AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varun Dhawan: ವರುಣ್ ಧವನ್ ಹಾಗೂ ನತಾಶಾ ದಲಾಲ್ ದಂಪತಿಗೆ ಹೆಣ್ಣು ಮಗು

ವರುಣ್ ಧವನ್ ಹಾಗೂ ಡೇವಿಡ್ ಮುಂಬೈನ ಖಾಸಗಿ ಆಸ್ಪತ್ರೆಗೆ ನಡೆದು ಹೊರಟಿದ್ದರು. ಈ ವೇಳೆ ಅಲ್ಲಿದ್ದ ಪಾಪರಾಜಿಗಳು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ‘ವರುಣ್​ಗೆ ಹೆಣ್ಣು ಮಗು ಜನಿಸಿದ್ದು ನಿಜವೇ’ ಎಂದು ಕೇಳಲಾಗಿದೆ. ಇದಕ್ಕೆ ಡೇವಿಡ್ ಅವರು ಹೌದು ಎಂದಿದ್ದಾರೆ. ಇದರ ಜೊತೆಗೆ ವಿಶ್ ಮಾಡಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ.  

Varun Dhawan: ವರುಣ್ ಧವನ್ ಹಾಗೂ ನತಾಶಾ ದಲಾಲ್ ದಂಪತಿಗೆ ಹೆಣ್ಣು ಮಗು
ವರುಣ್​-ನತಾಶಾ
ರಾಜೇಶ್ ದುಗ್ಗುಮನೆ
|

Updated on: Jun 04, 2024 | 6:58 AM

Share

ಬಾಲಿವುಡ್​ನ ಸೆಲೆಬ್ರಿಟಿ ಜೋಡಿ ವರುಣ್ ಧವನ್ ಹಾಗೂ ನತಾಶಾ ದಲಾಲ್ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ. ಈ ವಿಚಾರವನ್ನು ವರುಣ್ ತಂದೆ ಡೇವಿಡ್ ಧವನ್ (David Dhawan) ಅವರು ಖಚಿತಪಡಿಸಿದ್ದಾರೆ. ಸದ್ಯ ವರುಣ್ ಹಾಗೂ ಪತ್ನಿ ನತಾಶಾಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಈ ದಂಪತಿ ಮಗುವಿನ ಮುಖ ರಿವೀಲ್ ಮಾಡಲಿ ಎಂದು ಬಯಸುತ್ತಿದ್ದಾರೆ.

ವರುಣ್ ಧವನ್ ಹಾಗೂ ಡೇವಿಡ್ ಮುಂಬೈನ ಖಾಸಗಿ ಆಸ್ಪತ್ರೆಗೆ ನಡೆದು ಹೊರಟಿದ್ದರು. ಈ ವೇಳೆ ಅಲ್ಲಿದ್ದ ಪಾಪರಾಜಿಗಳು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ‘ವರುಣ್​ಗೆ ಹೆಣ್ಣು ಮಗು ಜನಿಸಿದ್ದು ನಿಜವೇ’ ಎಂದು ಕೇಳಲಾಗಿದೆ. ಇದಕ್ಕೆ ಡೇವಿಡ್ ಅವರು ಹೌದು ಎಂದಿದ್ದಾರೆ. ಇದರ ಜೊತೆಗೆ ವಿಶ್ ಮಾಡಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ.

ನತಾಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಈ ಮೊದಲು ವರದಿ ಆಗಿತ್ತು. ‘ನತಾಶಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವಾರ ಮಗು ಜನಿಸಬಹುದು. ವರುಣ್ ಧವನ್ ಅವರು ಸದ್ಯ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಅವರ ಬಳಿಯೇ ಇರಲು ನಿರ್ಧರಿಸಿದ್ದಾರೆ’ ಎಂದು ವರದಿ ಆಗಿತ್ತು. ಈಗ ನತಾಶಾ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ. ಇದರಿಂದ ಅಪ್ಪ ಆದ ಖುಷಿಯಲ್ಲಿ ವರುಣ್ ಇದ್ದಾರೆ.

ವರುಣ್ ಧವನ್ ಅವರು ಹೀರೋ ಆಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ನತಾಶಾ ದಲಾಲ್ ಅವರು ಫ್ಯಾಷನ್ ಡಿಸೈನರ್ ಆಗಿದ್ದಾರೆ. ಈ ಜೋಡಿ ಕೊರೊನಾ ಸಮಯದಲ್ಲಿ ಮದುವೆ ಆಗಿದ್ದರು. ಇವರು ವಿವಾಹ ಆಗಿದ್ದು 2021ರ ಜನವರಿ 24ರಂದು. ಅಲಿಭಾಗ್​ನಲ್ಲಿ ಆಪ್ತರು ಹಾಗೂ ಕುಟುಂಬದವರ ಜೊತೆ ಮದುವೆ ಆಗಿದ್ದರು.

ಇದನ್ನೂ ಓದಿ: ಐಪಿಎಲ್ ಭದ್ರತಾ ಸಿಬ್ಬಂದಿ ವಿರುದ್ಧ ನಟ ವರುಣ್ ಧವನ್ ಆಕ್ರೋಶ

ವರುಣ್ ಧವನ್ ಅವರು ‘ಬೇಬಿ ಜಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎ. ಕಲೀಶ್ವರನ್ ಅವರು ಇದನ್ನು ನಿರ್ದೇಶಿಸುತ್ತಿದ್ದ, ಮುರದ್ ಖೇತಾನಿ ಇದನ್ನು ನಿರ್ಮಿಸುತ್ತಿದ್ದಾರೆ. ಪ್ರಿಯಾ ಅಟ್ಲೀ ಹಾಗೂ ಜ್ಯೋತಿ ದೇಶಪಾಂಡೆ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ