AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vedaa Trailer: ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದ ಜಾನ್​ ಅಬ್ರಾಹಂ, ಶಾರ್ವರಿ ವಾಘ್

ನಟ ಜಾನ್​ ಅಬ್ರಹಾಂ ಅವರು ಹೊಸದೊಂದು ಆ್ಯಕ್ಷನ್​ ಸಿನಿಮಾ ಮೂಲಕ ಜನರನ್ನು ರಂಜಿಸಲು ಬರುತ್ತಿದ್ದಾರೆ. ಅವರು ನಟಿಸಿರುವ ‘ವೇದಾ’ ಸಿನಿಮಾದಲ್ಲಿ ಜಾತಿ ಪಿಡುಗಿನ ಕುರಿತ ಕಥೆ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಟ್ರೇಲರ್​ ಬಿಡುಗಡೆ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಈ ಸಿನಿಮಾ ತೆರೆಕಾಣಲಿದೆ.

Vedaa Trailer: ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದ ಜಾನ್​ ಅಬ್ರಾಹಂ, ಶಾರ್ವರಿ ವಾಘ್
ಜಾನ್ ಅಬ್ರಾಹಂ
ಮದನ್​ ಕುಮಾರ್​
|

Updated on: Aug 01, 2024 | 9:30 PM

Share

ಈ ವರ್ಷ ಆಗಸ್ಟ್​ 15ರಂದು ಬಹುನಿರೀಕ್ಷಿತ ಸಿನಿಮಾಗಳ ನಡುವೆ ಕ್ಲ್ಯಾಶ್​ ಆಗಲಿದೆ. ಬಾಲಿವುಡ್​ನ ‘ಸ್ತ್ರೀ 2’, ‘ವೇದಾ’, ‘ಖೇಲ್​ ಖೇಲ್​ ಮೇ’ ಮುಂತಾದ ಸಿನಿಮಾಗಳು ಒಟ್ಟಿಗೆ ಬಿಡುಗಡೆ ಆಗಲಿವೆ. ಈ ಪೈಕಿ ‘ವೇದಾ’ ಸಿನಿಮಾದ ಟ್ರೇಲರ್​ ಇಂದು (ಆಗಸ್ಟ್​ 1) ಬಿಡುಗಡೆ ಆಗಿದ್ದು, ಹೈಪ್​ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಜಾನ್​ ಅಬ್ರಾಹಂ, ಶಾರ್ವರಿ ವಾಘ್, ತಮನ್ನಾ ಭಾಟಿಯಾ, ಅಭಿಷೇಕ್​ ಬ್ಯಾನರ್ಜಿ, ಮೌನಿ ರಾಯ್​ ಮುಂತಾದವರು ನಟಿಸಿದ್ದಾರೆ. ಟ್ರೇಲರ್​ ಮೂಲಕ ಈ ಚಿತ್ರದ ಕಥಾವಸ್ತು ಏನು ಎಂಬುದು ರಿವೀಲ್​ ಆಗಿದೆ.

ಜಾತಿ ಪಿಡುಗಿನ ಬಗ್ಗೆ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಆ ಸಿನಿಮಾಗಳ ಸಾಲಿಗೆ ‘ವೇದಾ’ ಕೂಡ ಸೇರ್ಪಡೆ ಆಗುತ್ತಿದೆ. ಆದರೆ ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ಸನ್ನಿವೇಶಗಳು ಕೂಡ ಇರಲಿವೆ ಎಂಬುದು ವಿಶೇಷ. ಜಾನ್​ ಅಬ್ರಹಾಂ ಅವರ ಸಿನಿಮಾಗಳಲ್ಲಿ ಅಭಿಮಾನಿಗಳು ಆ್ಯಕ್ಷನ್​ ಬಯಸುತ್ತಾರೆ. ಅಂಥವರಿಗೆ ಈ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಮೂಡಿಸುವ ರೀತಿಯಲ್ಲಿ ಟ್ರೇಲರ್​ ಬಿಡುಗಡೆ ಆಗಿದೆ.

3 ನಿಮಿಷ, 10 ಸೆಕೆಂಡ್​​ ಅವಧಿ ಇರುವ ‘ವೇದಾ’ ಟ್ರೇಲರ್​ನಲ್ಲಿ ಹಲವು ಎಮೋಷನ್​ಗಳು ಕಾಣಿಸಿವೆ. ಜಾತಿ ವ್ಯವಸ್ಥೆ ವಿರುದ್ಧ ಸಿಡೆದೆದ್ದ ಯುವತಿಯ ಕಥೆ ಈ ಸಿನಿಮಾದಲ್ಲಿ ಇದೆ. ಜಾನ್​ ಅಬ್ರಾಹಂ ಅವರು ಸೈನಿಕನ ಪಾತ್ರ ಮಾಡಿದ್ದಾರೆ. ಅನಿವಾರ್ಯ ಕಾರಣಕ್ಕೆ ಸೈನ್ಯದಿಂದ ಹೊರಬಂದ ಬಳಿಕವೂ ಅವರು ಕೆಟ್ಟದರ ವಿರುದ್ಧ ಯುದ್ಧ ಮಾಡುವುದನ್ನು ನಿಲ್ಲಿಸುವುದಿಲ್ಲ. ಮುಂದೇನಾಗುತ್ತದೆ ಎಂಬುದನ್ನು ತಿಳಿಸಲು ಪ್ರೇಕ್ಷಕರು ಆಗಸ್ಟ್​ 15ಕ್ಕಾಗಿ ಕಾದಿದ್ದಾರೆ.

ಇದನ್ನೂ ಓದಿ: ಹೃತಿಕ್​ ರೋಷನ್​, ಜಾನ್​ ಅಬ್ರಾಹಂ ಸಹಪಾಠಿಗಳು ಎಂಬುದು ನಿಮಗೆ ಗೊತ್ತಾ? ಫೋಟೋ ಸಾಕ್ಷಿ

‘ವೇದಾ’ ಸಿನಿಮಾಗೆ ನಿಖಿಲ್ ಅಡ್ವಾಣಿ ಅವರು ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ‘ಬಾಟ್ಲಾ ಹೌಸ್​’ ಸಿನಿಮಾವನ್ನು ನಿರ್ದೇಶಿಸಿದ್ದರು. ಆ ಚಿತ್ರದಲ್ಲೂ ಜಾನ್​ ಅಬ್ರಹಾಂ ಅವರು ಪ್ರಮುಖ ಪಾತ್ರ ಮಾಡಿದ್ದರು. ಈಗ ‘ವೇದಾ’ ಚಿತ್ರಕ್ಕಾಗಿ ಜಾನ್​ ಅಬ್ರಾಹಂ ಮತ್ತು ನಿಖಿಲ್​ ಅಡ್ವಾಣಿ ಅವರು ಮತ್ತೊಮ್ಮೆ ಒಂದಾಗಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ‘ವೇದಾ’ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?