AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Trailer: ಕಬ್ಜ ಟ್ರೈಲರ್ ಬಿಡುಗಡೆ, ಕತ್ತರಿಸುವ ಕೈಗಳು ಬರೆದ ಇತಿಹಾಸವಿದು, ಎರಡು ಶೇಡ್​ನಲ್ಲಿ ಉಪ್ಪಿ

ಉಪೇಂದ್ರ ನಟಿಸಿ, ಆರ್ ಚಂದ್ರು ನಿರ್ದೇಶಿಸಿರುವ ಕಬ್ಜ ಸಿನಿಮಾದ ಹಿಂದಿ ಟ್ರೈಲರ್ ಬಿಡುಗಡೆ ಆಗಿದ್ದು, ಟ್ರೈಲರ್ ಅನ್ನು ಅಮಿತಾಬ್ ಬಚ್ಚನ್ ಬಿಡುಗಡೆ ಮಾಡಿದ್ದಾರೆ.

Kabzaa Trailer: ಕಬ್ಜ ಟ್ರೈಲರ್ ಬಿಡುಗಡೆ, ಕತ್ತರಿಸುವ ಕೈಗಳು ಬರೆದ ಇತಿಹಾಸವಿದು, ಎರಡು ಶೇಡ್​ನಲ್ಲಿ ಉಪ್ಪಿ
ಕಬ್ಜ ಟ್ರೈಲರ್​ನಲ್ಲಿ ಉಪ್ಪಿ
ಮಂಜುನಾಥ ಸಿ.
|

Updated on:Mar 04, 2023 | 8:39 PM

Share

ಉಪೇಂದ್ರ ನಟಿಸಿ, ಆರ್ ಚಂದ್ರು ನಿರ್ದೇಶನ ಮಾಡಿರುವ ‘ಕಬ್ಜ‘ (Kabzaa) ಸಿನಿಮಾದ ಹಿಂದಿ ಟ್ರೈಲರ್ (Trailer) ಬಿಡುಗಡೆ ಆಗಿದೆ. ಟ್ರೈಲರ್ ಅನ್ನು ಬಾಲಿವುಡ್ ದಿಗ್ಗಜ ಅಮಿತಾಬ್ ಬಚ್ಚನ್ (Amitabh Bachchan) ಬಿಡುಗಡೆ ಮಾಡಿರುವುದು ವಿಶೇಷ. ಕನ್ನಡ ಸೇರಿದಂತೆ ಇನ್ನಿತರೆ ಭಾಷೆಗಳಲ್ಲಿ ಸಿನಿಮಾದ ಟ್ರೈಲರ್ ಇನ್ನಷ್ಟೆ ಬಿಡುಗಡೆ ಆಗಬೇಕಿದೆ. ಪ್ರಸ್ತುತ ಬಿಡುಗಡೆ ಆಗಿರುವ ಹಿಂದಿ ಟ್ರೈಲರ್ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಯೂಟ್ಯೂಬ್ ಚಾನೆಲ್​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಮೂರು ನಿಮಿಷಕ್ಕೆ ಆರು ಸೆಕೆಂಡ್ ಕಡಿಮೆ ಇರುವ ಟ್ರೈಲರ್​ನಲ್ಲಿ ನಾಯಕ ನಟ ಉಪೇಂದ್ರ ಜೊತೆಗೆ ಹಲವು ಪಾತ್ರಗಳು ಗಮನ ಸೆಳೆಯುತ್ತವೆ. ಕತೆಯ ಬಗ್ಗೆ ಕುತೂಹಲವನ್ನು ಉಂಟು ಮಾಡುವಂತೆ ಟ್ರೈಲರ್ ಅನ್ನು ಪ್ರೆಸೆಂಟ್ ಮಾಡಿದ್ದಾರೆ ನಿರ್ದೇಶಕ ಆರ್.ಚಂದ್ರು.

ಸಿನಿಮಾದಲ್ಲಿ ಬ್ರಿಟೀಷ್ ಕಾಲದ ಕತೆ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯಾ ನಂತರದ ಕತೆ ಇರುವ ಸುಳಿವನ್ನು ಟ್ರೈಲರ್ ನೀಡಿದೆ. ದೇಶ ಪ್ರೇಮ, ವ್ಯವಸ್ಥೆಯ ವಿರುದ್ಧ ಹೋರಾಟ, ಪಾತಕ ಲೋಕ, ತಾಯಿ ಸೆಂಟಿಮೆಂಟ್, ಬ್ರದರ್ ಸೆಂಟಿಮೆಂಟ್ ಎಲ್ಲವನ್ನೂ ‘ಕಬ್ಜ’ನಲ್ಲಿ ಆರ್ ಚಂದ್ರು ಟಚ್ ಮಾಡಿದ್ದಾರೆಂಬುದು ಟ್ರೈಲರ್​ನಿಂದ ತಿಳಿದು ಬರುತ್ತಿದೆ.

ಟ್ರೈಲರ್​ನಲ್ಲಿ ಕುತೂಹಲ ಹುಟ್ಟಿಸಿರುವ ಸಂಗತಿಯೆಂದರೆ ಉಪೇಂದ್ರ ಪೊಲೀಸ್ ಧಿರಿಸಿನಲ್ಲಿ (ಏರ್​ಫೋರ್ಸ್ ಅಧಿಕಾರಿ) ಕಾಣಿಸಿಕೊಂಡಿರುವುದು. ಈ ವರೆಗೆ ಬಿಡುಗಡೆ ಆಗಿರುವ ಕಬ್ಜ ಸಿನಿಮಾದ ಪೋಸ್ಟರ್, ಟೀಸರ್​ಗಳಲ್ಲಿ ಗ್ಯಾಂಗ್​ಸ್ಟರ್ ಅವತಾರದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದರು. ಆದರೆ ಟ್ರೈಲರ್​ನಲ್ಲಿ ಪೊಲೀಸ್ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಮಚ್ಚು ಹಿಡಿದು ವೈರಿಗಳ ರುಂಡವನ್ನೂ ಚೆಂಡಾಡುತ್ತಿದ್ದಾರೆ. ಈ ವೈರುಧ್ಯ ಕತೆಯ ಬಗ್ಗೆ ಕುತೂಹಲ ಹೆಚ್ಚುವಂತೆ ಮಾಡಿದೆ. ಇನ್ನು ನಟ ಸುದೀಪ್ ಸಹ ಪೊಲೀಸ್ ಸಮವಸ್ತ್ರದಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ. ಟ್ರೈಲರ್​ನ ಆರಂಭದಲ್ಲಿಯೇ ವ್ಯಕ್ತಿಯೊಬ್ಬ ಗನ್ ಹಿಡಿದು ನಡೆಯುವ ದೃಶ್ಯವಿದೆ. ಆ ನಡಿಗೆಯೆಂದಲೇ ಗೊತ್ತಾಗುತ್ತದೆ ಅದು ಶಿವಣ್ಣನೆಂದು. ಆದರೆ ಟ್ರೈಲರ್​ನಲ್ಲಿ ಅವರ ಮುಖ ತೋರಿಸಿಲ್ಲ.

ಉಪೇಂದ್ರ, ಸುದೀಪ್ ಮಾತ್ರವೇ ಅಲ್ಲದೆ, ಇತರೆ ಪಾತ್ರಗಳಿಗಳಿಗೂ ಟ್ರೈಲರ್​ನಲ್ಲಿ ಸ್ಪೇಸ್ ನೀಡಲಾಗಿದೆ. ಜನಪ್ರಿಯ ನಟ ಮುರಳಿ ಶರ್ಮಾ, ತೆಲುಗಿನ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇನ್ನೂ ಕೆಲವು ವಿಲನ್​ಗಳನ್ನು ಭಯಾನಕವಾಗಿ ತೋರಿಸಿದ್ದಾರೆ.  ರಕ್ತ ಹರಿಯುತ್ತಿರುವ, ಬಂದೂಕುಗಳು ಅಬ್ಬರಿಸುವ, ಬಾಂಬ್​ಗಳು ಸಿಡಿಯುವ ದೃಶ್ಯಗಳು ಸಾಕಷ್ಟಿವೆ. ನಾಯಕಿ ಶ್ರಿಯಾ ಶ್ರೀನಿವಾಸ್ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಹಿಂದಿ ಟ್ರೈಲರ್ ಅನ್ನು ಟ್ವಿಟ್ಟರ್ ಮೂಲಕ ಬಿಡುಗಡೆ ಮಾಡಿರುವ ನಟ ಅಮಿತಾಬ್ ಬಚ್ಚನ್, ‘ಕಬ್ಜ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡುತ್ತಿರುವುದಕ್ಕೆ ಸಂತೋಶವಾಗಿದೆ. ಸಿನಿಮಾವನ್ನು ನನ್ನ ಮಿತ್ರ ಆನಂದ್ ಪಂಡಿತ್ ನಿರ್ಮಾಣ ಮಾಡಿದ್ದು, ಆರ್ ಚಂದ್ರು ನಿರ್ದೇಶಿಸಿದ್ದಾರೆ. ಉಪೇಂದ್ರ, ಶೀವರಾಜ್ ಕುಮಾರ್, ಸುದೀಪ್ ಅವರಿಗೆ ಶುಭ ಹಾರೈಕೆಗಳು ಎಂದಿದ್ದಾರೆ. ಸಿನಿಮಾವು ಮಾರ್ಚ್ 13 ರಂದು ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Sat, 4 March 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ