AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ​ ವೆಬ್​ಸೈಟ್​ನಲ್ಲಿ ಉರ್ಫಿ ಜಾವೇದ್​ ಫೋಟೋ; ಪ್ರತಿ ದಿನ ರೇಪ್​ ಬೆದರಿಕೆ: ಶಾಕಿಂಗ್​ ವಿಚಾರ ತೆರೆದಿಟ್ಟ ನಟಿ

Urfi Javed Photo: ಉರ್ಫಿ ಜಾವೇದ್​ ಅವರ ಫೋಟೋ ಅಶ್ಲೀಲ ವೆಬ್​ಸೈಟ್​ನಲ್ಲಿ ಅಪ್​ಲೋಡ್​ ಆದಾಗ ಅವರನ್ನು ಇಡೀ ಊರಿನವರು ಹಾಗೂ ಕುಟುಂಬದವರು ಅವಮಾನಿಸಿದ್ದರು. ಆ ಘಟನೆ ಕುರಿತು ಉರ್ಫಿ ಮಾತನಾಡಿದ್ದಾರೆ.

ಅಶ್ಲೀಲ​ ವೆಬ್​ಸೈಟ್​ನಲ್ಲಿ ಉರ್ಫಿ ಜಾವೇದ್​ ಫೋಟೋ; ಪ್ರತಿ ದಿನ ರೇಪ್​ ಬೆದರಿಕೆ: ಶಾಕಿಂಗ್​ ವಿಚಾರ ತೆರೆದಿಟ್ಟ ನಟಿ
TV9 Web
| Edited By: |

Updated on:Apr 29, 2022 | 12:36 PM

Share

ನಟಿ ಉರ್ಫಿ ಜಾವೇದ್​ (Urfi Javed) ಅವರು​ ಪ್ರತಿ ದಿನವೂ ಸುದ್ದಿ ಆಗುತ್ತಿದ್ದಾರೆ. ಒಂದಿಲ್ಲೊಂದು ಕಾರಣಕ್ಕೆ ಅವರ ವಿಚಾರ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತದೆ. ವಿಚಿತ್ರ ಬಟ್ಟೆ ಧರಿಸಿ ಹೊರಬರುವ ಮೂಲಕ​ ಅವರು ಫೇಮಸ್​ ಆಗಿದ್ದಾರೆ. ಈ ಕಾರಣಕ್ಕಾಗಿ ನೆಟ್ಟಿಗರು ಎಷ್ಟೇ ಟ್ರೋಲ್​ (Urfi Javed Troll) ಮಾಡಿದರೂ ಆ ಬಗ್ಗೆ ಉರ್ಫಿ ಜಾವೇದ್​ ತಲೆ ಕೆಡಿಸಿಕೊಂಡಿಲ್ಲ. ಆದರೆ ಒಂದು ವಿಷಯದಿಂದ ಅವರು ಚಿಂತೆಗೆ ಒಳಗಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೂ ಅವರು ಬಂದಿದ್ದರು. ಪ್ರತಿ ದಿನ ಅವರಿಗೆ ರೇಪ್​ (Rape) ಬೆದರಿಕೆ ಬರುತ್ತವೆ. ಆ ಎಲ್ಲ ಘಟನೆಗಳ ಕುರಿತು ಈಗ ಉರ್ಫಿ ಜಾವೇದ್ ಅವರು ಮಾತನಾಡಿದ್ದಾರೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಬಾಲಕಿ ಆಗಿದ್ದಾಗಲೇ ಅವರಿಗೆ ಸೈಬರ್​ ಲೋಕದಲ್ಲಿ ಕಿರುಕುಳ ಎದುರಾಗಿತ್ತು. ಅದರಿಂದ ಅವರು ಎದುರಿಸಿದ ಮಾನಸಿಕ ಯಾತನೆ ಅಷ್ಟಿಷ್ಟಲ್ಲ. ಅದಕ್ಕೆಲ್ಲ ಕಾರಣ ಆಗಿದ್ದು ಅವರ ಒಂದು ಫೋಟೋ. ಆ ಬಗ್ಗೆ ವಿವರ ಇಲ್ಲಿದೆ.

‘ಆಗ ನನಗೆ ಇನ್ನೂ 15ರ ಪ್ರಾಯ. ನಾವು ಲಖನೌನಲ್ಲಿ ವಾಸವಾಗಿದ್ದೆವು. ಒಂದು ಆಫ್​ ಶೋಲ್ಡರ್​ ಉಡುಗೆಯನ್ನು ನಾನು ಧರಿಸಿದ್ದೆ. ಆ ಸಮಯದಲ್ಲಿ ಲಖನೌ ಸಮೀಪ ಎಲ್ಲಿಯೂ ಆ ರೀತಿಯ ಬಟ್ಟೆ ಕಾಣಲು ಸಿಗುತ್ತಿರಲಿಲ್ಲ. ಹಾಗಾಗಿ ನನ್ನ ಒಂದು ಟಾಪ್​ ಅನ್ನು ಕತ್ತರಿಸಿ ನಾನು ವಿನ್ಯಾಸಗೊಳಿಸಿದ್ದೆ. ಆ ಬಟ್ಟೆ ಧರಿಸಿ ಫೋಟೋ ತೆಗೆದುಕೊಂಡು, ಅದನ್ನು ಫೇಸ್​ಬುಕ್​ನಲ್ಲಿ ಅಪ್​ಲೋಡ್​ ಮಾಡಿದ್ದೆ. ಅದೇ ಫೋಟೋವನ್ನು ಯಾರೋ ಅಶ್ಲೀಲ ವೆಬ್​ಸೈಟ್​​ನಲ್ಲಿ ಹಾಕಿದ್ದರು’ ಎಂದು ಆ ಕಹಿ ಘಟನೆಯನ್ನು ಉರ್ಫಿ ಜಾವೇದ್​ ವಿವರಿಸಿದ್ದಾರೆ.

‘ಆ ಸಂದರ್ಭವನ್ನು ಹೇಗೆ ಎದುರಿಸಬೇಕು ಎಂಬುದೇ ನನಗೆ ತಿಳಿದಿರಲಿಲ್ಲ. ಅಂಥ ಪರಿಸ್ಥಿತಿ ಬರುವರೆಗೆ ನಾವು ಎಷ್ಟು ಸ್ಟ್ರಾಂಗ್​ ಎಂಬುದು ನಮಗೆ ಗೊತ್ತಾಗುವುದಿಲ್ಲ. ಬಂದಿದ್ದನ್ನು ಸ್ವೀಕರಿಸಬೇಕಾ? ಫೈಟ್​ ಮಾಡಬೇಕಾ ಅಥವಾ ಸಾಯಬೇಕಾ? ಸಾಯಲು ನನಗೆ ಧೈರ್ಯ ಇರಲಿಲ್ಲ. ಹಾಗಾಗಿ ನಾನು ಫೈಟ್​ ಮಾಡಲು ನಿರ್ಧರಿಸಿದೆ’ ಎಂದು ಉರ್ಫಿ ಜಾವೇದ್​ ಹೇಳಿದ್ದಾರೆ.

ಉರ್ಫಿ ಜಾವೇದ್​ ಅವರ ಫೋಟೋ ಅಶ್ಲೀಲ ವೆಬ್​ ಸೈಟ್​ನಲ್ಲಿ ಅಪ್​ಲೋಡ್​ ಆದಾಗ ಅವರನ್ನು ಇಡೀ ಊರಿನವರು ಮತ್ತು ಕುಟುಂಬದವರು ಕೂಡ ಅವಮಾನಿಸಿದ್ದರು. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಕೂಡ ಅವರು ಆಲೋಚಿಸಿದ್ದರು. ಆದರೆ ಸಾಧ್ಯವಾಗಲಿಲ್ಲ. ಈಗಲೂ ಅವರಿಗೆ ಪ್ರತಿದಿನ ರೇಪ್​ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ. ಅದು ಕೂಡ ನೂರಾರು ಜನರಿಂದ. ಆ ಬಗ್ಗೆ ಕೂಡ ಅವರು ಈ ಸಂದರ್ಶನದಲ್ಲಿ ಮಾತನಾಡಿದ್ದಾರೆ.

ಬಟ್ಟೆ ವಿಚಾರದಲ್ಲಿ ಉರ್ಫಿ ಜಾವೇದ್​ ಅವರಿಗೆ ಈಗಲೂ ಟ್ರೋಲ್​ ಕಾಟ ತಪ್ಪಿಲ್ಲ. ಅವರ ಫೋಟೋಗಳು ವೈರಲ್​ ಆದಾಗ ಕೆಲವು ಕಿರುತೆರೆಯ ಸೆಲೆಬ್ರಿಟಿಗಳು ಕೂಡ ಅಶ್ಲೀಲವಾಗಿ ಕಮೆಂಟ್​ ಮಾಡುತ್ತಾರೆ ಎಂಬ ಕುರಿತು ಉರ್ಫಿ ಅವರು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ತಮಗೆ ಪ್ರತಿಭೆ ಇದ್ದರೂ ಕೂಡ ಕಿರುತೆರೆಯಲ್ಲಿ ಸೂಕ್ತ ಮನ್ನಣೆ ಸಿಕ್ಕಿಲ್ಲ ಎಂದು ಗರಂ ಆಗಿದ್ದರು. ಬಿಗ್​ ಬಾಸ್​ ಒಟಿಟಿಯಲ್ಲಿ ಸ್ಪರ್ಧಿಸಿ ಹೊರಬಂದ ಬಳಿಕ ಉರ್ಫಿ ಜಾವೇದ್​ ಅವರ ಖ್ಯಾತಿ ಹೆಚ್ಚಿತು.

ಇದನ್ನೂ ಓದಿ:

ಪ್ಯಾಂಟ್​ ಮೇಲೆ ಪ್ಯಾಂಟ್​ ಅಂಟಿಸಿಕೊಂಡು ಬಂದ ಉರ್ಫಿ ಜಾವೇದ್​; ಇಲ್ಲಿದೆ ವಿಚಿತ್ರ ಅವತಾರದ ವಿಡಿಯೋ

‘ನಂಗೆ ಮರ್ಯಾದೆ ಕೊಡಲ್ಲ, ಸೆಲೆಬ್ರಿಟಿಗಳೇ ಕೆಟ್ಟ ಕಮೆಂಟ್​​ ಮಾಡ್ತಾರೆ’: ಎಲ್ಲವನ್ನೂ ಹೇಳಿಕೊಂಡ ಉರ್ಫಿ ಜಾವೇದ್​

Published On - 12:31 pm, Fri, 29 April 22

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ