಗಳನ್ನು ಪ್ರಚಾರದಿಂದ ಯುವ ಪೀಳಿಗೆಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಪ್ರತಿಭಟನಕಾರರು ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣಕ್ಕೆ ಕೆಲವರು ಶಾರುಖ್ ಖಾನ್ ಅವರ ಮನೆ (ಮನ್ನತ್) ಹೊರಗೆ ಪ್ರತಿಭಟಿಸಲು ಪ್ರಯತ್ನಿಸಿದ್ದಾರೆ. ‘ಮನ್ನತ್’ ಹೊರಗೆ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಹೆಚ್ಚಿತು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕ್ರೇಜ್​; 21 ದಿನ ಮೊದಲೇ ಬುಕಿಂಗ್ ಓಪನ್

ಈ ಬಗ್ಗೆ ಮಾತನಾಡಿರುವ ಅನ್‌ಟಚ್ ಯೂತ್ ಫೌಂಡೇಶನ್ ಅಧ್ಯಕ್ಷ ಕೃಷ್ಣ ಚಂದ್ರ ಅಡಾಲ್, ‘ಶಾರುಖ್ ಅವರಂತಹ ದೊಡ್ಡ ಸ್ಟಾರ್​​ಗಳ ಮಾತುಗಳನ್ನು ಜನ ಕೇಳುತ್ತಾರೆ. ಅವರು ಅನೇಕ ಜೂಜಿನ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ಯುವ ಪೀಳಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇಂತಹ ಜೂಜಿನ ಅಪ್ಲಿಕೇಶನ್‌ಗಳನ್ನು ಅವರು ಪ್ರಚಾರ ಮಾಡಬಾರದು. ಇದನ್ನು ನಿಲ್ಲಿಸದಿದ್ದರೆ ನಾವು ಮತ್ತೆ ಮತ್ತೆ ಪ್ರತಿಭಟನೆ ಮಾಡಬೇಕಾಗುತ್ತದೆ. ಅಪ್ರಾಪ್ತರು ಜೂಜಾಡುವುದನ್ನು ಪೊಲೀಸರು ಕಂಡರೆ ಬಂಧಿಸುತ್ತಾರೆ. ದೊಡ್ಡ ತಾರೆಯರು ಇದು ತಪ್ಪು ಎಂದು ತಿಳಿದೂ ಅದನ್ನು ಪ್ರೋತ್ಸಾಹಿಸುತ್ತಾರೆ’ ಕೃಷ್ಣಚಂದ್ರ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:55 am, Mon, 28 August 23

ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ