AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ನಿಧನರಾದ ವರುಣ್​ ಧವನ್​ ಕಾರು ಚಾಲಕ; ಕುಟುಂಬಕ್ಕೆ ಬೆಂಬಲವಾಗಿ ನಿಂತ ಸ್ಟಾರ್​ ನಟ

Varun Dhawan Car Driver Death: ವರುಣ್ ಧವನ್​ ಕಾರು ಚಾಲಕ ಮನೋಜ್​ಗೆ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅವರ ಜತೆ ವರುಣ್​ ಧವನ್​ ಕೂಡ ಇದ್ದರು.

ಹೃದಯಾಘಾತದಿಂದ ನಿಧನರಾದ ವರುಣ್​ ಧವನ್​ ಕಾರು ಚಾಲಕ; ಕುಟುಂಬಕ್ಕೆ ಬೆಂಬಲವಾಗಿ ನಿಂತ ಸ್ಟಾರ್​ ನಟ
ಕಾರು ಚಾಲಕ ಮನೋಜ್​ ಜೊತೆ ವರುಣ್​ ಧವನ್​
TV9 Web
| Edited By: |

Updated on: Jan 19, 2022 | 8:10 AM

Share

ಬಾಲಿವುಡ್​ನ ಸ್ಟಾರ್​ ನಟ ವರುಣ್​ ಧವನ್​ (Varun Dhawan) ಈಗ ನೋವಿನಲ್ಲಿದ್ದಾರೆ. ಅವರ ಕಾರು ಚಾಲಕ ಮನೋಜ್​ ಅವರು ಹೃದಯಾಘಾತದಿಂದ (Heart Attack) ಮೃತರಾಗಿದ್ದಾರೆ. ಈ ವಿಷಯ ತಿಳಿದು ವರುಣ್​ ಧವನ್​ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಮಂಗಳವಾರ (ಜ.18) ಮನೋಜ್​ ನಿಧನರಾಗಿದ್ದು, ಅವರ ಕುಟುಂಬಕ್ಕೆ ವರುಣ್​ ಧವನ್​ ಬೆಂಬಲವಾಗಿ ನಿಂತಿದ್ದಾರೆ. ಬಹುಕಾಲದಿಂದ ವರುಣ್​ಗೆ ಕಾರು ಚಾಲಕನಾಗಿ ಮನೋಜ್​ ಕೆಲಸ ಮಾಡುತ್ತಿದ್ದರು. ಅವರ ಜೊತೆಗೆ ವರುಣ್​ ತುಂಬ ಆಪ್ತವಾಗಿದ್ದರು ಎನ್ನಲಾಗಿದೆ. ಹಾಗಾಗಿ, ಕಾರು ಚಾಲಕನ ನಿಧನದಿಂದ ವರುಣ್​ ಧವನ್​ ತೀವ್ರ ವಿಚಲಿತರಾಗಿದ್ದಾರೆ. ಮಂಗಳವಾರ ಜಾಹೀರಾತು ಚಿತ್ರೀಕರಣವೊಂದರ ಸಲುವಾಗಿ ಅವರನ್ನು ಡ್ರಾಪ್​ ಮಾಡಿದ ಬಳಿಕ ಮನೋಜ್​ಗೆ ಎದೆ ನೋವು ಕಾಣಿಸಿಕೊಂಡಿತು. ಆಗ ಅವರಿಗೆ ಹೃದಯಾಘಾತ ಸಂಭವಿಸಿತು. ಕೂಡಲೇ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅವರ ಜತೆ ವರುಣ್​ ಧವನ್​ ಕೂಡ ಇದ್ದರು. ಆಸ್ಪತ್ರೆ ತಲುಪುವುದಕ್ಕೂ ಮುನ್ನವೇ ಮನೋಜ್​ ಮೃತರಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಈ ಸುದ್ದಿ ತಿಳಿದು ವರುಣ್​ ಧವನ್​ ತಂದೆ ಡೇವಿಡ್​ ಧವನ್​ ಕೂಡ ದೂರವಾಣಿ ಮೂಲಕ ಮಗನನ್ನು ಸಂತೈಸಿದ್ದಾರೆ ಎಂದು ವರದಿ ಆಗಿದೆ.

ಮನೋಜ್​ಗೆ ಎದೆನೋವು ಕಾಣಿಸಿಕೊಂಡ ತಕ್ಷಣ ವರುಣ್​ ಧವನ್​ ಅವರು ಚಿತ್ರೀಕರಣವನ್ನು ನಿಲ್ಲಿಸಿ ಆಸ್ಪತ್ರೆಯತ್ತ ಸಾಗಿದರು. ಆದರೆ ಮನೋಜ್​ ನಿಧನರಾಗಿದ್ದು ತಿಳಿದು ಅವರು ತೀವ್ರವಾಗಿ ದುಃಖಪಟ್ಟರು. ಎಲ್ಲ ಪ್ರಕ್ರಿಯೆಗಳು ಮುಗಿಯುವವರೆಗೂ ಅವರು ಆಸ್ಪತ್ರೆಯಲ್ಲೇ ಇದ್ದರು. ಆ ಮೂಲಕ ಕಾರು ಚಾಲಕನ ಕುಟುಂಬಕ್ಕೆ ಅವರು ಬೆಂಬಲವಾಗಿ ನಿಂತಿದ್ದಾರೆ.

ಕೆಲಸದ ವೇಳೆಯಲ್ಲೇ ಕಾರು ಚಾಲಕ ಮನೋಜ್​ ನಿಧನರಾಗಿದ್ದರಿಂದ ಅವರ ಕುಟುಂಬದ ಜವಾಬ್ದಾರಿಯನ್ನ ಹೊತ್ತುಕೊಳ್ಳಲು ವರುಣ್​ ಧವನ್​ ಮುಂದಾಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ನಟನೆ ಮಾತ್ರವಲ್ಲದೇ ಈ ರೀತಿಯ ಗುಣದಿಂದಾಗಿಯೂ ವರುಣ್​ ಧವನ್​ ಅವರು ಅನೇಕ ಜನರ ಮನಸ್ಸು ಗೆದ್ದಿದ್ದಾರೆ. ಸಮಾಜಮುಖಿ ಕಾರ್ಯಗಳಿಂದ ಅವರು ಗುರುತಿಸಿಕೊಂಡಿದ್ದಾರೆ.

ಅನೇಕ ಹಿಟ್ ಸಿನಿಮಾಗಳನ್ನು ನೀಡಿರುವ ವರುಣ್​ ಧವನ್​ ಅವರಿಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ‘ಭೇಡಿಯಾ’ ಸಿನಿಮಾದ ಚಿತ್ರೀಕರಣವನ್ನು ಅವರು ಸದ್ಯದಲ್ಲೇ ಆರಂಭಿಸಲಿದ್ದಾರೆ. ಆ ಚಿತ್ರಕ್ಕೆ ಅಮರ್​ ಕೌಶಿಕ್​ ನಿರ್ದೇಶನ ಮಾಡಲಿದ್ದು, ವರುಣ್​ ಧವನ್​ ಜೊತೆ ಕೃತಿ ಸನೋನ್​, ಅಭಿಷೇಕ್​ ಬ್ಯಾನರ್ಜಿ ಮುಂತಾದವರು ನಟಿಸಲಿದ್ದಾರೆ.

ಇದನ್ನು ಓದಿ:

ಬಾಲ್ಯದ ಗೆಳತಿ ನತಾಶಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್​ ಧವನ್

Heart Attack: ಹೃದಯಾಘಾತಕ್ಕೆ ಕಾರಣಗಳೇನು? ಈ ಬಗ್ಗೆ ವೈದ್ಯರು ಹೇಳುವುದೇನು?

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್