AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ನಿಮಿಷಕ್ಕೆ ಒಂದು ಕೋಟಿ ಸಂಭಾವನೆ ಪಡೆಯುವುದಾಗಿ ಹೇಳಿದ ಊರ್ವಶಿ ರೌಟೆಲ್ಲಾ: ಹೌಹಾರಿದ ನೆಟ್ಟಿಗರು

Urvashi Rautela: ಐಟಂ ಹಾಡುಗಳು, ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಸದಾ ಸುದ್ದಿಯಲ್ಲಿರುವ ನಟಿ ಊರ್ವಶಿ ರೌಟೆಲ್ಲಾ, ತಾವು ಒಂದು ನಿಮಿಷಕ್ಕೆ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆಯುವುದಾಗಿ ಹೇಳಿದ್ದಾರೆ. ನಟಿಯ ಹೇಳಿಕೆಯನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

ಒಂದು ನಿಮಿಷಕ್ಕೆ ಒಂದು ಕೋಟಿ ಸಂಭಾವನೆ ಪಡೆಯುವುದಾಗಿ ಹೇಳಿದ ಊರ್ವಶಿ ರೌಟೆಲ್ಲಾ: ಹೌಹಾರಿದ ನೆಟ್ಟಿಗರು
ಊರ್ವಶಿ ರೌಟೆಲ್ಲಾ
ಮಂಜುನಾಥ ಸಿ.
|

Updated on: Aug 30, 2023 | 9:14 PM

Share

ನಟಿ ಊರ್ವಶಿ ರೌಟೆಲ್ಲಾ (Urvashi Rautela) ಸಿನಿಮಾಗಳಿಗಿಂತಲೂ ಹೆಚ್ಚಾಗಿ ಫೋಟೊಶೂಟ್, ಜಾಹೀರಾತುಗಳು, ಲೈವ್ ಫರ್ಮಾಮೆನ್ಸ್​ಗಳಿಂದ ಸುದ್ದಿಯಾಗಿದ್ದಾರೆ. ಅದರಲ್ಲಿಯೂ ರಿಷಬ್ ಪಂತ್ ಹಿಂದೆ ಬಿದ್ದು ಸಖತ್ ಟ್ರೋಲ್ ಆಗಿದ್ದರು, ಪೆದ್ದು ಪೆದ್ದಾಗಿ ಹೇಳಿಕೆಗಳಿಂದ ಈಗಲೂ ಟ್ರೋಲ್ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಾವು ಒಂದು ನಿಮಿಷಕ್ಕೆ ಒಂದು ಕೋಟಿ ಚಾರ್ಜ್ ಮಾಡುತ್ತಿರುವುದಾಗಿ ಕೇಳಿದ ಪ್ರಶ್ನೆಗೆ ಹೌದೆಂದಿರುವ ನಟಿ, ನನ್ನಂತೆ ಎಲ್ಲರೂ ದುಬಾರಿ ಸಂಭಾವನೆ ಪಡೆಯಬಹುದು ಎಂದು ಹೇಳಿದ್ದಾರೆ ಸಹ.

ಯೂಟ್ಯೂಬ್ ಚಾನೆಲ್ ಒಂದರ ನಿರೂಪಕ, ‘ನೀವು ಭಾರತದ ಅತಿ ಹೆಚ್ಚು ಸಂಭಾವನೆ ಪಡೆವ ನಟಿ, ಒಂದು ನಿಮಿಷಕ್ಕೆ ಒಂದು ಕೋಟಿ ಚಾರ್ಜ್ ಮಾಡುತ್ತೀರ? ಇದೆಲ್ಲ ಹೇಗೆ ಸಾಧ್ಯವಾಯಿತು, ಇಷ್ಟು ದೊಡ್ಡ ಸಂಭಾವನೆ ಪಡೆಯುತ್ತಿರುವ ಬಗ್ಗೆ ಅಭಿಪ್ರಾಯವೇನು?’ ಎಂದು ಕೇಳಿದ್ದಾರೆ. ಪತ್ರಕರ್ತನ ಮಾತಿಗೆ ಸಮ್ಮತಿ ಸೂಚಿಸಿರುವ ನಟಿ ಊರ್ವಶಿ ರೌಟೆಲ್ಲಾ, ‘ಇದು ಬಹಳ ಒಳ್ಳೆಯದು, ಸ್ವ ಪರಿಶ್ರಮದಿಂದ ಮೇಲೆ ಬಂದ ಪ್ರತಿಯೊಬ್ಬ ನಟ-ನಟಿಯರೂ ಇಂಥಹಾ ಒಂದು ದಿನಗಳನ್ನು ನೋಡಲಿ” ಎಂದಿದ್ದಾರೆ.

ಆದರೆ ಊರ್ವಶಿಯ ಈ ಹೇಳಿಕೆಗೆ ಕೇಳಿ ನೆಟ್ಟಿಗರು ಮತ್ತೆ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಒಂದು ನಿಮಿಷಕ್ಕೆ ಒಂದು ಕೋಟಿ ಸಂಭಾವನೆಯನ್ನು ಬಾಲಿವುಡ್ ಟಾಪ್ ನಟಿಯರಾದ ದೀಪಿಕಾ, ಆಲಿಯಾ ಅವರುಗಳೇ ಪಡೆಯುವುದಿಲ್ಲ, ಕೈಯಲ್ಲಿ ಒಂದೂ ಸಿನಿಮಾಗಳಿಲ್ಲದ ಊರ್ವಶಿ ಹೇಗೆ ಒಂದು ನಿಮಿಷಕ್ಕೆ ಒಂದು ಕೋಟಿ ಸಂಭಾವನೆ ಪಡೆಯಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಹೀಗೆಯೇ ಸುಳ್ಳು ಹೇಳಿಕೊಂಡು ಓಡಾಡುವುದರಿಂದ ದೊಡ್ಡ ನಟಿ ಎನಿಸಿಕೊಳ್ಳಲಾಗುವುದಿಲ್ಲ, ಶ್ರಮ ಹಾಕಿ ಕೆಲಸ ಮಾಡಬೇಕು ಎಂದಿದ್ದಾರೆ.

ಇದನ್ನೂ ಓದಿ:ಹೊಸ ಮನೆ ಖರೀದಿಸಿದ ಊರ್ವಶಿ ರೌಟೆಲಾ, ಮನೆಯ ಮೌಲ್ಯ 150 ಕೋಟಿಗೂ ಅಧಿಕ

ಊರ್ವಶಿ ರೌಟೆಲ್ಲಾ ಈವರೆಗೆ ಕಾಣಿಸಿಕೊಂಡಿರುವುದು ಸುಮಾರು 12-13 ಸಿನಿಮಾಗಳಲ್ಲಿ ಮಾತ್ರ. ಅವುಗಳಲ್ಲಿಯೂ ನಾಯಕಿಯಾಗಿ ನಟಿಸಿರುವುದು ಬಹಳ ಕಡಿಮೆ. ಕನ್ನಡದ ‘ಐರಾವತ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಊರ್ವಶಿ ಹೆಚ್ಚಾಗಿ ಐಟಂ ಹಾಡುಗಳಲ್ಲಿಯೇ ಕಾಣಿಸಿಕೊಳ್ಳುತ್ತಾರೆ. ಇತ್ತೀಚೆಗಂತೂ ಕೇವಲ ಐಟಂ ಹಾಡುಗಳಿಗೆ ಮಾತ್ರವೇ ಊರ್ವಶಿಯನ್ನು ಸೀಮಿತಗೊಳಿಸಿದಂತಿದೆ ಚಿತ್ರರಂಗ. ಆದರೂ ಊರ್ವಶಿ ತಾವು ಒಂದು ನಿಮಿಷಕ್ಕೆ ಒಂದು ಕೋಟಿ ಚಾರ್ಜ್ ಮಾಡುವುದಾಗಿ ಹೇಳಿ ಆಶ್ಚರ್ಯ ಮೂಡಿಸಿದ್ದಾರೆ.

ಊರ್ವಶಿ ರೌಟೆಲ್ಲಾ ಆಗಾಗ್ಗೆ ಹೀಗೆ ಪೆದ್ದು ಪೆದ್ದು ಹೇಳಿಕೆಗಳಿಂದಾಗಿ ಟ್ರೋಲ್​ಗೆ ಗುರಿಯಾಗುತ್ತಿರುತ್ತಾರೆ. ರಿಷಬ್ ಪಂಥ್ ತಮ್ಮ ಹಿಂದೆ ಬಿದ್ದಿದ್ದಾರೆಂದು ಹೇಳಿ ತೀವ್ರ ಟ್ರೋಲ್​ಗೆ ಒಳಗಾಗಿದ್ದರು. ರಿಷಬ್ ಆಡುವ ಮ್ಯಾಚ್​ಗಳಿಗೆ ಹೋಗುವ ಮೂಲಕ ಪ್ರಚಾರ ಪಡೆದುಕೊಂಡರು. ರಿಷಬ್​ ಗೆ ಅಪಘಾತವಾಗಿದ್ದಾಗ ಅವರು ದಾಖಲಾಗಿದ್ದ ಆಸ್ಪತ್ರೆ ಚಿತ್ರವನ್ನು ಹಂಚಿಕೊಂಡಿದ್ದರು.

ಸಿನಿಮಾಗಳ ವಿಷಯಕ್ಕೆ ಬರುವುದಾದರೆ, 2022 ರಲ್ಲಿ ತೆರೆಗೆ ಬಂದಿದ್ದ ‘ದಿ ಲೆಜೆಂಡ್’ ಸಿನಿಮಾದಲ್ಲಿ ಊರ್ವಶಿ ನಾಯಕಿಯಾಗಿ ನಟಿಸಿದ್ದರು. ಆ ಸಿನಿಮಾದಲ್ಲಿ ಸರವಣನ್ ನಾಯಕನಾಗಿ ನಟಿಸಿದ್ದರು. ಆ ಸಿನಿಮಾ ಸಖತ್ ಟ್ರೋಲ್ ಆಗಿತ್ತು. ಅದಾದ ಬಳಿಕ ಯಾವುದೇ ಸಿನಿಮಾದಲ್ಲಿ ಊರ್ವಶಿ ನಾಯಕಿಯಾಗಿ ನಟಿಸಿಲ್ಲ. ತೆಲುಗಿನ ‘ವಾಲ್ಟರ್ ವೀರಯ್ಯ’, ‘ಏಜೆಂಟ್’, ‘ಬ್ರೋ’ ಸಿನಿಮಾಗಳಲ್ಲಿ ಐಟಂ ಹಾಡುಗಳಲ್ಲಿ ಊರ್ವಶಿ ಕಾಣಿಸಿಕೊಂಡಿದ್ದಾರೆ. ತೆಲುಗಿನ ಇನ್ನೂ ಎರಡು ಸಿನಿಮಾಗಳಲ್ಲಿ ಐಟಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ