‘ಬೆಳಗ್ಗೆ ಎದ್ದಾಗ ಮುಖ ದಪ್ಪ ಆಗಿರತ್ತೆ’: ಆರೋಗ್ಯ ಸಮಸ್ಯೆ ಬಗ್ಗೆ ತಿಳಿಸಿದ ಉರ್ಫಿ ಜಾವೇದ್​

ಅರೆಬರೆ ಬಟ್ಟೆ ಹಾಕಿಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಸೆನ್ಸೇಷನ್​ ಸೃಷ್ಟಿ ಮಾಡುತ್ತಿದ್ದ ನಟಿ ಉರ್ಫಿ ಜಾವೇದ್​ ಅವರ ಪರಿಸ್ಥಿತಿ ಈ ರೀತಿ ಆಗಿದೆ. ಅವರ ಮುಖ ಊದಿಕೊಂಡಿದೆ. ಈ ಫೋಟೋಗಳು ವೈರಲ್​ ಆಗಿವೆ. ನಟಿಯ ಈ ಪರಿಸ್ಥಿತಿ ಕಂಡು ನೆಟ್ಟಿಗರು ಬೇರೆ ಬೇರೆ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಉರ್ಫಿಯ ಮುಖದ ಸಮಸ್ಯೆಯ ಬಗ್ಗೆ ಇಲ್ಲಿದೆ ಮಾಹಿತಿ..

‘ಬೆಳಗ್ಗೆ ಎದ್ದಾಗ ಮುಖ ದಪ್ಪ ಆಗಿರತ್ತೆ’: ಆರೋಗ್ಯ ಸಮಸ್ಯೆ ಬಗ್ಗೆ ತಿಳಿಸಿದ ಉರ್ಫಿ ಜಾವೇದ್​
ಉರ್ಫಿ ಜಾವೇದ್​
Follow us
|

Updated on: Jun 03, 2024 | 6:39 PM

ನಟಿ ಉರ್ಫಿ ಜಾವೇದ್​ (Urfi Javed) ಅವರು ಸದಾ ಸುದ್ದಿಯಾಗುವುದು ವಿಚಿತ್ರ ಬಟ್ಟೆಗಳ ಕಾರಣಕ್ಕೆ. ಆದರೆ ಈಗ ಅವರು ಇನ್ನೊಂದು ಕಾರಣದಿಂದ ಸುದ್ದಿ ಆಗಿದ್ದಾರೆ. ಉರ್ಫಿ ಜಾವೇದ್​ ಅವರ ಊದಿಕೊಂಡಿರುವ ಮುಖದ (Urfi Javed swollen face) ಫೋಟೋಗಳು ವೈರಲ್​ ಆಗಿವೆ. ಹಾಗಂತ ಇವು ಲೀಕ್​ ಆದ ಫೋಟೋಗಳಲ್ಲ. ಸ್ವತಃ ಉರ್ಫಿ ಜಾವೇದ್​ ಅವರೇ ಈ ಫೋಟೋಗಳನ್ನು (Urfi Javed Photos) ಹಂಚಿಕೊಂಡಿದ್ದಾರೆ. ತಮ್ಮ ಈ ಸ್ಥಿತಿಗೆ ಕಾರಣ ಏನು ಎಂಬುದನ್ನು ಕೂಡ ಅವರು ಹೇಳಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ. ಆ ಕಾರಣದಿಂದಲೇ ಅವರ ಮುಖ ಊದಿಕೊಂಡಿದೆ. ಆ ಬಗ್ಗೆ ಅವರು ವಿವರ ನೀಡಿದ್ದಾರೆ.

‘ನನ್ನ ಮುಖಕ್ಕೆ ಸಂಬಂಧಿಸಿದಂತೆ ಹಾಗೂ ಫಿಲ್ಲರ್ಸ್​ ಬಳಕೆಯ ಕುರಿತಂತೆ ಅನೇಕ ಟೀಕೆ ಎದುರಿಸಿದ್ದೇವೆ. ನನಗೆ ಅಲರ್ಜಿ ಸಮಸ್ಯೆ ಇದೆ. ಬಹುತೇಕ ಸಂದರ್ಭಗಳಲ್ಲಿ ನನ್ನ ಮುಖ ದಪ್ಪ ಆಗಿರುತ್ತದೆ. ಬೆಳಗ್ಗೆ ಎದ್ದಾಗ ಪ್ರತಿ ಎರಡು ದಿನಕ್ಕೆ ಒಮ್ಮೆ ಈ ರೀತಿ ಆಗಿರುತ್ತದೆ. ಇದರಿಂದ ನನಗೆ ಯಾವಾಗಲೂ ಕಿರಿಕಿರಿ ಆಗುತ್ತದೆ’ ಎಂದು ಉರ್ಫಿ ಜಾವೇದ್​ ಅವರು ಹೇಳಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರು ಫೋಟೋ ಸಹಿತ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸೀರೆ ಧರಿಸಿದರೂ ತಮ್ಮ ಸ್ಟೈಲ್​ ಬಿಡಲಿಲ್ಲ ನಟಿ ಉರ್ಫಿ ಜಾವೇದ್​

‘ಫಿಲ್ಲರ್ಸ್​ ಸಮಸ್ಯೆ ಅಲ್ಲ. ಅಲರ್ಜಿ ಆಗಿದೆ. ಚಿಕಿತ್ಸೆ ನಡೆಯುತ್ತಿದೆ. ಮುಂದಿನ ಸಾರಿ ನೀವು ನನ್ನ ಊದಿಕೊಂಡ ಮುಖ ನೋಡಿದರೆ ಅದು ನನ್ನ ಅಲರ್ಜಿ ದಿನ ಎಂದು ತಿಳಿಯಿರಿ. ಮಾಮೂಲಿ ಫಿಲ್ಲರ್ಸ್​ ಹೊರತುಪಡಿಸಿ ಬೇರೆ ಏನನ್ನೂ ನಾನು ಮಾಡಿಸಿಲ್ಲ. ಊದಿಕೊಂಡಿರುವ ಮುಖ ನೋಡಿದಾಗ ಫಿಲ್ಲರ್ಸ್​ ಬಗ್ಗೆ ನನಗೆ ಸಲಹೆ ನೀಡಬೇಡಿ. ಅನುಕಂಪ ತೋರಿಸಿ, ಮುಂದೆ ಸಾಗಿ’ ಎಂದು ಉರ್ಫಿ ಜಾವೇದ್​ ಪೋಸ್ಟ್​ ಮಾಡಿದ್ದಾರೆ.

View this post on Instagram

A post shared by Uorfi (@urf7i)

ಸಾಮಾನ್ಯವಾಗಿ ನಟಿಯರು ಇಂಥ ಫೋಟೋಗಳನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಆದರೆ ಉರ್ಫಿ ಜಾವೇದ್​ ಅವರು ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಅಪ್​ಲೋಡ್​ ಮಾಡಿದ್ದಾರೆ. ಅವರ ಪ್ರಾಮಾಣಿಕತೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ‘ಬಿಗ್​ ಬಾಸ್​ ಒಟಿಟಿ’ ಶೋನಲ್ಲಿ ಸ್ಪರ್ಧಿಯಾಗಿದ್ದ ಉರ್ಫಿ ಜಾವೇದ್​ ಅವರು ಜನಪ್ರಿಯತೆ ಹೆಚ್ಚಿಸಿಕೊಂಡರು. ಇತ್ತೀಚೆಗೆ ಅವರಿಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಕೂಡ ಸಿಕ್ಕಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ