AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ನಿಧನರಾದ ವರುಣ್​ ಧವನ್​ ಕಾರು ಚಾಲಕ; ಕುಟುಂಬಕ್ಕೆ ಬೆಂಬಲವಾಗಿ ನಿಂತ ಸ್ಟಾರ್​ ನಟ

Varun Dhawan Car Driver Death: ವರುಣ್ ಧವನ್​ ಕಾರು ಚಾಲಕ ಮನೋಜ್​ಗೆ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅವರ ಜತೆ ವರುಣ್​ ಧವನ್​ ಕೂಡ ಇದ್ದರು.

ಹೃದಯಾಘಾತದಿಂದ ನಿಧನರಾದ ವರುಣ್​ ಧವನ್​ ಕಾರು ಚಾಲಕ; ಕುಟುಂಬಕ್ಕೆ ಬೆಂಬಲವಾಗಿ ನಿಂತ ಸ್ಟಾರ್​ ನಟ
ಕಾರು ಚಾಲಕ ಮನೋಜ್​ ಜೊತೆ ವರುಣ್​ ಧವನ್​
TV9 Web
| Updated By: ಮದನ್​ ಕುಮಾರ್​|

Updated on: Jan 19, 2022 | 8:10 AM

Share

ಬಾಲಿವುಡ್​ನ ಸ್ಟಾರ್​ ನಟ ವರುಣ್​ ಧವನ್​ (Varun Dhawan) ಈಗ ನೋವಿನಲ್ಲಿದ್ದಾರೆ. ಅವರ ಕಾರು ಚಾಲಕ ಮನೋಜ್​ ಅವರು ಹೃದಯಾಘಾತದಿಂದ (Heart Attack) ಮೃತರಾಗಿದ್ದಾರೆ. ಈ ವಿಷಯ ತಿಳಿದು ವರುಣ್​ ಧವನ್​ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಮಂಗಳವಾರ (ಜ.18) ಮನೋಜ್​ ನಿಧನರಾಗಿದ್ದು, ಅವರ ಕುಟುಂಬಕ್ಕೆ ವರುಣ್​ ಧವನ್​ ಬೆಂಬಲವಾಗಿ ನಿಂತಿದ್ದಾರೆ. ಬಹುಕಾಲದಿಂದ ವರುಣ್​ಗೆ ಕಾರು ಚಾಲಕನಾಗಿ ಮನೋಜ್​ ಕೆಲಸ ಮಾಡುತ್ತಿದ್ದರು. ಅವರ ಜೊತೆಗೆ ವರುಣ್​ ತುಂಬ ಆಪ್ತವಾಗಿದ್ದರು ಎನ್ನಲಾಗಿದೆ. ಹಾಗಾಗಿ, ಕಾರು ಚಾಲಕನ ನಿಧನದಿಂದ ವರುಣ್​ ಧವನ್​ ತೀವ್ರ ವಿಚಲಿತರಾಗಿದ್ದಾರೆ. ಮಂಗಳವಾರ ಜಾಹೀರಾತು ಚಿತ್ರೀಕರಣವೊಂದರ ಸಲುವಾಗಿ ಅವರನ್ನು ಡ್ರಾಪ್​ ಮಾಡಿದ ಬಳಿಕ ಮನೋಜ್​ಗೆ ಎದೆ ನೋವು ಕಾಣಿಸಿಕೊಂಡಿತು. ಆಗ ಅವರಿಗೆ ಹೃದಯಾಘಾತ ಸಂಭವಿಸಿತು. ಕೂಡಲೇ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅವರ ಜತೆ ವರುಣ್​ ಧವನ್​ ಕೂಡ ಇದ್ದರು. ಆಸ್ಪತ್ರೆ ತಲುಪುವುದಕ್ಕೂ ಮುನ್ನವೇ ಮನೋಜ್​ ಮೃತರಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಈ ಸುದ್ದಿ ತಿಳಿದು ವರುಣ್​ ಧವನ್​ ತಂದೆ ಡೇವಿಡ್​ ಧವನ್​ ಕೂಡ ದೂರವಾಣಿ ಮೂಲಕ ಮಗನನ್ನು ಸಂತೈಸಿದ್ದಾರೆ ಎಂದು ವರದಿ ಆಗಿದೆ.

ಮನೋಜ್​ಗೆ ಎದೆನೋವು ಕಾಣಿಸಿಕೊಂಡ ತಕ್ಷಣ ವರುಣ್​ ಧವನ್​ ಅವರು ಚಿತ್ರೀಕರಣವನ್ನು ನಿಲ್ಲಿಸಿ ಆಸ್ಪತ್ರೆಯತ್ತ ಸಾಗಿದರು. ಆದರೆ ಮನೋಜ್​ ನಿಧನರಾಗಿದ್ದು ತಿಳಿದು ಅವರು ತೀವ್ರವಾಗಿ ದುಃಖಪಟ್ಟರು. ಎಲ್ಲ ಪ್ರಕ್ರಿಯೆಗಳು ಮುಗಿಯುವವರೆಗೂ ಅವರು ಆಸ್ಪತ್ರೆಯಲ್ಲೇ ಇದ್ದರು. ಆ ಮೂಲಕ ಕಾರು ಚಾಲಕನ ಕುಟುಂಬಕ್ಕೆ ಅವರು ಬೆಂಬಲವಾಗಿ ನಿಂತಿದ್ದಾರೆ.

ಕೆಲಸದ ವೇಳೆಯಲ್ಲೇ ಕಾರು ಚಾಲಕ ಮನೋಜ್​ ನಿಧನರಾಗಿದ್ದರಿಂದ ಅವರ ಕುಟುಂಬದ ಜವಾಬ್ದಾರಿಯನ್ನ ಹೊತ್ತುಕೊಳ್ಳಲು ವರುಣ್​ ಧವನ್​ ಮುಂದಾಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ನಟನೆ ಮಾತ್ರವಲ್ಲದೇ ಈ ರೀತಿಯ ಗುಣದಿಂದಾಗಿಯೂ ವರುಣ್​ ಧವನ್​ ಅವರು ಅನೇಕ ಜನರ ಮನಸ್ಸು ಗೆದ್ದಿದ್ದಾರೆ. ಸಮಾಜಮುಖಿ ಕಾರ್ಯಗಳಿಂದ ಅವರು ಗುರುತಿಸಿಕೊಂಡಿದ್ದಾರೆ.

ಅನೇಕ ಹಿಟ್ ಸಿನಿಮಾಗಳನ್ನು ನೀಡಿರುವ ವರುಣ್​ ಧವನ್​ ಅವರಿಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ‘ಭೇಡಿಯಾ’ ಸಿನಿಮಾದ ಚಿತ್ರೀಕರಣವನ್ನು ಅವರು ಸದ್ಯದಲ್ಲೇ ಆರಂಭಿಸಲಿದ್ದಾರೆ. ಆ ಚಿತ್ರಕ್ಕೆ ಅಮರ್​ ಕೌಶಿಕ್​ ನಿರ್ದೇಶನ ಮಾಡಲಿದ್ದು, ವರುಣ್​ ಧವನ್​ ಜೊತೆ ಕೃತಿ ಸನೋನ್​, ಅಭಿಷೇಕ್​ ಬ್ಯಾನರ್ಜಿ ಮುಂತಾದವರು ನಟಿಸಲಿದ್ದಾರೆ.

ಇದನ್ನು ಓದಿ:

ಬಾಲ್ಯದ ಗೆಳತಿ ನತಾಶಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್​ ಧವನ್

Heart Attack: ಹೃದಯಾಘಾತಕ್ಕೆ ಕಾರಣಗಳೇನು? ಈ ಬಗ್ಗೆ ವೈದ್ಯರು ಹೇಳುವುದೇನು?

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ