AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ಎಷ್ಟು ಜನರ ಜೊತೆ..? ಉರ್ಫಿ ಜಾವೇದ್​ಗೆ ತಾಯಿ ಎದುರಲ್ಲಿ ಬಾಲಕನ ಅಶ್ಲೀಲ ಪ್ರಶ್ನೆ

ಉರ್ಫಿ ಜಾವೇದ್​ ಅವರು ಪಾಪರಾಜಿಗಳ ಕ್ಯಾಮೆರಾಗೆ ಪೋಸ್​ ನೀಡುತ್ತಿದ್ದರು. ಆ ವೇಳೆ ಅಲ್ಲಿಯೇ ಇದ್ದ ಬಾಲಕನೊಬ್ಬ ಅಶ್ಲೀಲವಾದ ಪ್ರಶ್ನೆಯನ್ನು ಕೇಳಿದ್ದಾನೆ. ಸಾರ್ವಜನಿಕವಾಗಿ ಹಾಗೂ ಕುಟುಂಬದವರ ಎದುರಿನಲ್ಲೇ ಇಂಥ ಪ್ರಶ್ನೆ ಕೇಳಿದ್ದಕ್ಕೆ ಉರ್ಫಿ ಜಾವೇದ್​ ಅವರಿಗೆ ಶಾಕ್​ ಆಗಿದೆ. ಈ ಬಗ್ಗೆ ಅವರು ತೀವ್ರ ಬೇಸರ ತೋಡಿಕೊಂಡಿದ್ದಾರೆ.

ನೀನು ಎಷ್ಟು ಜನರ ಜೊತೆ..? ಉರ್ಫಿ ಜಾವೇದ್​ಗೆ ತಾಯಿ ಎದುರಲ್ಲಿ ಬಾಲಕನ ಅಶ್ಲೀಲ ಪ್ರಶ್ನೆ
ಉರ್ಫಿ ಜಾವೇದ್​
ಮದನ್​ ಕುಮಾರ್​
|

Updated on: Sep 04, 2024 | 8:22 PM

Share

ನಟಿ ಉರ್ಫಿ ಜಾವೇದ್​ ಅವರು ಬೋಲ್ಡ್​ ವ್ಯಕ್ತಿತ್ವದಿಂದಲೇ ಗುರುತಿಸಿಕೊಂಡಿದ್ದಾರೆ. ಬಟ್ಟೆಗಳ ವಿಚಾರದಲ್ಲಿ ಅವರಿಗೆ ಯಾವುದೇ ಮುಲಾಜು ಇಲ್ಲ. ಆ ಕಾರಣಕ್ಕೆ ಅವರನ್ನು ಅನೇಕರು ಟ್ರೋಲ್​ ಮಾಡುತ್ತಾರೆ. ಹಾಗಂತ ಎಲ್ಲದಕ್ಕೂ ಒಂದು ಮಿತಿ ಇರುತ್ತದೆ. ತೀರಾ ಕೀಳುಮಟ್ಟದ ಕಮೆಂಟ್​ ಮಾಡಿದರೆ ಅದನ್ನು ಉರ್ಫಿ ಜಾವೇದ್​ ಸಹಿಸುವುದಿಲ್ಲ. ಇತ್ತೀಚೆಗೆ ಅಂಥದ್ದೊಂದು ಘಟನೆ ನಡೆದಿದೆ. ಫ್ಯಾನ್ಸ್​ ಮತ್ತು ಫ್ಯಾಮಿಲಿ ಎದುರಿನಲ್ಲೇ ಉರ್ಫಿ ಜಾವೇದ್​ಗೆ ಅಶ್ಲೀಲವಾದ ಪ್ರಶ್ನೆ ಕೇಳಿದ್ದಾನೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಉರ್ಫಿ ಜಾವೇದ್​ ಅವರು ಅಸಮಾಧಾನ ತೋಡಿಕೊಂಡಿದ್ದಾರೆ.

‘ನಿನ್ನೆ ನನ್ನ ಕುಟುಂಬದವರ ಎದುರಿನಲ್ಲಿ ತುಂಬ ಕಿರಿಕಿರಿ ಆಗುವಂತಹ ಘಟನೆ ನಡೆಯಿತು. ಪಾಪರಾಜಿಗಳು ನನ್ನ ಫೋಟೋ ತೆಗೆಯುತ್ತಿರುವಾಗ ಒಂದು ಹುಡುಗರ ಗುಂಪು ಪಾಸ್​ ಆಯಿತು. ಎಲ್ಲರ ಎದುರಿನಲ್ಲೂ ‘ನೀನು ಎಷ್ಟು ಜನರ ಜೊತೆ ಮಲಗಿದ್ದೀಯಾ’ ಅಂತ ಕೂಗಿ ಕೇಳಿದ. ಆ ಹುಡುಗನಿಗೆ ಅಂದಾಜು 15 ವರ್ಷ ಇರಬಹುದು. ನನ್ನ ಕುಟುಂಬ ಮತ್ತು ತಾಯಿ ಎದುರಿನಲ್ಲೇ ಅವನು ಹಾಗೆ ಕೇಳಿದ’ ಎಂದು ಉರ್ಫಿ ಜಾವೇದ್​ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಉರ್ಫಿ ಮೂರು ವರ್ಷಗಳಿಂದ ದೈಹಿಕ ಸಂಪರ್ಕ ನಡೆಸಿಲ್ಲ; ಕಾರಣ ಮಾತ್ರ ವಿಚಿತ್ರ

‘ಆ ಪ್ರಶ್ನೆ ಕೇಳಿಸಿಕೊಂಡು ನನಗೆ ಶಾಕ್​ ಆಯಿತು. ಪಾಪರಾಜಿಗಳ ಎದುರಿನಲ್ಲೇ ನಾನು ಆ ಹುಡುಗನಿಗೆ ಬಾರಿಸಬೇಕು ಎಂದುಕೊಂಡೆ. ಮಹಿಳೆಯರಿಗೆ ಮತ್ತು ಎಲ್ಲ ಜನರಿಗೆ ಗೌರವ ಕೊಡುವುದನ್ನು ನಿಮ್ಮ ಹುಡುಗರಿಗೆ ಕಲಿಸಿಕೊಡಿ. ಆ ಹುಡುಗನ ತಂದೆ-ತಾಯಿ ಬಗ್ಗೆ ನನಗೆ ಪಾಪ ಎನಿಸಿತು’ ಎಂದು ಉರ್ಫಿ ಜಾವೇದ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

View this post on Instagram

A post shared by Uorfi (@urf7i)

ಉರ್ಫಿ ಜಾವೇದ್​ ಅವರ ಪರ್ಸನಲ್​ ಲೈಫ್​ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತಹ ವೆಬ್​ ಶೋ ಬಿಡುಗಡೆ ಆಗಿದೆ. ‘ಫಾಲೋ ಕಲ್​ ಲೋ ಯಾರ್​’ ಎಂಬ ಶೀರ್ಷಿಕೆಯ ಈ ಶೋ ಒಟಿಟಿಯಲ್ಲಿ (ಅಮೇಜಾನ್​ ಪ್ರೈಂ ವಿಡಿಯೋ) ಪ್ರಸಾರ ಆಗುತ್ತಿದೆ. ಇದರ ಪ್ರಚಾರ ಕಾರ್ಯದಲ್ಲಿ ಉರ್ಫಿ ಜಾವೇದ್​ ಅವರು ಬ್ಯುಸಿ ಆಗಿದ್ದಾರೆ. ಪ್ರಮೋಷನ್​ ವೇಳೆಯೇ ಅವರಿಗೆ ಬಾಲಕನಿಂದ ಅಶ್ಲೀಲ ಪ್ರಶ್ನೆ ಎದುರಾಗಿದೆ. ಉರ್ಫಿ ಪರವಾಗಿ ಅನೇಕರು ಧ್ವನಿ ಎತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ