AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urvashi Rautela: ಹಿಜಾಬ್​​ ವಿರುದ್ಧದ ಇರಾನ್​ ಮಹಿಳೆಯರ ಹೋರಾಟಕ್ಕೆ ಊರ್ವಶಿ ರೌಟೇಲಾ ಬೆಂಬಲ; ಕೂದಲಿಗೆ ಬಿತ್ತು ಕತ್ತರಿ

Iran | Hijab: ‘ಮಹಿಳೆಯರು ಹೇಗೆ ಬದುಕಬೇಕು ಎಂಬುದನ್ನು ಬೇರೆ ಯಾರೋ ನಿರ್ಧರಿಸಲು ಬಿಡಬೇಡಿ. ಮಹಿಳೆಯರೆಲ್ಲರೂ ಒಗ್ಗೂಡಿದರೆ ಸ್ತ್ರೀವಾದಕ್ಕೆ ಹೊಸ ಶಕ್ತಿ ಬರುತ್ತದೆ’ ಎಂದು ಊರ್ವಶಿ ರೌಟೇಲಾ ಬರೆದುಕೊಂಡಿದ್ದಾರೆ.

Urvashi Rautela: ಹಿಜಾಬ್​​ ವಿರುದ್ಧದ ಇರಾನ್​ ಮಹಿಳೆಯರ ಹೋರಾಟಕ್ಕೆ ಊರ್ವಶಿ ರೌಟೇಲಾ ಬೆಂಬಲ; ಕೂದಲಿಗೆ ಬಿತ್ತು ಕತ್ತರಿ
ಊರ್ವಶಿ ರೌಟೇಲಾ
TV9 Web
| Edited By: |

Updated on:Oct 17, 2022 | 4:04 PM

Share

ಇರಾನ್​ ಮಹಿಳೆಯರು ಹಿಜಾಬ್​ (Hijab) ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವುದು ವಿಶ್ವಾದ್ಯಂತ ಸುದ್ದಿ ಆಗುತ್ತಿದೆ. ಈ ಪ್ರತಿಭಟನೆಗೆ ವಿವಿಧ ದೇಶಗಳ ಮಹಿಳೆಯರು ಬೆಂಬಲ ಸೂಚಿಸುತ್ತಿದ್ದಾರೆ. ಇರಾನ್ (Iran) ಮಹಿಳೆಯರ ಹೋರಾಟ ತೀವ್ರ ಸ್ವರೂಪ ಪಡೆದು ಒಂದು ತಿಂಗಳು ಕಳೆದಿದೆ. ಈ ವೇಳೆ ಬಾಲಿವುಡ್​ ನಟಿ ಊರ್ವಶಿ ರೌಟೇಲಾ (Urvashi Rautela) ಕೂಡ  ಸಾಥ್​ ನೀಡಿದ್ದಾರೆ. ತಲೆ ಕೂದಲನ್ನು ಕತ್ತರಿಸಿಕೊಳ್ಳುವ ಮೂಲಕ ಅವರು ಈ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಅಲ್ಲದೇ, ಒಟ್ಟಾರೆ ಬೆಳವಣಿಗೆಯ ಕುರಿತು ತಮ್ಮ ಅಭಿಪ್ರಾಯ ಏನು ಎಂಬುದನ್ನು ಅವರು ತಿಳಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೂದಲಿಗೆ ಕತ್ತರಿ ಹಾಕುತ್ತಿರುವ ಫೋಟೋವನ್ನು ಕೂಡ ಅವರು ಶೇರ್​ ಮಾಡಿಕೊಂಡಿದ್ದಾರೆ.

‘ನನ್ನ ಕೂದಲು ಕತ್ತರಿಸಿಕೊಂಡಿದ್ದೇನೆ. ಮಹ್ಸಾ ಅಮಿನಿ ಹತ್ಯೆ ನಂತರ ಶುರುವಾದ ಹಿಜಾಬ್​ ವಿರುದ್ಧದ ಹೋರಾಟದಲ್ಲಿ ನಿಧನರಾದ ಮಹಿಳೆಯರಿಗೆ ಬೆಂಬಲ ನೀಡಲು ಹಾಗೂ ಉತ್ತರಖಾಂಡದ 19ರ ಪ್ರಾಯದ ಯುವತಿ ಅಂತಿಕಾ ಭಂಡಾರಿ ಸಲುವಾಗಿ ಹೀಗೆ ಮಾಡಿದ್ದೇನೆ. ಕೂದಲನ್ನು ಕತ್ತರಿಸಿಕೊಳ್ಳುವ ಮೂಲಕ ಜಗತ್ತಿನಾದ್ಯಂತ ಇರುವ ಮಹಿಳೆಯರು ಇರಾನ್​ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಒಗ್ಗೂಡುತ್ತಿದ್ದಾರೆ. ಮಹಿಳೆಯರಿಗೆ ಗೌರವ ನೀಡಿ’ ಎಂದು ಊರ್ವಶಿ ರೌಟೇಲಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
‘ಫಾಲ್ವೊಡ್ ಮೈ ಲವ್’; ಹೀಗೆ ಹೇಳುತ್ತ ಆಸ್ಟ್ರೇಲಿಯಾಕ್ಕೆ ಹಾರಿದ ಊರ್ವಶಿ..! ಅಲ್ಲೇ ಇದ್ದಾರೆ ಪಂತ್
Image
‘ನಾನು ರಿಷಭ್ ಪಂತ್​ಗೆ ಕ್ಷಮೆ ಕೇಳಿದ್ದಲ್ಲ..’; ಮತ್ತೆ ಪ್ಲೇಟ್ ಬದಲಿಸಿದ ನಟಿ ಊರ್ವಶಿ ರೌಟೇಲಾ
Image
ಯಾರೀ ಊರ್ವಶಿ ಎಂದ ಪಾಕ್ ಬೌಲರ್; ಕೋಪಗೊಂಡ ಬಾಲಿವುಡ್ ನಟಿ ಮಾಡಿದ್ದೇನು ಗೊತ್ತಾ?
Image
ಕಾನ್ ಚಿತ್ರೋತ್ಸವದಲ್ಲಿ ಮಿಂಚಿದ ತಮನ್ನಾ, ಊರ್ವಶಿ ರೌಟೇಲಾ; ಇಲ್ಲಿವೆ ಕಲರ್​ಫುಲ್​ ಫೋಟೋಗಳು

‘ಕೂದಲನ್ನು ಮಹಿಳೆಯರ ಸೌಂದರ್ಯದ ಸಂಕೇತದ ರೀತಿ ನೋಡಲಾಗುತ್ತದೆ. ಸಾರ್ವಜನಿಕವಾಗಿ ಕೂದಲನ್ನು ಕತ್ತರಿಸಿಕೊಳ್ಳುವ ಮೂಲಕ ಸಮಾಜ ಹೇರಿರುವ ಸೌಂದರ್ಯದ ಪರಿಕಲ್ಪನೆಯನ್ನು ತಾವು ಕೇರ್​ ಮಾಡುವುದಿಲ್ಲ ಎಂದು ಮಹಿಳೆಯರು ತೋರಿಸುತ್ತಿದ್ದಾರೆ. ಹೇಗೆ ಬಟ್ಟೆ ಹಾಕಬೇಕು, ಹೇಗೆ ನಡೆದುಕೊಳ್ಳಬೇಕು, ಹೇಗೆ ಬದುಕಬೇಕು ಎಂಬುದನ್ನು ಬೇರೆ ಯಾರೋ ನಿರ್ಧರಿಸಲು ಬಿಡಬೇಡಿ. ಮಹಿಳೆಯರೆಲ್ಲರೂ ಒಗ್ಗೂಡಿದರೆ ಸ್ತ್ರೀವಾದಕ್ಕೆ ಹೊಸ ಶಕ್ತಿ ಬರುತ್ತದೆ’ ಎಂದು ಊರ್ವಶಿ ರೌಟೇಲಾ ಪೋಸ್ಟ್​ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ತಮಗೂ ದೌರ್ಜನ್ಯ ಆಗಿದೆ ಎಂದು ಇತ್ತೀಚೆಗೆ ಊರ್ವಶಿ ರೌಟೇಲಾ ಅವರು ಹೇಳಿದ್ದರು. ರಿಷಭ್​​ ಪಂತ್​ ಅವರನ್ನು ಊರ್ವಶಿ ಹಿಂಬಾಲಿಸುತ್ತಿದ್ದಾರೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ. ಅದಕ್ಕೆಲ್ಲ ತಾವು ಕೇರ್​ ಮಾಡುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಅವರು ತಿಳಿಸಿದ್ದರು. ಅವರ ಈ ನಿಲುವಿಗೆ ಅನೇಕರು ಬೆಂಬಲ ಸೂಚಿಸಿದ್ದಾರೆ.

ನಟಿಯಾಗಿ, ಮಾಡೆಲ್​ ಆಗಿ ಊರ್ವಶಿ ರೌಟೇಲಾ ಬ್ಯುಸಿ ಆಗಿದ್ದಾರೆ. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 5.8 ಕೋಟಿಗೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:48 pm, Mon, 17 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್