AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಬಿಟ್ಟೂ ಬಿಡದೆ ರಿಷಭ್ ಪಂತ್ ಹಿಂದೆ ಬಿದ್ದ ಊರ್ವಶಿ ರೌಟೇಲಾ; ನಟಿಗೆ ಛೀಮಾರಿ

ಕಳೆದ ಕೆಲ ದಿನಗಳಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದೇ ಇತ್ತು. ಈಗ ರಿಷಭ್ ಪಂತ್ ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿದೆ. ಈಗಲೂ ಊರ್ವಶಿ ಅವರು ರಿಷಭ್ ಅವರನ್ನು ಹಿಂಬಾಲಿಸಿದಂತಿದೆ.

Rishabh Pant: ಬಿಟ್ಟೂ ಬಿಡದೆ ರಿಷಭ್ ಪಂತ್ ಹಿಂದೆ ಬಿದ್ದ ಊರ್ವಶಿ ರೌಟೇಲಾ; ನಟಿಗೆ ಛೀಮಾರಿ
ಊರ್ವಶಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 06, 2023 | 10:58 AM

ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಸಿನಿಮಾಗಳ ಮೂಲಕ ಫೇಮಸ್ ಆದರು. ಅವರಿಗೆ ಈಗ ತಾವು ಮೂಲೆಗುಂಪು ಆಗುತ್ತಿದ್ದೇನೆ ಅನಿಸಿದೆಯೋ ಏನೋ. ಮತ್ತೆ ಫೇಮ್ ಪಡೆಯಲು ಕ್ರಿಕೆಟರ್ ರಿಷಭ್ ಪಂತ್ (Rishabh Pant) ಹಿಂದೆ ಬಿದ್ದಂತಿದೆ. ರಿಷಭ್ ಸುಮ್ಮನಿದ್ದರೂ ಇವರು ಮಾತ್ರ ಬಿಡುತ್ತಿಲ್ಲ. ಸದ್ಯ ರಿಷಭ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಮಯದಲ್ಲೂ ಊರ್ವಶಿ ಅವರು ರಿಷಭ್ ಹಿಂದೆ ಬಿದ್ದಿದ್ದಾರೆ. ಇದಕ್ಕೆ ಅನೇಕರು ಛೀಮಾರಿ ಹಾಕಿದ್ದಾರೆ.

ಊರ್ವಶಿ ಹಾಗೂ ರಿಷಭ್ ಪಂತ್ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿಲ್ಲ. ಈಗ ಇವರ ಮಧ್ಯೆ ಬ್ರೇಕಪ್ ಆಗಿದೆ ಎನ್ನಲಾಗಿದೆ. ಹೀಗಿರುವಾಗಲೇ ಊರ್ವಶಿ ರೌಟೇಲಾ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ‘ರಿಷಭ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು’ ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಇದಕ್ಕೆ ರಿಷಭ್ ಪಂತ್ ಖಡಕ್ ಆಗಿ ತಿರುಗೇಟು ನೀಡುವ ಕೆಲಸ ಮಾಡಿದ್ದರು.

ಕಳೆದ ಕೆಲ ದಿನಗಳಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದೇ ಇತ್ತು. ಈಗ ರಿಷಭ್ ಪಂತ್ ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿದೆ. ಈಗಲೂ ಊರ್ವಶಿ ಅವರು ರಿಷಭ್ ಅವರನ್ನು ಹಿಂಬಾಲಿಸಿದಂತಿದೆ. ರಿಷಭ್​ಗೆ ಅಪಘಾತದ ವಿಚಾರ ತಿಳಿದಾಗ ‘ಪ್ರಾರ್ಥನೆ’ ಎಂದು ಬರೆದುಕೊಂಡಿದ್ದರು. ಇದು ರಿಷಭ್​​ಗಾಗಿ ಹೇಳಿದ ಮಾತು ಎನ್ನಲಾಗಿತ್ತು. ಊರ್ವಶಿ ತಾಯಿ ‘ರಿಷಭ್ ಬೇಗ ಚೇತರಿಕೆ ಕಾಣಲಿ’ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಊರ್ವಶಿಯನ್ನು ಟೀಕೆ ಮಾಡಲಾಗಿತ್ತು.

ಇದನ್ನೂ ಓದಿ
Image
‘ಆರ್​​ಪಿ ಎಂದರೆ ರಿಷಬ್ ಪಂತ್ ಅಲ್ಲ’; ಬಹುದಿನಗಳ ವದಂತಿ ಬಗ್ಗೆ ಮೌನ ಮುರಿದ ನಟಿ ಊರ್ವಶಿ ರೌಟೇಲಾ
Image
‘ನಾನು ರಿಷಭ್ ಪಂತ್​ಗೆ ಕ್ಷಮೆ ಕೇಳಿದ್ದಲ್ಲ..’; ಮತ್ತೆ ಪ್ಲೇಟ್ ಬದಲಿಸಿದ ನಟಿ ಊರ್ವಶಿ ರೌಟೇಲಾ
Image
ಯಾರೀ ಊರ್ವಶಿ ಎಂದ ಪಾಕ್ ಬೌಲರ್; ಕೋಪಗೊಂಡ ಬಾಲಿವುಡ್ ನಟಿ ಮಾಡಿದ್ದೇನು ಗೊತ್ತಾ?
Image
Urvashi Rautela: ಪಾಕಿಸ್ತಾನ ಕ್ರಿಕೆಟಿಗನ ಜೊತೆ ರೊಮ್ಯಾಂಟಿಕ್ ವಿಡಿಯೋ ಹಂಚಿಕೊಂಡ ಊರ್ವಶಿ ರೌಟೇಲ

ಇದನ್ನೂ ಓದಿ: ರಿಷಭ್ ಪಂತ್ ಬೇಗ ಗುಣಮುಖರಾಗಲಿ ಎಂದು ಕೋರಿದ ಊರ್ವಶಿ ತಾಯಿ; ಫ್ಯಾನ್ಸ್ ಕೊಟ್ರು ಖಡಕ್ ತಿರುಗೇಟು

ಸದ್ಯ ರಿಷಭ್ ಅವರಿಗೆ ಮುಂಬೈನ ಕೋಕಿಲಾಬೇನ್ ಧೀರುಬಾಯ್ ಅಂಬಾನಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯ ಫೋಟೋನ ಊರ್ವಶಿ ಇನ್​​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಅನೇಕರು ಊರ್ವಶಿಯನ್ನು ಟೀಕೆ ಮಾಡಿದ್ದಾರೆ. ಪ್ರಚಾರಕ್ಕಾಗಿ ಊರ್ವಶಿ ಈ ರೀತಿ ಮಾಡುತ್ತಿದ್ದಾರೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಆದರೆ, ಈ ಬಗ್ಗೆ ಊರ್ವಶಿ ತಲೆಕೆಡಿಸಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:48 am, Fri, 6 January 23

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ