AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urfi Javed: ‘ಇಂಥ ಬಟ್ಟೆ ಹಾಕಿದ್ದಕ್ಕೆ ಮುಸ್ಲಿಮರು ಮನೆ ಕೊಡ್ತಿಲ್ಲ, ನಾನು ಮುಸ್ಲಿಂ ಅಂತ ಹಿಂದೂಗಳು ಮನೆ ಕೊಡಲ್ಲ’: ಉರ್ಫಿ

Urfi Javed Dress: ಬಟ್ಟೆಗೆ ಸಂಬಂಧಿಸಿದಂತೆಯೇ ಉರ್ಫಿ ಜಾವೇದ್​ ಅನೇಕ ಬಾರಿ ಕಿರಿಕ್ ಮಾಡಿಕೊಂಡಿದ್ದುಂಟು. ಇದರಿಂದ ಅವರಿಗೆ ಈಗ ಮುಂಬೈನಲ್ಲಿ ಬಾಡಿಗೆ ಮನೆ ಹುಡುಕುವುದು ಕಷ್ಟವಾಗಿದೆ.

Urfi Javed: ‘ಇಂಥ ಬಟ್ಟೆ ಹಾಕಿದ್ದಕ್ಕೆ ಮುಸ್ಲಿಮರು ಮನೆ ಕೊಡ್ತಿಲ್ಲ, ನಾನು ಮುಸ್ಲಿಂ ಅಂತ ಹಿಂದೂಗಳು ಮನೆ ಕೊಡಲ್ಲ’: ಉರ್ಫಿ
ಉರ್ಫಿ ಜಾವೇದ್
ಮದನ್​ ಕುಮಾರ್​
| Edited By: |

Updated on:Jan 26, 2023 | 12:37 PM

Share

ಬೋಲ್ಡ್​ ಬೆಡಗಿ ಉರ್ಫಿ ಜಾವೇದ್​ (Urfi Javed) ಅವರಿಗೆ ಹೊಸ ಸಮಸ್ಯೆ ಶುರುವಾಗಿದೆ. ಮುಂಬೈನಲ್ಲಿ ವಾಸಿಸಲು ಅವರಿಗೆ ಜಾಗವೇ ಸಿಗುತ್ತಿಲ್ಲ! ಹಾಗಂತ ಇದು ಗಾಸಿಪ್​ ಅಲ್ಲ, ಸ್ವತಃ ಉರ್ಫಿ ಜಾವೇದ್​ ಅವರೇ ಈ ಬಗ್ಗೆ ಬಹಿರಂಗವಾಗಿ ಬರೆದುಕೊಂಡಿದ್ದಾರೆ. ಚಿತ್ರ ವಿಚಿತ್ರವಾಗಿ ಉರ್ಫಿ ಜಾವೇದ್​ ಅವರು ಡ್ರೆಸ್​ (Urfi Javed Dress) ಮಾಡಿಕೊಳ್ಳುತ್ತಾರೆ. ಇದರಿಂದ ಅವರಿಗೆ ಸಾಕಷ್ಟು ಪ್ರಚಾರ ಸಿಕ್ಕಿದೆ. ಅದರ ಜೊತೆಗೆ ಅನೇಕ ತೊಂದರೆಗಳು ಕೂಡ ಎದುರಾಗಿವೆ. ಇಂಥ ಬಟ್ಟೆ ಹಾಕಿದ್ದಕ್ಕಾಗಿ ಯಾವುದೇ ಮುಸ್ಲಿಮರು ಕೂಡ ಉರ್ಫಿ ಜಾವೇದ್​ ಅವರಿಗೆ ಬಾಡಿಗೆ ಮನೆ ನೀಡುತ್ತಿಲ್ಲ. ಅವರು ಮುಸ್ಲಿಂ ಎಂಬ ಕಾರಣಕ್ಕೆ ಹಿಂದೂಗಳು (Hindus) ಕೂಡ ಉರ್ಫಿಗೆ ಮನೆ ನೀಡುತ್ತಿಲ್ಲ! ಈ ಕುರಿತು ಉರ್ಫಿ ಜಾವೇದ್​ ಮಾಡಿರುವ ಟ್ವೀಟ್​ ವೈರಲ್​ ಆಗಿದೆ.

ಬಟ್ಟೆಗಳಿಗೆ ಸಂಬಂಧಿಸಿದಂತೆಯೇ ಉರ್ಫಿ ಜಾವೇದ್​ ಅವರು ಈಗಾಗಲೇ ಅನೇಕ ಕಿರಿಕ್​ಗಳನ್ನು ಮಾಡಿಕೊಂಡಿದ್ದಾರೆ. ಇದರಿಂದ ಅವರಿಗೆ ಈಗ ಮುಂಬೈನಲ್ಲಿ ಬಾಡಿಗೆ ಮನೆ ಹುಡುಕುವುದು ಕಷ್ಟವಾಗಿದೆ. ‘ನಾನು ಈ ರೀತಿ ಡ್ರೆಸ್​ ಮಾಡಿಕೊಳ್ಳುತ್ತೇನೆ ಅಂತ ಮುಸ್ಲಿಮರು ನನಗೆ ಬಾಡಿಗೆ ಮನೆ ಕೊಡುತ್ತಿಲ್ಲ. ನಾನು ಮುಸ್ಲಿಂ ಆಗಿರುವುದರಿಂದ ಹಿಂದೂಗಳು ಕೂಡ ನನಗೆ ಮನೆ ಕೊಡುತ್ತಿಲ್ಲ. ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂಬುದು ಇನ್ನೂ ಕೆಲವು ಮನೆಗಳ ಮಾಲೀಕರ ಚಿಂತೆಗೆ ಕಾರಣ ಆಗಿದೆ. ಮುಂಬೈನಲ್ಲಿ ಬಾಡಿಗೆಗೆ ಅಪಾರ್ಟ್​ಮೆಂಟ್​ ಪಡೆಯುವುದು ತುಂಬ ಕಷ್ಟವಾಗಿದೆ’ ಎಂದು ಉರ್ಫಿ ಜಾವೇದ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
ಅಶ್ಲೀಲ​ ವೆಬ್​ಸೈಟ್​ನಲ್ಲಿ ಉರ್ಫಿ ಜಾವೇದ್​ ಫೋಟೋ; ಪ್ರತಿ ದಿನ ರೇಪ್​ ಬೆದರಿಕೆ: ಶಾಕಿಂಗ್​ ವಿಚಾರ ತೆರೆದಿಟ್ಟ ನಟಿ
Image
ಪ್ಯಾಂಟ್​ ಮೇಲೆ ಪ್ಯಾಂಟ್​ ಅಂಟಿಸಿಕೊಂಡು ಬಂದ ಉರ್ಫಿ ಜಾವೇದ್​; ಇಲ್ಲಿದೆ ವಿಚಿತ್ರ ಅವತಾರದ ವಿಡಿಯೋ
Image
‘ನಂಗೆ ಮರ್ಯಾದೆ ಕೊಡಲ್ಲ, ಸೆಲೆಬ್ರಿಟಿಗಳೇ ಕೆಟ್ಟ ಕಮೆಂಟ್​​ ಮಾಡ್ತಾರೆ’: ಎಲ್ಲವನ್ನೂ ಹೇಳಿಕೊಂಡ ಉರ್ಫಿ ಜಾವೇದ್​
Image
‘ಮುಸ್ಲಿಂ ಹುಡುಗನನ್ನು ಮದುವೆ ಆಗಲ್ಲ’: ಬಲವಾದ ಕಾರಣ ನೀಡಿದ ಮುಸ್ಲಿಂ ನಟಿ ಉರ್ಫಿ ಜಾವೇದ್​

ಮಾಜಿ ಬಿಗ್​ ಬಾಸ್ ಸ್ಪರ್ಧಿ ಆಗಿರುವ ಉರ್ಫಿ ಜಾವೇದ್​ ಅವರು ಧರಿಸುವ ಬಟ್ಟೆಗಳ ಬಗ್ಗೆ ಈಗಾಗಲೇ ಅನೇಕರು ತಕರಾರು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರದ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಚಿತ್ರಾ ಕಿಶೋರ್​ ವಾಘ್​ ಅವರು ಉರ್ಫಿ ಜಾವೇದ್​ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾರ್ವಜನಿಕ ಸ್ಥಳದಲ್ಲಿ ಅರೆ ಬೆತ್ತಲಾಗಿ ಕಾಣಿಸಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಅದರ ಬೆನ್ನಲ್ಲೇ ಪೊಲೀಸರು ಉರ್ಫಿ ಜಾವೇದ್​ಗೆ ನೋಟಿಸ್​ ನೀಡಿ, ವಿಚಾರಣೆಗೆ ಬರುವಂತೆ ಸೂಚಿಸಿದರು.

ಇದನ್ನೂ ಓದಿ: Honey Singh: ‘ದೇಶದ ಹೆಣ್ಮಕ್ಕಳು ಉರ್ಫಿ ಜಾವೇದ್​ ರೀತಿ ಇರಬೇಕು’: ಅಚ್ಚರಿಯ ಹೇಳಿಕೆ ನೀಡಿದ ಹನಿ ಸಿಂಗ್​

ನೋಟಿಸ್​ ಬಂದ ಬಳಿಕ ಉರ್ಫಿ ಜಾವೇದ್ ಅವರು ಪೊಲೀಸ್​ ಠಾಣೆ ಮೆಟ್ಟಿಲೇರುವಂತಾಯಿತು. 2 ಗಂಟೆಗಳ ಕಾಲ ವಿಚಾರಣೆ ಮಾಡಲಾಯಿತು. ಪೊಲೀಸರು ಕೇಳಿದ ಅನೇಕ ಪ್ರಶ್ನೆಗಳಿಗೆ ಉರ್ಫಿ ಜಾವೇದ್​ ಉತ್ತರ ನೀಡಿದರು. ಪೊಲೀಸ್​ ಆಯುಕ್ತರ ಆದೇಶದ ಮೇರೆಗೆ ಮುಂಬೈನ ಅಂಬೋಲಿ ಠಾಣೆಯ ಪೊಲೀಸರು ಉರ್ಫಿ ಜಾವೇದ್​ ಅವರನ್ನು ವಿಚಾರಣೆಗೆ ಒಳಪಡಿಸಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:45 pm, Wed, 25 January 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್