AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vedaa Trailer: ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದ ಜಾನ್​ ಅಬ್ರಾಹಂ, ಶಾರ್ವರಿ ವಾಘ್

ನಟ ಜಾನ್​ ಅಬ್ರಹಾಂ ಅವರು ಹೊಸದೊಂದು ಆ್ಯಕ್ಷನ್​ ಸಿನಿಮಾ ಮೂಲಕ ಜನರನ್ನು ರಂಜಿಸಲು ಬರುತ್ತಿದ್ದಾರೆ. ಅವರು ನಟಿಸಿರುವ ‘ವೇದಾ’ ಸಿನಿಮಾದಲ್ಲಿ ಜಾತಿ ಪಿಡುಗಿನ ಕುರಿತ ಕಥೆ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಟ್ರೇಲರ್​ ಬಿಡುಗಡೆ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಈ ಸಿನಿಮಾ ತೆರೆಕಾಣಲಿದೆ.

Vedaa Trailer: ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದ ಜಾನ್​ ಅಬ್ರಾಹಂ, ಶಾರ್ವರಿ ವಾಘ್
ಜಾನ್ ಅಬ್ರಾಹಂ
Follow us
ಮದನ್​ ಕುಮಾರ್​
|

Updated on: Aug 01, 2024 | 9:30 PM

ಈ ವರ್ಷ ಆಗಸ್ಟ್​ 15ರಂದು ಬಹುನಿರೀಕ್ಷಿತ ಸಿನಿಮಾಗಳ ನಡುವೆ ಕ್ಲ್ಯಾಶ್​ ಆಗಲಿದೆ. ಬಾಲಿವುಡ್​ನ ‘ಸ್ತ್ರೀ 2’, ‘ವೇದಾ’, ‘ಖೇಲ್​ ಖೇಲ್​ ಮೇ’ ಮುಂತಾದ ಸಿನಿಮಾಗಳು ಒಟ್ಟಿಗೆ ಬಿಡುಗಡೆ ಆಗಲಿವೆ. ಈ ಪೈಕಿ ‘ವೇದಾ’ ಸಿನಿಮಾದ ಟ್ರೇಲರ್​ ಇಂದು (ಆಗಸ್ಟ್​ 1) ಬಿಡುಗಡೆ ಆಗಿದ್ದು, ಹೈಪ್​ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಜಾನ್​ ಅಬ್ರಾಹಂ, ಶಾರ್ವರಿ ವಾಘ್, ತಮನ್ನಾ ಭಾಟಿಯಾ, ಅಭಿಷೇಕ್​ ಬ್ಯಾನರ್ಜಿ, ಮೌನಿ ರಾಯ್​ ಮುಂತಾದವರು ನಟಿಸಿದ್ದಾರೆ. ಟ್ರೇಲರ್​ ಮೂಲಕ ಈ ಚಿತ್ರದ ಕಥಾವಸ್ತು ಏನು ಎಂಬುದು ರಿವೀಲ್​ ಆಗಿದೆ.

ಜಾತಿ ಪಿಡುಗಿನ ಬಗ್ಗೆ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಆ ಸಿನಿಮಾಗಳ ಸಾಲಿಗೆ ‘ವೇದಾ’ ಕೂಡ ಸೇರ್ಪಡೆ ಆಗುತ್ತಿದೆ. ಆದರೆ ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ಸನ್ನಿವೇಶಗಳು ಕೂಡ ಇರಲಿವೆ ಎಂಬುದು ವಿಶೇಷ. ಜಾನ್​ ಅಬ್ರಹಾಂ ಅವರ ಸಿನಿಮಾಗಳಲ್ಲಿ ಅಭಿಮಾನಿಗಳು ಆ್ಯಕ್ಷನ್​ ಬಯಸುತ್ತಾರೆ. ಅಂಥವರಿಗೆ ಈ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಮೂಡಿಸುವ ರೀತಿಯಲ್ಲಿ ಟ್ರೇಲರ್​ ಬಿಡುಗಡೆ ಆಗಿದೆ.

3 ನಿಮಿಷ, 10 ಸೆಕೆಂಡ್​​ ಅವಧಿ ಇರುವ ‘ವೇದಾ’ ಟ್ರೇಲರ್​ನಲ್ಲಿ ಹಲವು ಎಮೋಷನ್​ಗಳು ಕಾಣಿಸಿವೆ. ಜಾತಿ ವ್ಯವಸ್ಥೆ ವಿರುದ್ಧ ಸಿಡೆದೆದ್ದ ಯುವತಿಯ ಕಥೆ ಈ ಸಿನಿಮಾದಲ್ಲಿ ಇದೆ. ಜಾನ್​ ಅಬ್ರಾಹಂ ಅವರು ಸೈನಿಕನ ಪಾತ್ರ ಮಾಡಿದ್ದಾರೆ. ಅನಿವಾರ್ಯ ಕಾರಣಕ್ಕೆ ಸೈನ್ಯದಿಂದ ಹೊರಬಂದ ಬಳಿಕವೂ ಅವರು ಕೆಟ್ಟದರ ವಿರುದ್ಧ ಯುದ್ಧ ಮಾಡುವುದನ್ನು ನಿಲ್ಲಿಸುವುದಿಲ್ಲ. ಮುಂದೇನಾಗುತ್ತದೆ ಎಂಬುದನ್ನು ತಿಳಿಸಲು ಪ್ರೇಕ್ಷಕರು ಆಗಸ್ಟ್​ 15ಕ್ಕಾಗಿ ಕಾದಿದ್ದಾರೆ.

ಇದನ್ನೂ ಓದಿ: ಹೃತಿಕ್​ ರೋಷನ್​, ಜಾನ್​ ಅಬ್ರಾಹಂ ಸಹಪಾಠಿಗಳು ಎಂಬುದು ನಿಮಗೆ ಗೊತ್ತಾ? ಫೋಟೋ ಸಾಕ್ಷಿ

‘ವೇದಾ’ ಸಿನಿಮಾಗೆ ನಿಖಿಲ್ ಅಡ್ವಾಣಿ ಅವರು ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ‘ಬಾಟ್ಲಾ ಹೌಸ್​’ ಸಿನಿಮಾವನ್ನು ನಿರ್ದೇಶಿಸಿದ್ದರು. ಆ ಚಿತ್ರದಲ್ಲೂ ಜಾನ್​ ಅಬ್ರಹಾಂ ಅವರು ಪ್ರಮುಖ ಪಾತ್ರ ಮಾಡಿದ್ದರು. ಈಗ ‘ವೇದಾ’ ಚಿತ್ರಕ್ಕಾಗಿ ಜಾನ್​ ಅಬ್ರಾಹಂ ಮತ್ತು ನಿಖಿಲ್​ ಅಡ್ವಾಣಿ ಅವರು ಮತ್ತೊಮ್ಮೆ ಒಂದಾಗಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ‘ವೇದಾ’ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ