Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಭ್ ಪಂತ್ ಬೇಗ ಗುಣಮುಖರಾಗಲಿ ಎಂದು ಕೋರಿದ ಊರ್ವಶಿ ತಾಯಿ; ಫ್ಯಾನ್ಸ್ ಕೊಟ್ರು ಖಡಕ್ ತಿರುಗೇಟು

Urvashi Rautela: ’ರಿಷಭ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸೋಣ’ ಎಂದು ಮೀರಾ ರೌಟೇಲಾ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದರು. ಅನೇಕರು ಇದನ್ನು ಟೀಕಿಸಿದ್ದಾರೆ.

ರಿಷಭ್ ಪಂತ್ ಬೇಗ ಗುಣಮುಖರಾಗಲಿ ಎಂದು ಕೋರಿದ ಊರ್ವಶಿ ತಾಯಿ; ಫ್ಯಾನ್ಸ್ ಕೊಟ್ರು ಖಡಕ್ ತಿರುಗೇಟು
ಮೀರಾ-ರಿಷಭ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 04, 2023 | 12:09 PM

ರಿಷಭ್ ಪಂತ್ (Rishabh Pant) ಅವರು ಇತ್ತೀಚೆಗೆ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ರಿಷಭ್ ಪಂತ್​ಗೆ ಚಿಕಿತ್ಸೆ ಮುಂದುವರಿದಿದೆ. ಅನೇಕರು ರಿಷಭ್ ಪಂತ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಲಾಗುತ್ತಿದೆ. ಊರ್ವಶಿ ರೌಟೇಲಾ (Urvashi Rautela) ಅವರ ತಾಯಿ ಮೀರಾ ರೌಟೇಲಾ ಕೂಡ ರಿಷಭ್ ಬೇಗ ಗುಣಮುಖರಾಗಲಿ ಎಂದು ಕೋರಿದ್ದರು. ಈ ವಿಚಾರದಲ್ಲಿ ಅವರು ಟ್ರೋಲ್ ಆಗಿದ್ದಾರೆ.

ರಿಷಭ್ ಪಂತ್ ಅವರು ಕಾರಿನಲ್ಲಿ ದೆಹಲಿ-ಡೆಹಾರಾಡೂನ್ ಹೈವೇಯಲ್ಲಿ ಡಿಸೆಂಬರ್ 30ರಂದು ಪ್ರಯಾಣ ಮಾಡುವಾಗ ಅಪಘಾತ ಸಂಭವಿಸಿತ್ತು. ಅವರ ಕಾರು ಹೊತ್ತಿ ಉರಿದಿತ್ತು. ಅವರು ಅದೃಷ್ಟರೀತಿಯಲ್ಲಿ ಬಚಾವ್ ಆಗಿದ್ದರು. ಅವರನ್ನು ಡೆಹಾರಾಡೂನ್​​ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ
Image
‘ಆರ್​​ಪಿ ಎಂದರೆ ರಿಷಬ್ ಪಂತ್ ಅಲ್ಲ’; ಬಹುದಿನಗಳ ವದಂತಿ ಬಗ್ಗೆ ಮೌನ ಮುರಿದ ನಟಿ ಊರ್ವಶಿ ರೌಟೇಲಾ
Image
‘ನಾನು ರಿಷಭ್ ಪಂತ್​ಗೆ ಕ್ಷಮೆ ಕೇಳಿದ್ದಲ್ಲ..’; ಮತ್ತೆ ಪ್ಲೇಟ್ ಬದಲಿಸಿದ ನಟಿ ಊರ್ವಶಿ ರೌಟೇಲಾ
Image
ಯಾರೀ ಊರ್ವಶಿ ಎಂದ ಪಾಕ್ ಬೌಲರ್; ಕೋಪಗೊಂಡ ಬಾಲಿವುಡ್ ನಟಿ ಮಾಡಿದ್ದೇನು ಗೊತ್ತಾ?
Image
Urvashi Rautela: ಪಾಕಿಸ್ತಾನ ಕ್ರಿಕೆಟಿಗನ ಜೊತೆ ರೊಮ್ಯಾಂಟಿಕ್ ವಿಡಿಯೋ ಹಂಚಿಕೊಂಡ ಊರ್ವಶಿ ರೌಟೇಲ

ಊರ್ವಶಿ ರೌಟೇಲಾ ತಾಯಿ ರಿಷಭ್ ಪಂತ್ ಫೋಟೋ ಹಾಕಿದ್ದರು. ಈ ಫೋಟೋಗೆ ‘ಸೋಶಿಯಲ್ ಮೀಡಿಯಾದ ವದಂತಿಗಳು ಒಂದು ಕಡೆ, ನಿಮ್ಮ ಆರೋಗ್ಯ ಇನ್ನೊಂದು ಕಡೆ. ರಿಷಭ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸೋಣ’ ಎಂದು ಮೀರಾ ರೌಟೇಲಾ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದರು. ಅನೇಕರು ಇದನ್ನು ಟೀಕಿಸಿದ್ದಾರೆ.  ಖಡಕ್ ಆಗಿ ಹೇಳಿದ್ದಾರೆ.

‘ಅಳಿಯನ ಪರವಾಗಿ ಅತ್ತೆ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ’ ಎಂದು ಒಂದಷ್ಟು ಮಂದಿ ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಇದು ಊರ್ವಶಿ ಅವರ ಕೆಲಸ ಎಂದಿದ್ದಾರೆ. ‘ಊರ್ವಶಿ ಅವರೇ ನಿಮ್ಮ ನಿಜವಾದ ಖಾತೆಯಿಂದ ಈ ಪೋಸ್ಟ್​​ನ ಪೋಸ್ಟ್ ಮಾಡಿ. ಬೇರೆ ಯಾವುದೋ ಖಾತೆಯಿಂದ ಇದನ್ನು ಹಾಕುವುದಲ್ಲ’ ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ‘ಆರ್​​ಪಿ ಎಂದರೆ ರಿಷಬ್ ಪಂತ್ ಅಲ್ಲ’; ಬಹುದಿನಗಳ ವದಂತಿ ಬಗ್ಗೆ ಮೌನ ಮುರಿದ ನಟಿ ಊರ್ವಶಿ ರೌಟೇಲಾ

 ಕೆಲವೇ ಸೆಕೆಂಡ್ ವಿಡಿಯೋಗೆ 15 ಕೋಟಿ ರೂ. ಪಡೆದ ಊರ್ವಶಿ

ನೆಟ್​ಫ್ಲಿಕ್ಸ್ ಇತ್ತೀಚೆಗೆ ವಿಡಿಯೋ ಒಂದನ್ನು ಹಂಚಿಕೊಂಡಿತ್ತು​​. ತನ್ನ ಪ್ಲಾಟ್​ಫಾರ್ಮ್​ನಲ್ಲಿರುವ ಸಿನಿಮಾಗಳ ಪಾತ್ರಗಳನ್ನೇ ಇಟ್ಟುಕೊಂಡು ವಿಡಿಯೋ ಮಾಡಲಾಗಿದೆ. ಈ ವಿಡಿಯೋದಲ್ಲಿ ಉರ್ಫಿ ಜಾವೇದ್ ಮೊದಲಾದವರು ಇದ್ದಾರೆ. ಊರ್ವಶಿ ಅವರು ಕೂಡ ಈ ವಿಡಿಯೋದಲ್ಲಿದ್ದಾರೆ.  ಹಾಲಿವುಡ್​ ನಟ ರೈನ್​ ಗಾಸ್ಲಿಂಗ್ ಹಾಗೂ ಊರ್ವಶಿ ಎದುರುಬದುರು ಕೂತಿರುತ್ತಾರೆ. ಊರ್ವಶಿ ಕೈ ಮೇಲೆ ‘RP’ ಎಂದು ಬರೆದುಕೊಂಡಿದ್ದಾರೆ. P ಮೇಲೆ ಗೀಟು ಹಾಕಿ ‘ಜಿ’ ಎಂದು ಬರೆದುಕೊಂಡಿದ್ದಾರೆ. ಆರ್​ ಜಿ ಎಂದರೆ ರೈನ್​ ಗಾಸ್ಲಿಂಗ್ ಎಂದರ್ಥ. ಕೆಲವೇ ಸೆಕೆಂಡ್​ನಲ್ಲಿ ಮುಗಿಯುವ ಈ ದೃಶ್ಯಕ್ಕೆ ಅವರು 15 ಕೋಟಿ ರೂ. ಚಾರ್ಜ್​ ಮಾಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:09 pm, Wed, 4 January 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​