AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಂದೂ ಧರ್ಮಕ್ಕೆ ಮತಾಂತರ ಆಗಿಲ್ಲ, ಹೆಸರು ಬದಲಿಸಿಲ್ಲ’; ಉರ್ಫಿ ಜಾವೇದ್ ಸ್ಪಷ್ಟನೆ

ಬಟ್ಟೆಯ ಕಾರಣಕ್ಕೆ ಉರ್ಫಿ ಜಾವೇದ್ ಅವರು ಸುಲಭಕ್ಕೆ ಟಾರ್ಗೆಟ್ ಆಗುತ್ತಾರೆ. ಆದರೆ ತಮ್ಮ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವುದನ್ನು ಅವರು ಸಹಿಸುವುದಿಲ್ಲ. ಮಹಿಳೆಯೊಬ್ಬರು ಉರ್ಫಿ ಜಾವೇದ್ ಧರ್ಮದ ಬಗ್ಗೆ ವದಂತಿ ಹಬ್ಬಿಸಿದ್ದರು. ಆ ಮಹಿಳೆಗೆ ಉರ್ಫಿ ಜಾವೇದ್ ಅವರು ಸರಿಯಾಗಿ ಚಳಿ ಬಿಡಿಸಿದ್ದಾರೆ.

‘ಹಿಂದೂ ಧರ್ಮಕ್ಕೆ ಮತಾಂತರ ಆಗಿಲ್ಲ, ಹೆಸರು ಬದಲಿಸಿಲ್ಲ’; ಉರ್ಫಿ ಜಾವೇದ್ ಸ್ಪಷ್ಟನೆ
Uorfi Javed
ಮದನ್​ ಕುಮಾರ್​
|

Updated on: Jun 29, 2026 | 7:53 PM

Share

ಮುಖ್ಯಾಂಶಗಳು

  • ಮತಾಂತರದ ಸುಳ್ಳು ಸುದ್ದಿ ಹಬ್ಬಿಸಿದ ಮಹಿಳೆಗೆ ಉರ್ಫಿ ಜಾವೇದ್ ಕ್ಲಾಸ್.
  • ‘ನಾನು ಹಿಂದೂ ಧರ್ಮಕ್ಕೆ ಮತಾಂತರ ಆಗಿಲ್ಲ’ ಎಂದು ನಟಿಯ ಸ್ಪಷ್ಟನೆ.
  • ‘ಯಾವುದೇ ಧರ್ಮವನ್ನು ನಾನು ನಂಬಲ್ಲ’: ಧೈರ್ಯವಾಗಿ ಹೇಳಿದ ಉರ್ಫಿ.

ತಮ್ಮ ವಿಭಿನ್ನ ಫ್ಯಾಷನ್ ಸ್ಟೈಲ್ ಹಾಗೂ ಮುಕ್ತ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ನಟಿ, ಸೋಶಿಯಲ್ ಮೀಡಿಯಾ ಸ್ಟಾರ್ ಉರ್ಫಿ ಜಾವೇದ್ (Uorfi Javed) ಬಗ್ಗೆ ಒಂದು ಗಾಸಿಪ್ ಹಬ್ಬಿತ್ತು. ಅವರು ಹಿಂದೂ ಧರ್ಮಕ್ಕೆ (Hinduism) ಮತಾಂತರವಾಗಿದ್ದಾರೆ ಹಾಗೂ ತಮ್ಮ ಹೆಸರನ್ನು ರೀತಾ ಭಾರದ್ವಾಜ್ ಎಂದು ಬದಲಾಯಿಸಿಕೊಂಡಿದ್ದಾರೆ ಎಂದು ವದಂತಿ ಹಬ್ಬಿಸಲಾಗಿತ್ತು. ಆದರೆ ಅದನ್ನು ಅವರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಈ ಕುರಿತು ಸುಳ್ಳು ಸುದ್ದಿ ಹರಡಿದ ಮಾಜಿ ಮಹಿಳಾ ಪತ್ರಕರ್ತೆಯೊಬ್ಬರ ವಿರುದ್ಧ ಉರ್ಫಿ ಜಾವೇದ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಡಿಡಿ ನ್ಯೂಸ್‌ನಲ್ಲಿ ಕೆಲಸ ಮಾಡಿದ್ದಾಗಿ ಹೇಳಿಕೊಂಡಿರುವ ಮೀತಾ ಚೌಧರಿ ಎಂಬ ಕಂಟೆಂಟ್ ಕ್ರಿಯೇಟರ್ ಇತ್ತೀಚೆಗೆ ಉರ್ಫಿ ಜಾವೇದ್ ಅವರ ವಸ್ತ್ರವಿನ್ಯಾಸವನ್ನು ಟೀಕಿಸಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ, ‘ಉರ್ಫಿ ಕೇವಲ ಅರೆನಗ್ನ ಬಟ್ಟೆ ಧರಿಸುವುದರಿಂದಲೇ ಫೇಮಸ್ ಆಗಿದ್ದಾರೆ. ಈಗ ಅವರು ಇಸ್ಲಾಂ ಧರ್ಮ ಬಿಟ್ಟು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ತಮ್ಮ ಹೆಸರನ್ನು ರೀತಾ ಭಾರದ್ವಾಜ್ ಅಂತ ಬದಲಾಯಿಸಿಕೊಂಡಿದ್ದಾರೆ’ ಎಂದು ಹೇಳಿದ್ದರು. ಜೊತೆಗೆ ‘ಉರ್ಫಿ ಸ್ವಲ್ಪ ಲಜ್ಜೆಯನ್ನೂ ಕಲಿಯಬೇಕು’ ಎಂದು ಕಿಡಿಕಾರಿದ್ದರು.

ಈ ವಿಡಿಯೋಗೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಖಾರವಾಗಿ ಪ್ರತಿಕ್ರಿಯಿಸಿರುವ ಉರ್ಫಿ ಜಾವೇದ್, ‘ಇಂತಹ ಮೂರ್ಖರೆಲ್ಲಾ ತಮ್ಮನ್ನು ತಾವೇ ಪತ್ರಕರ್ತರು ಎಂದು ಕರೆದುಕೊಳ್ಳುತ್ತಾರೆ. ಆಂಟಿ, ದಯವಿಟ್ಟು ಸ್ವಲ್ಪ ಹೋಮ್‌ವರ್ಕ್ ಮಾಡಿಕೊಳ್ಳಿ. ನಾನು ಎಂದಿಗೂ ನನ್ನ ಧರ್ಮವನ್ನಾಗಲಿ ಅಥವಾ ಹೆಸರನ್ನಾಗಲಿ ಬದಲಾಯಿಸಿಲ್ಲ. ಅಸಲಿಗೆ ನಾನು ಯಾವುದೇ ಧರ್ಮವನ್ನು ನಂಬುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ‘ನಾನು ಕೇವಲ ಬಟ್ಟೆಯ ವಿಷಯದಲ್ಲಿ ಮಾತ್ರವಲ್ಲ, ನನ್ನ ಮಾತುಗಳಲ್ಲೂ ನೇರ ಮತ್ತು ನಗ್ನ. ಆದರೆ ಇಂದು ನನಗೆ ವಾದ ಮಾಡುವ ಮೂಡ್ ಇಲ್ಲ. ನಾನು ಎಷ್ಟು ಶೋಗಳಲ್ಲಿ ನಟಿಸಿದ್ದೇನೆ ಎಂದು ಒಮ್ಮೆ ಗೂಗಲ್ ಮಾಡಿ ನೋಡಿ. ನಿಮ್ಮ ಕೆಟ್ಟ ಮೇಕಪ್ ಹಾಗೂ ನಿಮ್ಮ ಪತ್ರಿಕೋದ್ಯಮವನ್ನು ನೋಡಿ ನನಗೆ ನಾಚಿಕೆಯಾಗುತ್ತಿದೆ. ನನ್ನನ್ನು ನಿಂದಿಸಬೇಕಿದ್ದರೆ ಧೈರ್ಯವಾಗಿ ಮಾಡಿ, ಆದರೆ ಸುಳ್ಳು ಸುದ್ದಿಗಳನ್ನು ಹರಡಬೇಡಿ’ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಮುಖ ವಿಪರೀತ ಊದಿಕೊಂಡಿದ್ದಕ್ಕೆ ಅಸಲಿ ಕಾರಣ ಬಿಚ್ಚಿಟ್ಟ ನಟಿ ಉರ್ಫಿ ಜಾವೇದ್

ಉರ್ಫಿ ಜಾವೇದ್ ಪ್ರತ್ಯುತ್ತರ ನೀಡಿದ ಬೆನ್ನಲ್ಲೇ, ಆ ಮಹಿಳಾ ಕಂಟೆಂಟ್ ಕ್ರಿಯೇಟರ್ ಉರ್ಫಿಗೆ ಅತ್ಯಂತ ಕಠಿಣವಾದ ಮೆಸೇಜ್‌ಗಳನ್ನು ಕಳುಹಿಸಿ, ನಂತರ ವಿಡಿಯೋ ಡಿಲೀಟ್ ಮಾಡಿ ಬ್ಲಾಕ್ ಮಾಡಿದ್ದಾರೆ ಎಂದು ಉರ್ಫಿ ತಿಳಿಸಿದ್ದಾರೆ. ‘ಆಂಟಿಗೆ ತುಂಬಾ ಸಿಟ್ಟು ಬಂದಿದೆ. ಆದರೂ ಅವರ ಮಾಹಿತಿ ತಪ್ಪು. ಅವರು ನನಗೆ ಅತ್ಯಂತ ಬೇಸರ ತರಿಸುವಂತಹ ಮೆಸೇಜ್‌ಗಳನ್ನು ಕಳುಹಿಸಿದ್ದಾರೆ. ಅವುಗಳನ್ನು ನನಗೆ ಇಲ್ಲಿ ಅಪ್‌ಲೋಡ್ ಮಾಡಲು ಕೂಡ ಸಾಧ್ಯವಾಗುತ್ತಿಲ್ಲ. ಬಳಿಕ ವಿಡಿಯೋ ಡಿಲೀಟ್ ಮಾಡಿ ನನ್ನನ್ನು ಬ್ಲಾಕ್ ಮಾಡಿದ್ದಾರೆ. ನಾನು ಅವರ ವಿರುದ್ಧ ಹೆಚ್ಚು ಅವಮರ್ಯಾದೆಯಿಂದ ವರ್ತಿಸಲು ಇಷ್ಟಪಡುವುದಿಲ್ಲ. ಏಕೆಂದರೆ ಅವರು ನೋಡಲು ನಮ್ಮ ತಾತನ ತರಹ ಕಾಣಿಸುತ್ತಾರೆ’ ಎಂದು ಉರ್ಫಿ ಜಾವೇದ್ ಲೇವಡಿ ಮಾಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!