AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಪಘಾತ: ನಟಿಗೆ ಗಾಯ, ಕಾರ್ಮಿಕ ಸಾವು, ಒರ್ವ ಗಂಭೀರ

Urmilla Kothare: ಜನಪ್ರಿಯ ಮರಾಠಿ ಮತ್ತು ಹಿಂದಿ ಸಿನಿಮಾ ನಟಿ ಊರ್ಮಿಳಾ ಅವರ ಕಾರು ಅಪಘಾತಕ್ಕೆ ಈಡಾಗಿದ್ದು, ಒಬ್ಬ ಕಾರ್ಮಿಕ ಸ್ಥಳದಲ್ಲೇ ನಿಧನ ಹೊಂದಿದ್ದಾನೆ. ಇನ್ನೊಬ್ಬ ಕಾರ್ಮಿಕ ಗಂಭೀರವಾಗಿದ್ದು, ನಟಿ ಮತ್ತು ಆಕೆಯ ಕಾರು ಚಾಲಕರೂ ಸಹ ಗಾಯಗೊಂಡಿದ್ದಾರೆ. ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

ಕಾರು ಅಪಘಾತ: ನಟಿಗೆ ಗಾಯ, ಕಾರ್ಮಿಕ ಸಾವು, ಒರ್ವ ಗಂಭೀರ
Urmila
ಮಂಜುನಾಥ ಸಿ.
|

Updated on:Dec 28, 2024 | 7:51 PM

Share

ಮರಾಠಿ ನಟಿ ಊರ್ಮಿಳಾ ಕೊಠಾರಿ ಕಾರು ಅಪಘಾತದಲ್ಲಿ ಕಾರ್ಮಿಕನೊಬ್ಬನ ಸಾವಾಗಿದ್ದು, ಸ್ವತಃ ನಟಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಮುಂಬೈನಲ್ಲಿ ಘಟನೆ ನಡೆದಿದ್ದು, ನಟಿಯ ಕಾರು ನಿಯಂತ್ರಣ ತಪ್ಪಿ ಕಾರ್ಮಿಕನೊಬ್ಬನಿಗೆ ಢಿಕ್ಕಿ ಹೊಡೆದಿದ್ದು, ಕಾರ್ಮಿಕ ಸ್ಥಳದಲ್ಲಿಯೇ ನಿಧನ ಹೊಂದಿದ್ದಾನೆ. ನಟಿ ಊರ್ಮಿಳಾ ಹಾಗೂ ಅವರ ಕಾರಿನ ಚಾಲಕನಿಗೂ ಗಾಯಗಳಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಮರಾಠಿ ನಟಿ ಊರ್ಮಿಳಾ ಕೊಠಾರಿ ಗುರುವಾರ ತಡರಾತ್ರಿ ಸಿನಿಮಾ ಚಿತ್ರೀಕರಣ ಮುಗಿಸಿ ವಾಪಸ್ಸಾಗಬೇಕಾದರೆ ಮುಂಬೈನ ಕಾಂಧಿವಲಿ ಏರಿಯಾದಲ್ಲಿನ ಪೊಯ್ಸಾರ್ ಮೆಟ್ರೊ ಪ್ರಾಜೆಕ್ಟ್​ಗಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಕಾರು ಢಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಇನ್ನೊಬ್ಬ ಗಾಯಗೊಂಡಿದ್ದಾನೆ. ಸೂಕ್ತ ಸಮಯಕ್ಕೆ ಏರ್​ಬ್ಯಾಗ್ ತೆರೆದುಕೊಂಡ ಕಾರಣಕ್ಕೆ ನಟಿ ಹಾಗೂ ಆಕೆಯ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರಿಬ್ಬರಿಗೂ ಸಹ ಗಾಯಗಳಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಲ ಪ್ರತ್ಯಕ್ಷದರ್ಶಿಗಳ ಪ್ರಕಾರ ನಟಿಯ ಹ್ಯುಂಡೈ ವರ್ನಾ ಕಾರು ಭಾರಿ ವೇಗದಲ್ಲಿ ಚಲಿಸುತ್ತಿತ್ತಂತೆ, ನಿಯಂತ್ರಣ ತಪ್ಪಿ ಕಾರ್ಮಿಕರ ಮೇಲೆ ಹರಿದಿದೆ. ಆ ನಂತರ ರಸ್ತೆ ಬದಿಯ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಸಮತಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕಾರನ್ನು ಸೀಜ್ ಮಾಡಿದ್ದಾರೆ. ಕಾರಿನ ಚಾಲಕನ ಮೇಲೆ ದೂರು ದಾಖಲಿಸಿಕೊಳ್ಳಲಾಗಿದ್ದು, ವಾಹನದ ಪರಿಶೀಲನೆ ಮಾಡಲಾಗುತ್ತಿದೆ.

ಊರ್ಮಿಳಾ ಕೊಥಾರಿ ಬಹುಭಾಷಾ ನಟಿಯಾಗಿದ್ದು, ಮರಾಠಿ ಟಿವಿ, ಸಿನಿಮಾ ಕ್ಷೇತ್ರದಲ್ಲಿ ಬಹಳ ಜನಪ್ರಿಯರು. ಮರಾಠಿಯ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗಿನ ‘ವೆಲ್ಕಮ್ ಒಬಾಮಾ’ ಹಿಂದಿಯಲ್ಲಿ ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:49 pm, Sat, 28 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್