AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಬಿಟ್ಟೂ ಬಿಡದೆ ರಿಷಭ್ ಪಂತ್ ಹಿಂದೆ ಬಿದ್ದ ಊರ್ವಶಿ ರೌಟೇಲಾ; ನಟಿಗೆ ಛೀಮಾರಿ

ಕಳೆದ ಕೆಲ ದಿನಗಳಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದೇ ಇತ್ತು. ಈಗ ರಿಷಭ್ ಪಂತ್ ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿದೆ. ಈಗಲೂ ಊರ್ವಶಿ ಅವರು ರಿಷಭ್ ಅವರನ್ನು ಹಿಂಬಾಲಿಸಿದಂತಿದೆ.

Rishabh Pant: ಬಿಟ್ಟೂ ಬಿಡದೆ ರಿಷಭ್ ಪಂತ್ ಹಿಂದೆ ಬಿದ್ದ ಊರ್ವಶಿ ರೌಟೇಲಾ; ನಟಿಗೆ ಛೀಮಾರಿ
ಊರ್ವಶಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jan 06, 2023 | 10:58 AM

Share

ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಸಿನಿಮಾಗಳ ಮೂಲಕ ಫೇಮಸ್ ಆದರು. ಅವರಿಗೆ ಈಗ ತಾವು ಮೂಲೆಗುಂಪು ಆಗುತ್ತಿದ್ದೇನೆ ಅನಿಸಿದೆಯೋ ಏನೋ. ಮತ್ತೆ ಫೇಮ್ ಪಡೆಯಲು ಕ್ರಿಕೆಟರ್ ರಿಷಭ್ ಪಂತ್ (Rishabh Pant) ಹಿಂದೆ ಬಿದ್ದಂತಿದೆ. ರಿಷಭ್ ಸುಮ್ಮನಿದ್ದರೂ ಇವರು ಮಾತ್ರ ಬಿಡುತ್ತಿಲ್ಲ. ಸದ್ಯ ರಿಷಭ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಮಯದಲ್ಲೂ ಊರ್ವಶಿ ಅವರು ರಿಷಭ್ ಹಿಂದೆ ಬಿದ್ದಿದ್ದಾರೆ. ಇದಕ್ಕೆ ಅನೇಕರು ಛೀಮಾರಿ ಹಾಕಿದ್ದಾರೆ.

ಊರ್ವಶಿ ಹಾಗೂ ರಿಷಭ್ ಪಂತ್ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿಲ್ಲ. ಈಗ ಇವರ ಮಧ್ಯೆ ಬ್ರೇಕಪ್ ಆಗಿದೆ ಎನ್ನಲಾಗಿದೆ. ಹೀಗಿರುವಾಗಲೇ ಊರ್ವಶಿ ರೌಟೇಲಾ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ‘ರಿಷಭ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು’ ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಇದಕ್ಕೆ ರಿಷಭ್ ಪಂತ್ ಖಡಕ್ ಆಗಿ ತಿರುಗೇಟು ನೀಡುವ ಕೆಲಸ ಮಾಡಿದ್ದರು.

ಕಳೆದ ಕೆಲ ದಿನಗಳಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದೇ ಇತ್ತು. ಈಗ ರಿಷಭ್ ಪಂತ್ ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿದೆ. ಈಗಲೂ ಊರ್ವಶಿ ಅವರು ರಿಷಭ್ ಅವರನ್ನು ಹಿಂಬಾಲಿಸಿದಂತಿದೆ. ರಿಷಭ್​ಗೆ ಅಪಘಾತದ ವಿಚಾರ ತಿಳಿದಾಗ ‘ಪ್ರಾರ್ಥನೆ’ ಎಂದು ಬರೆದುಕೊಂಡಿದ್ದರು. ಇದು ರಿಷಭ್​​ಗಾಗಿ ಹೇಳಿದ ಮಾತು ಎನ್ನಲಾಗಿತ್ತು. ಊರ್ವಶಿ ತಾಯಿ ‘ರಿಷಭ್ ಬೇಗ ಚೇತರಿಕೆ ಕಾಣಲಿ’ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಊರ್ವಶಿಯನ್ನು ಟೀಕೆ ಮಾಡಲಾಗಿತ್ತು.

ಇದನ್ನೂ ಓದಿ
Image
‘ಆರ್​​ಪಿ ಎಂದರೆ ರಿಷಬ್ ಪಂತ್ ಅಲ್ಲ’; ಬಹುದಿನಗಳ ವದಂತಿ ಬಗ್ಗೆ ಮೌನ ಮುರಿದ ನಟಿ ಊರ್ವಶಿ ರೌಟೇಲಾ
Image
‘ನಾನು ರಿಷಭ್ ಪಂತ್​ಗೆ ಕ್ಷಮೆ ಕೇಳಿದ್ದಲ್ಲ..’; ಮತ್ತೆ ಪ್ಲೇಟ್ ಬದಲಿಸಿದ ನಟಿ ಊರ್ವಶಿ ರೌಟೇಲಾ
Image
ಯಾರೀ ಊರ್ವಶಿ ಎಂದ ಪಾಕ್ ಬೌಲರ್; ಕೋಪಗೊಂಡ ಬಾಲಿವುಡ್ ನಟಿ ಮಾಡಿದ್ದೇನು ಗೊತ್ತಾ?
Image
Urvashi Rautela: ಪಾಕಿಸ್ತಾನ ಕ್ರಿಕೆಟಿಗನ ಜೊತೆ ರೊಮ್ಯಾಂಟಿಕ್ ವಿಡಿಯೋ ಹಂಚಿಕೊಂಡ ಊರ್ವಶಿ ರೌಟೇಲ

ಇದನ್ನೂ ಓದಿ: ರಿಷಭ್ ಪಂತ್ ಬೇಗ ಗುಣಮುಖರಾಗಲಿ ಎಂದು ಕೋರಿದ ಊರ್ವಶಿ ತಾಯಿ; ಫ್ಯಾನ್ಸ್ ಕೊಟ್ರು ಖಡಕ್ ತಿರುಗೇಟು

ಸದ್ಯ ರಿಷಭ್ ಅವರಿಗೆ ಮುಂಬೈನ ಕೋಕಿಲಾಬೇನ್ ಧೀರುಬಾಯ್ ಅಂಬಾನಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯ ಫೋಟೋನ ಊರ್ವಶಿ ಇನ್​​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಅನೇಕರು ಊರ್ವಶಿಯನ್ನು ಟೀಕೆ ಮಾಡಿದ್ದಾರೆ. ಪ್ರಚಾರಕ್ಕಾಗಿ ಊರ್ವಶಿ ಈ ರೀತಿ ಮಾಡುತ್ತಿದ್ದಾರೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಆದರೆ, ಈ ಬಗ್ಗೆ ಊರ್ವಶಿ ತಲೆಕೆಡಿಸಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:48 am, Fri, 6 January 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!