AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಬಿಟ್ಟೂ ಬಿಡದೆ ರಿಷಭ್ ಪಂತ್ ಹಿಂದೆ ಬಿದ್ದ ಊರ್ವಶಿ ರೌಟೇಲಾ; ನಟಿಗೆ ಛೀಮಾರಿ

ಕಳೆದ ಕೆಲ ದಿನಗಳಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದೇ ಇತ್ತು. ಈಗ ರಿಷಭ್ ಪಂತ್ ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿದೆ. ಈಗಲೂ ಊರ್ವಶಿ ಅವರು ರಿಷಭ್ ಅವರನ್ನು ಹಿಂಬಾಲಿಸಿದಂತಿದೆ.

Rishabh Pant: ಬಿಟ್ಟೂ ಬಿಡದೆ ರಿಷಭ್ ಪಂತ್ ಹಿಂದೆ ಬಿದ್ದ ಊರ್ವಶಿ ರೌಟೇಲಾ; ನಟಿಗೆ ಛೀಮಾರಿ
ಊರ್ವಶಿ
TV9 Web
| Edited By: |

Updated on:Jan 06, 2023 | 10:58 AM

Share

ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಸಿನಿಮಾಗಳ ಮೂಲಕ ಫೇಮಸ್ ಆದರು. ಅವರಿಗೆ ಈಗ ತಾವು ಮೂಲೆಗುಂಪು ಆಗುತ್ತಿದ್ದೇನೆ ಅನಿಸಿದೆಯೋ ಏನೋ. ಮತ್ತೆ ಫೇಮ್ ಪಡೆಯಲು ಕ್ರಿಕೆಟರ್ ರಿಷಭ್ ಪಂತ್ (Rishabh Pant) ಹಿಂದೆ ಬಿದ್ದಂತಿದೆ. ರಿಷಭ್ ಸುಮ್ಮನಿದ್ದರೂ ಇವರು ಮಾತ್ರ ಬಿಡುತ್ತಿಲ್ಲ. ಸದ್ಯ ರಿಷಭ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಮಯದಲ್ಲೂ ಊರ್ವಶಿ ಅವರು ರಿಷಭ್ ಹಿಂದೆ ಬಿದ್ದಿದ್ದಾರೆ. ಇದಕ್ಕೆ ಅನೇಕರು ಛೀಮಾರಿ ಹಾಕಿದ್ದಾರೆ.

ಊರ್ವಶಿ ಹಾಗೂ ರಿಷಭ್ ಪಂತ್ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿಲ್ಲ. ಈಗ ಇವರ ಮಧ್ಯೆ ಬ್ರೇಕಪ್ ಆಗಿದೆ ಎನ್ನಲಾಗಿದೆ. ಹೀಗಿರುವಾಗಲೇ ಊರ್ವಶಿ ರೌಟೇಲಾ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ‘ರಿಷಭ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು’ ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಇದಕ್ಕೆ ರಿಷಭ್ ಪಂತ್ ಖಡಕ್ ಆಗಿ ತಿರುಗೇಟು ನೀಡುವ ಕೆಲಸ ಮಾಡಿದ್ದರು.

ಕಳೆದ ಕೆಲ ದಿನಗಳಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದೇ ಇತ್ತು. ಈಗ ರಿಷಭ್ ಪಂತ್ ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿದೆ. ಈಗಲೂ ಊರ್ವಶಿ ಅವರು ರಿಷಭ್ ಅವರನ್ನು ಹಿಂಬಾಲಿಸಿದಂತಿದೆ. ರಿಷಭ್​ಗೆ ಅಪಘಾತದ ವಿಚಾರ ತಿಳಿದಾಗ ‘ಪ್ರಾರ್ಥನೆ’ ಎಂದು ಬರೆದುಕೊಂಡಿದ್ದರು. ಇದು ರಿಷಭ್​​ಗಾಗಿ ಹೇಳಿದ ಮಾತು ಎನ್ನಲಾಗಿತ್ತು. ಊರ್ವಶಿ ತಾಯಿ ‘ರಿಷಭ್ ಬೇಗ ಚೇತರಿಕೆ ಕಾಣಲಿ’ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಊರ್ವಶಿಯನ್ನು ಟೀಕೆ ಮಾಡಲಾಗಿತ್ತು.

ಇದನ್ನೂ ಓದಿ
Image
‘ಆರ್​​ಪಿ ಎಂದರೆ ರಿಷಬ್ ಪಂತ್ ಅಲ್ಲ’; ಬಹುದಿನಗಳ ವದಂತಿ ಬಗ್ಗೆ ಮೌನ ಮುರಿದ ನಟಿ ಊರ್ವಶಿ ರೌಟೇಲಾ
Image
‘ನಾನು ರಿಷಭ್ ಪಂತ್​ಗೆ ಕ್ಷಮೆ ಕೇಳಿದ್ದಲ್ಲ..’; ಮತ್ತೆ ಪ್ಲೇಟ್ ಬದಲಿಸಿದ ನಟಿ ಊರ್ವಶಿ ರೌಟೇಲಾ
Image
ಯಾರೀ ಊರ್ವಶಿ ಎಂದ ಪಾಕ್ ಬೌಲರ್; ಕೋಪಗೊಂಡ ಬಾಲಿವುಡ್ ನಟಿ ಮಾಡಿದ್ದೇನು ಗೊತ್ತಾ?
Image
Urvashi Rautela: ಪಾಕಿಸ್ತಾನ ಕ್ರಿಕೆಟಿಗನ ಜೊತೆ ರೊಮ್ಯಾಂಟಿಕ್ ವಿಡಿಯೋ ಹಂಚಿಕೊಂಡ ಊರ್ವಶಿ ರೌಟೇಲ

ಇದನ್ನೂ ಓದಿ: ರಿಷಭ್ ಪಂತ್ ಬೇಗ ಗುಣಮುಖರಾಗಲಿ ಎಂದು ಕೋರಿದ ಊರ್ವಶಿ ತಾಯಿ; ಫ್ಯಾನ್ಸ್ ಕೊಟ್ರು ಖಡಕ್ ತಿರುಗೇಟು

ಸದ್ಯ ರಿಷಭ್ ಅವರಿಗೆ ಮುಂಬೈನ ಕೋಕಿಲಾಬೇನ್ ಧೀರುಬಾಯ್ ಅಂಬಾನಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯ ಫೋಟೋನ ಊರ್ವಶಿ ಇನ್​​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಅನೇಕರು ಊರ್ವಶಿಯನ್ನು ಟೀಕೆ ಮಾಡಿದ್ದಾರೆ. ಪ್ರಚಾರಕ್ಕಾಗಿ ಊರ್ವಶಿ ಈ ರೀತಿ ಮಾಡುತ್ತಿದ್ದಾರೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಆದರೆ, ಈ ಬಗ್ಗೆ ಊರ್ವಶಿ ತಲೆಕೆಡಿಸಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:48 am, Fri, 6 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು