AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವರ್ಕರ್ ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ನಟ ರಣದೀಪ್ ಹೂಡ

ಬ್ರಿಟಿಷರ ಸಾಲಿನಲ್ಲಿರೋ ಮೋಸ್ಟ್​ ವಾಂಟೆಂಡ್ ಭಾರತೀಯ. ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಖುದಿರಾಮ್ ಬೋಸ್​ ಅವರಂತಹ ಕ್ರಾಂತಿಕಾರಿಗಳ ಹಿಂದಿನ ಸ್ಫೂರ್ತಿ ಎಂದಿದ್ದರು ದೀಪಕ್ ಹೂಡ.

ಸಾವರ್ಕರ್ ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ನಟ ರಣದೀಪ್ ಹೂಡ
ಸ್ವಸ್ತಿಕಾ-ಸಾವರ್ಕರ್ ಸಿನಿಮಾ ಪೋಸ್ಟರ್
Follow us
ರಾಜೇಶ್ ದುಗ್ಗುಮನೆ
|

Updated on: May 30, 2023 | 11:52 AM

ನಟ ರಣದೀಪ್ ಹೂಡ (Randeep Hooda) ಅವರು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾಗೆ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆ ಸಾವರ್ಕರ್ ಪಾತ್ರಕ್ಕೆ ಅವರೇ ಬಣ್ಣ ಹಚ್ಚುತ್ತಿದ್ದಾರೆ. ಇತ್ತೀಚೆಗೆ ಸಾವರ್ಕರ್ ಅವರ 140ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ಹೊಸ ಪೋಸ್ಟರ್ ಬಿಡುಗಡೆ ಮಾಡಿರುವ ರಣದೀಪ್ ಹೂಡ ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ.

ವೀರಸಾವರ್ಕರ್​ ಲುಕ್​ನ ಫೋಟೋ ಪೋಸ್ಟ್ ಮಾಡಿರುವ ರಣದೀಪ್ ಹೂಡ ಅವರು,  ‘ಬ್ರಿಟಿಷರ ಸಾಲಿನಲ್ಲಿರೋ ಮೋಸ್ಟ್​ ವಾಂಟೆಂಡ್ ಭಾರತೀಯ. ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಖುದಿರಾಮ್ ಬೋಸ್​ ಅವರಂತಹ ಕ್ರಾಂತಿಕಾರಿಗಳ ಹಿಂದಿನ ಸ್ಫೂರ್ತಿ. ವೀರ ಸಾವರ್ಕರ್ ಯಾರು? ಅವರ ನಿಜವಾದ ಕಥೆಯನ್ನು ನೋಡಿ’ ಎಂದು ಅಡಿಬರಹ ನೀಡಿದ್ದರು.

ವಿರೋಧ ಏಕೆ?

ಈ ಪೋಸ್ಟರ್​ನಲ್ಲಿರುವ ತಪ್ಪನ್ನು ನಟಿ ಸ್ವಸ್ತಿಕಾ ಮುಖರ್ಜಿ ಅವರು ಎತ್ತು ತೋರಿಸಿದ್ದಾರೆ. ‘ಖುದಿರಾಮ್ ಬೋಸ್ 18ನೇ ವಯಸ್ಸಿನಲ್ಲಿ ನಿಧನರಾದರು. ನೇತಾಜಿ ಅವರು ಯಾರಿಂದಲೂ ಪ್ರೇರಿತರಾಗಿ ನೇತಾಜಿಯಾದರೇ? ಭಗತ್ ಸಿಂಗ್ ಇತಿಹಾಸ ನಮಗೆಲ್ಲರಿಗೂ ಈಗಾಗಲೇ ತಿಳಿದಿದೆ. ಈ ಸ್ಫೂರ್ತಿದಾಯಕ ಕಥೆಗಳು ಭೂಮಿಯ ಮೇಲೆ ಎಲ್ಲಿಂದ ಹೊರಹೊಮ್ಮುತ್ತಿವೆ?’ ಎಂದು ಸ್ವಸ್ತಿಕಾ ಪ್ರಶ್ನೆ ಮಾಡಿದ್ದಾರೆ.

‘ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಅಥವಾ ನಮ್ಮ ದೇಶಕ್ಕಾಗಿ ಹೋರಾಡಿದವರನ್ನು ಅವಮಾನಿಸಲು ಯಾರೂ ಬಯಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ನನಗೆ ಖಂಡಿತವಾಗಿಯೂ ಅಂತಹ ಉದ್ದೇಶವಿಲ್ಲ. ಆದರೆ ಸಿನಿಮಾಗಾಗಿ ಈ ರೀತಿ ಮಾಡೋದು ಸರಿಯಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ರಾಮ್ ಚರಣ್ ನಿರ್ಮಾಣದ ಚಿತ್ರಕ್ಕೆ ಸಂಕಷ್ಟ; ಬರ್ತಿದೆ ಎರಡೆರಡು ವೀರ ಸಾವರ್ಕರ್ ಸಿನಿಮಾ

‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ. ಮೊದಲ ನಿರ್ದೇಶನದಲ್ಲಿ  ಬಯೋಪಿಕ್ ಮಾಡುವ ಚಾಲೆಂಜ್​ನ ರಣದೀಪ್ ಹೂಡ ತೆಗೆದುಕೊಂಡಿದ್ದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಇದರ ಜೊತೆಗೆ ರಾಮ ಚರಣ್ ಕೂಡ ವೀರ ಸಾವರ್ಕರ್ ಕುರಿತು ಸಿನಿಮಾ ನಿರ್ಮಾಣ ಮಾಡುತ್ತಿದ್ದು, ‘ದಿ ಇಂಡಿಯಾ ಹೌಸ್’ ಶೀರ್ಷಿಕೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ