ಭಾರತ-ಪಾಕ್ ಪಂದ್ಯದ ವೇಳೆ ಚಿನ್ನದ ಫೋನ್ ಕಳೆದುಕೊಂಡ ಊರ್ವಶಿ: ಟ್ರೋಲ್ ಮಾಡಿದ ನೆಟ್ಟಿಗರು

Urvashi Rautela: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಪಾಕಿಸ್ತಾನ ಮ್ಯಾಚ್ ನೋಡಲು ಹೋಗಿದ್ದ ನಟಿ ಊರ್ವಶಿ ರೌಟೆಲ್ಲಾ ತಮ್ಮ ಚಿನ್ನದ ಐಫೋನ್ ಅನ್ನು ಕಳೆದುಕೊಂಡಿದ್ದಾರಂತೆ.

ಭಾರತ-ಪಾಕ್ ಪಂದ್ಯದ ವೇಳೆ ಚಿನ್ನದ ಫೋನ್ ಕಳೆದುಕೊಂಡ ಊರ್ವಶಿ: ಟ್ರೋಲ್ ಮಾಡಿದ ನೆಟ್ಟಿಗರು
Follow us
|

Updated on: Oct 15, 2023 | 3:47 PM

ನಿನ್ನೆ (ಅಕ್ಟೋಬರ್ 14) ಅಹಮದಾಬಾದ್​ನ ನರೇಂದ್ರ ಮೋದಿ (Narendra Modi) ಸ್ಟೇಡಿಯಂ ನಲ್ಲಿ ನಡೆದ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಾಟ ನೋಡಲು ಹಲವು ಜನಪ್ರಿಯ ಸೆಲೆಬ್ರಿಟಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಗೃಹ ಮಂತ್ರಿ ಅಮಿತ್ ಶಾ ಅವರಿಂದ ಹಿಡಿದು ಹಲವು ಬಾಲಿವುಡ್ (Bollywood) ತಾರೆಯರು, ಸ್ಯಾಂಡಲ್​ವುಡ್ ತಾರೆ ರಮ್ಯಾ ಸೇರಿದಂತೆ ಇನ್ನೂ ಹಲವರು ಭಾರತ-ಪಾಕಿಸ್ತಾನ ಪಂದ್ಯವನ್ನು ಕಣ್​ ತುಂಬಿಕೊಂಡರು. ಬಾಲಿವುಡ್​ನ ಜನಪ್ರಿಯ ನಟಿ ಊರ್ವಶಿ ರೌಟೆಲ್ಲಾ ಸಹ ಪಂದ್ಯ ನೋಡಲು ಬಂದಿದ್ದರು. ಆದರೆ ಪಂದ್ಯ ನೋಡುವಾಗ ಅವರು ತಮ್ಮ ಅತ್ಯಂತ ದುಬಾರಿ ಐಫೋನ್ ಅನ್ನು ಕಳೆದುಕೊಂಡಿದ್ದಾರಂತೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

”ನನ್ನ 24 ಕ್ಯಾರೆಟ್ ಚಿನ್ನದ ಐಫೋನ್ ಅನ್ನು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಮ್ಯಾಚ್ ನಡೆಯುವಾಗ ಕಳೆದುಕೊಂಡಿದ್ದೇನೆ. ದಯವಿಟ್ಟು ಸಹಾಯ ಮಾಡಿ, ಯಾರಿಗಾದರೂ ಮೊಬೈಲ್ ಸಿಕ್ಕರೆ ಮರಳಿಸಿ, ಅಥವಾ ನನ್ನನ್ನು ಸಂಪರ್ಕಿಸಿ” ಎಂದು ಊರ್ವಶಿ ರೌಟೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಈ ಪೋಸ್ಟ್ ಅನ್ನು ಅಹಮದಾಬಾದ್ ಪೊಲೀಸರಿಗೆ ಹಾಗೂ ನರೇಂದ್ರ ಮೋದಿ ಸ್ಟೇಡಿಯಂನ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಒಂದು ನಿಮಿಷಕ್ಕೆ ಒಂದು ಕೋಟಿ ಸಂಭಾವನೆ ಪಡೆಯುತ್ತಾರಾ ಊರ್ವಶಿ ರೌಟೆಲ್ಲಾ?

ಆದರೆ ಊರ್ವಶಿ ರೌಟೆಲ್ಲಾರ ಈ ಪೋಸ್ಟ್ ಅನ್ನು ಹಲವರು ಟ್ರೋಲ್ ಮಾಡಿದ್ದಾರೆ. ಊರ್ವಶಿ ರೌಟೆಲ್ಲಾ ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲವರು ದೂರಿದ್ದಾರೆ. ಇದೊಂದು ಪ್ರಚಾರ ಪಡೆಯುವ ತಂತ್ರ ಎಂದು ಕೆಲವರು ಆರೋಪ ಮಾಡಿದ್ದಾರೆ. ಇನ್ನು ಕೆಲವರು ಚಿನ್ನದ ಫೋನು ಸಿಕ್ಕಿದವನು ಅದೃಷ್ಟ ಮಾಡಿದ್ದಾನೆ ಎಂತಲೂ, ಚಿನ್ನದ ಫೋನು ಸಿಕ್ಕವರು ಯಾರಾದರೂ ವಾಪಸ್ ಕೊಡುತ್ತಾರೆಯೇ ಎಂದು ಕುಹುಕವಾಡಿದ್ದಾರೆ.

ಊರ್ವಶಿ ರೌಟೆಲ್ಲಾ, ಟ್ರೋಲಿಗರ ನೆಚ್ಚಿನ ನಟಿ. ಕ್ರಿಕೆಟಿಗ ರಿಷಬ್ ಪಂಥ್​ ಬಗ್ಗೆ ಇಲ್ಲ ಸಲ್ಲದ ಮಾತನಾಡಿ ಊರ್ವಶಿ ಸಖತ್ ಟ್ರೋಲ್ ಆಗಿದ್ದರು. ರಿಷಬ್ ಆಡುವ ಪಂದ್ಯಗಳಿಗೆ ಹೋಗಿ ರಿಷಬ್​ಗೆ ಇರುಸು-ಮುರುಸು ಉಂಟು ಮಾಡಿದ್ದರು ಸಹ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿ, ತಾನು ಪ್ರತಿ ಸಿನಿಮಾಕ್ಕೆ ನೂರು ಕೋಟಿ ಸಂಭಾವನೆ ಪಡೆಯುವುದಾಗಿ ಹೇಳಿಕೊಂಡಿದ್ದರು. ಊರ್ವಶಿಯ ಈ ಹೇಳಿಕೆ ಸಹ ಸಖತ್ ಟ್ರೋಲ್ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ