AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವರ್ಕರ್ ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ನಟ ರಣದೀಪ್ ಹೂಡ

ಬ್ರಿಟಿಷರ ಸಾಲಿನಲ್ಲಿರೋ ಮೋಸ್ಟ್​ ವಾಂಟೆಂಡ್ ಭಾರತೀಯ. ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಖುದಿರಾಮ್ ಬೋಸ್​ ಅವರಂತಹ ಕ್ರಾಂತಿಕಾರಿಗಳ ಹಿಂದಿನ ಸ್ಫೂರ್ತಿ ಎಂದಿದ್ದರು ದೀಪಕ್ ಹೂಡ.

ಸಾವರ್ಕರ್ ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ನಟ ರಣದೀಪ್ ಹೂಡ
ಸ್ವಸ್ತಿಕಾ-ಸಾವರ್ಕರ್ ಸಿನಿಮಾ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on: May 30, 2023 | 11:52 AM

Share

ನಟ ರಣದೀಪ್ ಹೂಡ (Randeep Hooda) ಅವರು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾಗೆ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆ ಸಾವರ್ಕರ್ ಪಾತ್ರಕ್ಕೆ ಅವರೇ ಬಣ್ಣ ಹಚ್ಚುತ್ತಿದ್ದಾರೆ. ಇತ್ತೀಚೆಗೆ ಸಾವರ್ಕರ್ ಅವರ 140ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ಹೊಸ ಪೋಸ್ಟರ್ ಬಿಡುಗಡೆ ಮಾಡಿರುವ ರಣದೀಪ್ ಹೂಡ ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ.

ವೀರಸಾವರ್ಕರ್​ ಲುಕ್​ನ ಫೋಟೋ ಪೋಸ್ಟ್ ಮಾಡಿರುವ ರಣದೀಪ್ ಹೂಡ ಅವರು,  ‘ಬ್ರಿಟಿಷರ ಸಾಲಿನಲ್ಲಿರೋ ಮೋಸ್ಟ್​ ವಾಂಟೆಂಡ್ ಭಾರತೀಯ. ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಖುದಿರಾಮ್ ಬೋಸ್​ ಅವರಂತಹ ಕ್ರಾಂತಿಕಾರಿಗಳ ಹಿಂದಿನ ಸ್ಫೂರ್ತಿ. ವೀರ ಸಾವರ್ಕರ್ ಯಾರು? ಅವರ ನಿಜವಾದ ಕಥೆಯನ್ನು ನೋಡಿ’ ಎಂದು ಅಡಿಬರಹ ನೀಡಿದ್ದರು.

ವಿರೋಧ ಏಕೆ?

ಈ ಪೋಸ್ಟರ್​ನಲ್ಲಿರುವ ತಪ್ಪನ್ನು ನಟಿ ಸ್ವಸ್ತಿಕಾ ಮುಖರ್ಜಿ ಅವರು ಎತ್ತು ತೋರಿಸಿದ್ದಾರೆ. ‘ಖುದಿರಾಮ್ ಬೋಸ್ 18ನೇ ವಯಸ್ಸಿನಲ್ಲಿ ನಿಧನರಾದರು. ನೇತಾಜಿ ಅವರು ಯಾರಿಂದಲೂ ಪ್ರೇರಿತರಾಗಿ ನೇತಾಜಿಯಾದರೇ? ಭಗತ್ ಸಿಂಗ್ ಇತಿಹಾಸ ನಮಗೆಲ್ಲರಿಗೂ ಈಗಾಗಲೇ ತಿಳಿದಿದೆ. ಈ ಸ್ಫೂರ್ತಿದಾಯಕ ಕಥೆಗಳು ಭೂಮಿಯ ಮೇಲೆ ಎಲ್ಲಿಂದ ಹೊರಹೊಮ್ಮುತ್ತಿವೆ?’ ಎಂದು ಸ್ವಸ್ತಿಕಾ ಪ್ರಶ್ನೆ ಮಾಡಿದ್ದಾರೆ.

‘ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಅಥವಾ ನಮ್ಮ ದೇಶಕ್ಕಾಗಿ ಹೋರಾಡಿದವರನ್ನು ಅವಮಾನಿಸಲು ಯಾರೂ ಬಯಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ನನಗೆ ಖಂಡಿತವಾಗಿಯೂ ಅಂತಹ ಉದ್ದೇಶವಿಲ್ಲ. ಆದರೆ ಸಿನಿಮಾಗಾಗಿ ಈ ರೀತಿ ಮಾಡೋದು ಸರಿಯಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ರಾಮ್ ಚರಣ್ ನಿರ್ಮಾಣದ ಚಿತ್ರಕ್ಕೆ ಸಂಕಷ್ಟ; ಬರ್ತಿದೆ ಎರಡೆರಡು ವೀರ ಸಾವರ್ಕರ್ ಸಿನಿಮಾ

‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ. ಮೊದಲ ನಿರ್ದೇಶನದಲ್ಲಿ  ಬಯೋಪಿಕ್ ಮಾಡುವ ಚಾಲೆಂಜ್​ನ ರಣದೀಪ್ ಹೂಡ ತೆಗೆದುಕೊಂಡಿದ್ದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಇದರ ಜೊತೆಗೆ ರಾಮ ಚರಣ್ ಕೂಡ ವೀರ ಸಾವರ್ಕರ್ ಕುರಿತು ಸಿನಿಮಾ ನಿರ್ಮಾಣ ಮಾಡುತ್ತಿದ್ದು, ‘ದಿ ಇಂಡಿಯಾ ಹೌಸ್’ ಶೀರ್ಷಿಕೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?