AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕ್ರಿಯೆ ನಡೆಸುವಾಗ ಭಗವದ್ಗೀತೆ ಹಿಡಿದ ಯುವತಿ; ವಿವಾದಾತ್ಮಕ ದೃಶ್ಯವನ್ನು ಪ್ರಶ್ನಿಸಿದ ವರುಣ್ ಧವನ್

ಹತ್ಯಾಕಾಂಡದ ಕ್ರೂರತೆ ಬಗ್ಗೆ ಅನೇಕ ಸಿನಿಮಾಗಳು ಬಂದು ಹೋಗಿವೆ. ‘ಬವಾಲ್’ ಚಿತ್ರದಲ್ಲೂ ಈ ಬಗ್ಗೆ ಉಲ್ಲೇಖ ಇದೆ. ಆದರೆ, ಅನೇಕರು ಇದನ್ನು ಟೀಕೆ ಮಾಡಿದ್ದರು.

ಲೈಂಗಿಕ ಕ್ರಿಯೆ ನಡೆಸುವಾಗ ಭಗವದ್ಗೀತೆ ಹಿಡಿದ ಯುವತಿ; ವಿವಾದಾತ್ಮಕ ದೃಶ್ಯವನ್ನು ಪ್ರಶ್ನಿಸಿದ ವರುಣ್ ಧವನ್
ವರುಣ್-ಜಾನ್ವಿ
Follow us
ರಾಜೇಶ್ ದುಗ್ಗುಮನೆ
|

Updated on:Jul 26, 2023 | 11:47 AM

ವರುಣ್ ಧವನ್ (Varun Dhawan) ಹಾಗೂ ಜಾನ್ವಿ ಕಪೂರ್ ನಟನೆಯ ‘ಬವಾಲ್’ ಸಿನಿಮಾ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಚಿತ್ರ ನೇರವಾಗಿ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಜರ್ಮನಿಯಲ್ಲಿ ನಡೆದ ಹತ್ಯಾಕಾಂಡದ ಉಲ್ಲೇಖವೂ ಈ ಚಿತ್ರದಲ್ಲಿದೆ. ಆದರೆ, ಇದನ್ನು ಸರಿಯಾಗಿ ಬಳಕೆ ಮಾಡಿಲ್ಲ ಎಂದು ಅನೇಕರು ಟೀಕೆ ಮಾಡಿದ್ದಿದೆ. ಇದಕ್ಕೆ ವರುಣ್ ಧವನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಆಪನ್​ಹೈಮರ್’ ಸಿನಿಮಾದ (Oppenheimer) ದೃಶ್ಯ ಉಲ್ಲೇಖಿಸಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಎರಡನೇ ಮಹಾಯುದ್ಧದ ಸಂದರ್ಭದ ಸಾಕಷ್ಟು ಯಹೂದಿಗಳನ್ನು ಹಿಟ್ಲರ್ ಕೊಲ್ಲಿಸಿದ್ದ. ಮಕ್ಕಳು, ಹೆಂಗಸರು, ವೃದ್ಧರನ್ನು ಬೆತ್ತಲೆಗೊಳಿಸಿ ಗ್ಯಾಸ್​ ಚೇಂಬರ್​ನಲ್ಲಿ ಕೂಡಿಹಾಕಿ, ಅದರೊಳಗೆ ವಿಷಾನಿಲವನ್ನು ಹರಿಸಿ ಹತ್ಯೆ ಮಾಡಿದ್ದ. ಈ ಹತ್ಯಾಕಾಂಡದ ಕ್ರೂರತೆ ಬಗ್ಗೆ ಅನೇಕ ಸಿನಿಮಾಗಳು ಬಂದು ಹೋಗಿವೆ. ‘ಬವಾಲ್’ ಚಿತ್ರದಲ್ಲೂ ಈ ಬಗ್ಗೆ ಉಲ್ಲೇಖ ಇದೆ. ಆದರೆ, ಅನೇಕರು ಇದನ್ನು ಟೀಕೆ ಮಾಡಿದ್ದರು. ಸೆನ್ಸಿಬಲ್ ಆಗಿ ಅದನ್ನು ಬಳಸಿಲ್ಲ ಎಂದು ಕೆಲವರು ಕಿಡಿಕಾರಿದ್ದರು. ಈ ಬಗ್ಗೆ ವರುಣ್ ಧವನ್ ಮಾತನಾಡಿದ್ದಾರೆ.

‘ನಮ್ಮ ಸಿನಿಮಾದಲ್ಲಿ ಬರುವ ದೃಶ್ಯದ ಬಗ್ಗೆ ಕೆಲವರು ಟ್ರಿಗರ್ ಆಗಿದ್ದಾರೆ. ಆದರೆ, ಇಂಗ್ಲಿಷ್ ಸಿನಿಮಾಗಳನ್ನು ನೋಡುವಾಗ ಈ ಸೆನ್ಸಿಟಿವಿಟಿ ಎಲ್ಲಿ ಹೋಗಿರುತ್ತದೆ? ಅವರಿಗೆ ಎಲ್ಲವನ್ನೂ ಮಾಡುವ ಹಕ್ಕಿದೆ. ಆದರೆ ನಿಮಗೆ ಅದು ಸರಿ ಎನಿಸುತ್ತದೆ’ ಎಂದಿದ್ದಾರೆ ವರುಣ್ ಧವನ್.

‘ಇತ್ತೀಚೆಗೆ ರಿಲೀಸ್ ಒಂದು ಅದ್ಭುತ ಸಿನಿಮಾದ ಸಣ್ಣ ದೃಶ್ಯ ನೋಡಿ ಅನೇಕರು ಟ್ರಿಗರ್ ಆದರು. ನಮ್ಮ ದೇಶ ಹಾಗೂ ನಮ್ಮ ಸಂಸ್ಕೃತಿಗೆ ಆ ವಿಚಾರ ತುಂಬಾನೇ ಮುಖ್ಯವಾದುದು. ಆದರೆ, ಅದು ಅನೇಕರಿಗೆ ಸರಿ ಎನಿಸಿದೆ. ಅವರು ಹೆಚ್ಚು ಸೆನ್ಸಿಬಲ್ ಆಗಿರಬೇಕು ಎಂದು ಅನಿಸುತ್ತಿಲ್ಲವೇ? ನಿಮ್ಮ ಟೀಕೆ ಎಲ್ಲಿ ಹೋಯಿತು’ ಎಂದು ಪ್ರಶ್ನೆ ಮಾಡಿದ್ದಾರೆ ಅವರು.

ಇದನ್ನೂ ಓದಿ: Bawaal Teaser: ಗ್ಯಾಸ್​ ಚೇಂಬರ್​ ಹತ್ಯಾಕಾಂಡದ ಕಥೆ ಹೇಳುತ್ತಾ ‘ಬವಾಲ್​’? ವರುಣ್​ ಧವನ್​-ಜಾನ್ವಿ ಕಪೂರ್​ ಚಿತ್ರದ ಟೀಸರ್​ ವೈರಲ್​

ಕ್ರಿಸ್ಟೋಫರ್ ನೋಲನ್ ನಿರ್ದೇಶನದ ‘ಆಪನ್​ಹೈಮರ್’ ಸಿನಿಮಾವನ್ನು ಅನೇಕರು ಟೀಕೆ ಮಾಡಿದ್ದರು. ಈ ಚಿತ್ರದಲ್ಲಿ ಯುವತಿಯೊಬ್ಬಳು ಲೈಂಗಿಕ ಕ್ರಿಯೆ ನಡೆಸುವ ವೇಳೆ ಭಗವದ್ಗೀತೆ ಪುಸ್ತಕ ಹಿಡಿದುಕೊಳ್ಳುತ್ತಾಳೆ. ಅನೇಕರು ಇದನ್ನು ಟೀಕೆ ಮಾಡಿದ್ದರು. ಈ ದೃಶ್ಯ ತೆಗೆದುಹಾಕಬೇಕು ಎಂದು ಆಗ್ರಹಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:45 am, Wed, 26 July 23

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ