AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urfi Javed: ‘ನಾನು ನಿನ್ನ ಮಗಳಾ?’: ಬಟ್ಟೆ ಬಗ್ಗೆ ಬುದ್ಧಿ ಹೇಳಲು ಬಂದ ವ್ಯಕ್ತಿಗೆ ತಿರುಗೇಟು ನೀಡಿದ ಉರ್ಫಿ ಜಾವೇದ್​

Urfi Javed Viral Video: ‘ಇಂಥ ಬಟ್ಟೆ ಧರಿಸಿ ಭಾರತದ ಹೆಸರು ಹಾಳು ಮಾಡ್ತೀರಲ್ಲ..’ ಎಂದು ವ್ಯಕ್ತಿಯೊಬ್ಬರು ಬುದ್ಧಿಮಾತು ಹೇಳಿದ್ದಾರೆ. ಅದು ಉರ್ಫಿ ಜಾವೇದ್​ಗೆ ಇಷ್ಟ ಆಗಿಲ್ಲ. ಬುದ್ಧಿಮಾತು ಹೇಳಲು ಬಂದ ವ್ಯಕ್ತಿ ವಿರುದ್ಧ ಅವರು ಗರಂ ಆಗಿದ್ದಾರೆ.

Urfi Javed: ‘ನಾನು ನಿನ್ನ ಮಗಳಾ?’: ಬಟ್ಟೆ ಬಗ್ಗೆ ಬುದ್ಧಿ ಹೇಳಲು ಬಂದ ವ್ಯಕ್ತಿಗೆ ತಿರುಗೇಟು ನೀಡಿದ ಉರ್ಫಿ ಜಾವೇದ್​
ಉರ್ಫಿ ಜಾವೇದ್​
ಮದನ್​ ಕುಮಾರ್​
|

Updated on: Jul 25, 2023 | 3:19 PM

Share

ನಟಿ ಉರ್ಫಿ ಜಾವೇದ್​ (Urfi Javed) ಅವರ ಒಂದಿಲ್ಲೊಂದು ವಿಡಿಯೋ ಆಗಾಗ ವೈರಲ್​ ಆಗುತ್ತಲೇ ಇರುತ್ತದೆ. ಅವರು ಸುದ್ದಿ ಆಗುವುದೇ ಬಟ್ಟೆಗಳ ಕಾರಣಕ್ಕೆ ಎಂದರೆ ತಪ್ಪಿಲ್ಲ. ಪ್ರತಿ ದಿನ ಅವರು ಚಿತ್ರ ವಿಚಿತ್ರವಾದ ಬಟ್ಟೆ (Urfi Javed Dress) ಧರಿಸಿ ಪೋಸ್​ ನೀಡುತ್ತಾರೆ. ತುಂಬ ಬೋಲ್ಡ್​ ಆದಂತಹ ಫೋಟೋಗಳನ್ನು (Urfi Javed Photo) ಅವರು ಹಂಚಿಕೊಳ್ಳುತ್ತಾರೆ. ಇದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದ್ದೇ ಹೆಚ್ಚು. ಸೋಶಿಯಲ್​ ಮೀಡಿಯಾದಲ್ಲಿ ಉರ್ಫಿ ಜಾವೇದ್​ ಅವರ ಬಟ್ಟೆ ಬಗ್ಗೆ ಟ್ರೋಲ್​ ಆಗುತ್ತಲೇ ಇರುತ್ತದೆ. ಇತ್ತೀಚೆಗೆ ಅವರಿಗೆ ವ್ಯಕ್ತಿಯೊಬ್ಬರು ಬುದ್ಧಿಮಾತು ಹೇಳಲು ಬಂದಿದ್ದಾರೆ. ಆ ವ್ಯಕ್ತಿಗೆ ಉರ್ಫಿ ಜಾವೇದ್​ ಅವರು ಸ್ಥಳದಲ್ಲೇ ತಿರುಗೇಟು ನೀಡಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಉರ್ಫಿ ಜಾವೇದ್​ ಅವರು ಕಾಣಿಸಿಕೊಂಡರು. ಅವರ ಫೋಟೋ ಮತ್ತು ವಿಡಿಯೋಗಳನ್ನು ಸೆರೆ ಹಿಡಿಯಲು ಪಾಪರಾಜಿಗಳು ಮುತ್ತಿಕೊಂಡರು. ಉರ್ಫಿಯ ಬಟ್ಟೆ ನೋಡಿ ಅಲ್ಲಿದ್ದ ವ್ಯಕ್ತಿಯೊಬ್ಬರು ಕೋಪಗೊಂಡಿದ್ದಾರೆ. ‘ಇಂಥ ಬಟ್ಟೆ ಧರಿಸಿ ಭಾರತದ ಹೆಸರು ಹಾಳು ಮಾಡ್ತೀರಲ್ಲ..’ ಎಂದು ಆ ವ್ಯಕ್ತಿ ಬುದ್ಧಿಮಾತು ಹೇಳಿದ್ದಾರೆ. ಅದು ಉರ್ಫಿ ಜಾವೇದ್​ಗೆ ಇಷ್ಟ ಆಗಿಲ್ಲ. ಬುದ್ಧಿಮಾತು ಹೇಳಲು ಬಂದ ವ್ಯಕ್ತಿ ವಿರುದ್ಧ ಉರ್ಫಿ ಜಾವೇದ್​ ಅವರು ಗರಂ ಆಗಿದ್ದಾರೆ.

‘ನಾನು ನಿನ್ನ ಮಗಳಾ? ಅಲ್ಲಾ ತಾನೇ? ನನಗೆ ಅಪ್ಪನಾಗಲು ಬರಬೇಡ’ ಎಂದು ಉರ್ಫಿ ಜಾವೇದ್​ ಅವರು ಖಡಕ್​ ಆಗಿ ತಿರುಗೇಟು ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಅನೇಕರು ಉರ್ಫಿ ಜಾವೇದ್​ಗೆ ಬೆಂಬಲ ನೀಡುತ್ತಿದ್ದಾರೆ. ಯಾವ ರೀತಿ ಬಟ್ಟೆ ಧರಿಸಬೇಕು ಎಂಬ ಸ್ವತಂತ್ರ್ಯ ಉರ್ಫಿ ಜಾವೇದ್​ಗೆ ಇದೆ ಎಂದು ನೆಟ್ಟಿಗರು ಸಪೋರ್ಟ್​​ ಮಾಡಿದ್ದಾರೆ. ಇನ್ನೂ ಕೆಲವರು ಎಂದಿನಂತೆ ಉರ್ಫಿ ಜಾವೇದ್​ಗೆ ಕಮೆಂಟ್​ಗಳ ಮೂಲಕ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Urfi Javed: ಟೊಮ್ಯಾಟೋವನ್ನೇ ಆಭರಣವಾಗಿ ಧರಿಸಿದ ಉರ್ಫಿ ಜಾವೇದ್​; ಇದೇ ಈಗ ಬಂಗಾರ

ಹಿಂದಿ ಕಿರುತೆರೆಯಲ್ಲಿ ಮಿಂಚಬೇಕು ಎಂಬುದು ಉರ್ಫಿ ಜಾವೇದ್​ ಅವರ ಆಸೆ ಆಗಿತ್ತು. ಅದಕ್ಕೆ ತಕ್ಕಂತೆ ಅವರಿಗೆ ಅವಕಾಶ ಸಿಗಲಿಲ್ಲ. ‘ಬಿಗ್​ ಬಾಸ್​ ಒಟಿಟಿ’ ಮೊದಲ ಸೀಸನ್​ನಲ್ಲಿ ಸ್ಪರ್ಧಿಸಿದ ಬಳಿಕ ಅವರಿಗೆ ಖ್ಯಾತಿ ಹೆಚ್ಚಿತು. ಆದರೆ ಅದರ ನಂತರ ಅವರಿಗೆ ಸಿನಿಮಾದಲ್ಲಾಗಲೀ, ಸೀರಿಯಲ್​ನಲ್ಲಾಗಲೀ ಅವಕಾಶ ಸಿಗಲಿಲ್ಲ. ಅದರ ಬದಲು ಬೋಲ್ಡ್​ ಆದಂತಹ ಬಟ್ಟೆಗಳನ್ನು ಧರಿಸಿ ಪೋಸ್​ ನೀಡುವುದನ್ನೇ ಅವರು ನಿತ್ಯದ ಕಾಯಕ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ