AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರ್ವಶಿ ರೌಟೇಲಾ ಧರಿಸಿದ ಈ ಗೌನ್ ಬೆಲೆ ಬರೋಬ್ಬರಿ 40 ಕೋಟಿ ರೂಪಾಯಿ!

ಸಾವಿರ ಅಲ್ಲ, ಲಕ್ಷ ಅಲ್ಲ.. ಬರೋಬ್ಬರಿ 40.41 ಕೋಟಿ ರೂಪಾಯಿ ಬೆಲೆಯ ಬಟ್ಟೆ ಧರಿಸಿ ಊರ್ವಶಿ ರೌಟೇಲಾ ಮಿಂಚಿದ್ದಾರೆ. 78ನೇ ಕಾನ್ ಫಿಲ್ಮ್ ಫೆಸ್ಟಿವಲ್​ನಲ್ಲಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಭಾರತದ ಅನೇಕ ಸೆಲೆಬ್ರಿಟಿಗಳು ಈ ಚಿತ್ರೋತ್ಸವದಲ್ಲಿ ಭಾಗಿಯಾಗಿದ್ದಾರೆ. ಊರ್ವಶಿ ರೌಟೇಲಾ ಅವರು ಹೆಚ್ಚು ಗಮನ ಸೆಳೆಯುತ್ತಿದ್ದಾರೆ.

ಊರ್ವಶಿ ರೌಟೇಲಾ ಧರಿಸಿದ ಈ ಗೌನ್ ಬೆಲೆ ಬರೋಬ್ಬರಿ 40 ಕೋಟಿ ರೂಪಾಯಿ!
Urvashi Rautela
ಮದನ್​ ಕುಮಾರ್​
|

Updated on: May 14, 2025 | 9:16 PM

Share

ಪ್ಯಾನ್ ಇಂಡಿಯಾ ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಕೆಲವೊಮ್ಮೆ ಅನಗತ್ಯವಾದ ವಿವಾದಗಳಲ್ಲಿ ಅವರ ಹೆಸರು ತಳುಕು ಹಾಕಿಕೊಳ್ಳುತ್ತದೆ. ಅದನ್ನು ಹೊರತುಪಡಿಸಿದರೆ ಅವರಿಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ ಇದೆ. ಈಗ ಊರ್ವಶಿ ರೌಟೇಲಾ ಅವರು ಕಾನ್ (Cannes 2025) ಫಿಲ್ಮ್ ಫೆಸ್ಟಿವಲ್​ನಲ್ಲಿ ಪಾಲ್ಗೊಂಡಿದ್ದಾರೆ. ರೆಟ್​ ಕಾರ್ಪೆಟ್​ನಲ್ಲಿ ಅವರು ಹೆಜ್ಜೆ ಹಾಕಿದ್ದಾರೆ. ನೆರೆದಿದ್ದ ಸಾವಿರಾರು ಕ್ಯಾಮೆರಾಗಳ ಎದುರು ಅವರು ಪೋಸ್ ನೀಡಿದ್ದಾರೆ. ಅವರು ಧರಿಸಿದ ಅತಿ ದುಬಾರಿ ಡ್ರೆಸ್ (Urvashi Rautela Gown) ಬಗ್ಗೆ ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ಯಾಕೆಂದರೆ ಇದರ ಬೆಲೆ ಕೇಳಿದರೆ ಎಂಥವರೂ ಹೌಹಾರುತ್ತಾರೆ.

ಹೌದು, ವರದಿಗಳ ಪ್ರಕಾರ ಊರ್ವಶಿ ರೌಟೇಲಾ ಅವರು ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್​​ನಲ್ಲಿ ಮೊದಲ ದಿನ ಧರಿಸಿದ ಗೌನ್ ಬೆಲೆ ಬರೋಬ್ಬರಿ 40.41 ಕೋಟಿ ರೂಪಾಯಿ! ಬಹಳ ವಿಶೇಷವಾಗಿ ಇದನ್ನು ತಯಾರಿಸಲಾಗಿದೆಯಂತೆ. ತುಂಬ ಕಲರ್​ಫುಲ್ ಆಗಿರುವ ಈ ಗೌನ್ ಧರಿಸಿ ಊರ್ವಶಿ ರೌಟೇಲಾ ಅವರು ಮಿಂಚಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗುತ್ತಿವೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಫ್ಯಾಷನ್ ಜಗತ್ತಿನಲ್ಲಿ ಊರ್ವಶಿ ರೌಟೇಲಾ ಅವರು ಸದಾ ಮಿಂಚುತ್ತಾರೆ. ಆಗಾಗ ಅವರ ಬಣ್ಣ ಬಣ್ಣದ ಫೋಟೋಶೂಟ್ ಮಾಡಿಸುತ್ತಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಕಾನ್ ಫಿಲ್ಮ್ ಫೆಸ್ಟಿವಲ್​ನಲ್ಲಿ ಭಾಗವಹಿಸುವ ಅವಕಾಶ ಪಡೆದಿರುವ ಅವರು ಬಹುಕೋಟಿ ರೂಪಾಯಿ ಬೆಲೆ ಬಾಳುವ ಗೌನ್ ಧರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಅಂದಹಾಗೆ, ಕೆಲವರು ಊರ್ವಶಿ ರೌಟೇಲಾ ಅವರ ಡ್ರೆಸ್ ನೋಡಿ ಟ್ರೋಲ್ ಮಾಡಿದ್ದಾರೆ ಕೂಡ. ಇದರ ಬೆಲೆ 40.41 ಕೋಟಿ ರೂಪಾಯಿ ಆಗಿದ್ದರೂ ಕೂಡ ನೋಡಲು ಆಕರ್ಷಕವಾಗಿಲ್ಲ. ಅತಿಯಾದ ಬಣ್ಣಗಳಿಂದ ತುಂಬಿದೆ. 40 ಕೋಟಿ ರೂಪಾಯಿ ಎನ್ನುವಂತಹ ವಿಶೇಷ ಇದರಲ್ಲಿ ಏನೂ ಇಲ್ಲ ಎಂಬ ಕಮೆಂಟ್​ಗಳು ಬಂದಿವೆ.

ಇದನ್ನೂ ಓದಿ: ಊರ್ವಶಿ ರೌಟೇಲಾ ಹಾಡಿನಂತೆಯೇ ವೈರಲ್ ಆಗುತ್ತಿದೆ ಮೇಕಿಂಗ್ ವಿಡಿಯೋ

ಇದು ಊರ್ವಶಿ ರೌಟೇಲಾ ಅವರ ಮೊದಲ ಲುಕ್. ವಾರ ಪೂರ್ತಿ ನಡೆಯುವ ಕಾನ್ ಫಿಲ್ಮ್ ಫೆಸ್ಟಿವಲ್​​ನಲ್ಲಿ ಅವರ ಮುಂದಿನ ಡ್ರೆಸ್ ಯಾವ ರೀತಿ ಇರಲಿದೆ ಎಂಬುದನ್ನು ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ