AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ನಿರ್ಮಾಪಕ, ನಿರ್ದೇಶಕನ ನಡುವೆಯೇ ಶುರುವಾಯ್ತು ಜಗಳ

ವಿಪುಲ್ ಅಮೃತ್​ಲಾಲ್ ಶಾ ಹಾಗೂ ನಿರ್ದೇಶಕ ಸುದೀಪ್ತೋ ಸೇನ್ ನಡುವೆ ಕಿರಿಕ್ ಶುರುವಾಗಿದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದ ಕಥಾವಸ್ತು ಬಗ್ಗೆ ಸುದೀಪ್ತೋ ಸೇನ್ ತಕರಾರು ತೆಗೆದಿದ್ದಾರೆ. ಅವರ ವಿರುದ್ಧ ವಿಪುಲ್ ಅಮೃತ್​ಲಾಲ್ ಶಾ ಅವರು ಗುಡುಗಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ದಿ ಕೇರಳ ಸ್ಟೋರಿ’ ನಿರ್ಮಾಪಕ, ನಿರ್ದೇಶಕನ ನಡುವೆಯೇ ಶುರುವಾಯ್ತು ಜಗಳ
Vipul Amrutlal Shah, Sudipto Sen
ಮದನ್​ ಕುಮಾರ್​
|

Updated on: Mar 05, 2026 | 6:22 PM

Share

2023ರಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾಗೆ ಸುದೀಪ್ತೋ ಸೇನ್ ಅವರು ನಿರ್ದೇಶನ ಮಾಡಿದ್ದರು. ವಿಪುಲ್ ಅಮೃತ್​ಲಾಲ್ ಶಾ (Vipul Amrutlal Shah) ಅವರು ಬಂಡವಾಳ ಹೂಡಿದ್ದರು. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾದಿಂದ ಸುದೀಪ್ತೋ ಸೇನ್ ಅವರು ಹೊರಗೆ ಉಳಿದರು. ಅವರ ಬದಲು ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದರು. ಈಗ ನಿರ್ಮಾಪಕ ವಿಪುಲ್ ಅಮೃತ್​ಲಾಲ್ ಶಾ ಮತ್ತು ನಿರ್ದೇಶಕ ಸುದೀಪ್ತೋ ಸೇನ್ (Sudipto Sen) ನಡುವೆ ಜಗಳ ಶುರುವಾಗಿದೆ.

ಸುದೀಪ್ತೋ ಸೇನ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಬಗ್ಗೆ ಕೆಲವು ದಿನಗಳ ಹಿಂದೆ ತಕರಾರು ತೆಗೆದಿದ್ದರು. ವಾಟ್ಸಪ್ ಸಂದೇಶಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ ಎಂದು ಅವರು ಆರೋಪ ಮಾಡಿದ್ದರು. ಅದಕ್ಕೆ ಈಗ ವಿಪುಲ್ ಅಮೃತ್​ಲಾಲ್ ಶಾ ಅವರು ತಿರುಗೇಟು ನೀಡಿದ್ದಾರೆ. ‘ಸುದೀಪ್ತೋ ಸೇನ್ ಅವರ ಸ್ಕ್ರಿಪ್ಟ್ ಕಸದ ಬುಟ್ಟಿಗೆ ಸೇರುವಂತಿತ್ತು’ ವಿಪುಲ್ ಅಮೃತ್​ಲಾಲ್ ಶಾ ವಾಗ್ದಾಳಿ ಮಾಡಿದ್ದಾರೆ.

‘ಅವರ ಪರಿಸ್ಥಿತಿ ನೋಡಿದರೆ ದ್ರಾಕ್ಷಿ ಹಣ್ಣು ಹುಳಿ ಎಂಬಂತಿದೆ. ನಿಜ ಹೇಳಬೇಕೆಂದರೆ, ಸುದೀಪ್ತೋ ಅವರು ದಿ ಕೇರಳ ಸ್ಟೋರಿ 2ಗಾಗಿ ಒಂದು ಸ್ಕ್ರಿಪ್ಟ್ ಬರೆದುಕೊಟ್ಟಿದ್ದರು. ಆದರೆ ಅದು ಸಂಪೂರ್ಣವಾಗಿ ಕಸದ ಬುಟ್ಟಿಗೆ ಸೇರುವಂತಿತ್ತು. ಹಾಗಾಗಿಯೇ ನಾನು ಹೊಸ ನಿರ್ದೇಶಕ ಕಾಮಾಕ್ಯ ನಾರಾಯಣ್ ಸಿಂಗ್ ಅವರ ಜೊತೆ ಸೀಕ್ವೆಲ್ ಮಾಡಲು ನಿರ್ಧರಿಸಿದೆ’ ಎಂದು ವಿಪುಲ್ ಹೇಳಿದ್ದಾರೆ.

‘ನಾವು ಎಂತಹ ಸಂಶೋಧನೆ ನಡೆಸಿದ್ದೇವೆ ಎಂಬುದು ಅವರಿಗೆ ತಿಳಿದೇ ಇಲ್ಲ. ಸಂಶೋಧನಾ ಪ್ರಕ್ರಿಯೆಯಲ್ಲಿ ಅವರು ಭಾಗಿಯಾಗಿರಲಿಲ್ಲ. ಹಾಗಿರುವಾಗ ಟೀಕೆ ಮಾಡುವುದು ಎಷ್ಟು ಸರಿ? ನನ್ನ ಸಿನಿಮಾ ಮೇಲೆ ದಾಳಿಯಾದಾಗ ನಾನು ಸುಮ್ಮನಿರಲು ಸಾಧ್ಯವಿಲ್ಲ. ಅವರ ಹೇಳಿಕೆಗಳು ಆಧಾರರಹಿತವಾಗಿವೆ’ ಎಂದು ವಿಪುಲ್ ಅಮೃತ್​ಲಾಲ್ ಶಾ ಅವರು ಗುಡುಗಿದ್ದಾರೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ

ಸುದೀಪ್ತೋ ಸೇನ್ ಹೇಳಿದ್ದಿಷ್ಟು.. ಮೊದಲ ಭಾಗಕ್ಕೆ 10 ವರ್ಷಗಳ ಕಾಲ ಸಂಶೋಧನೆ ನಡೆಸಿದ್ದಾಗಿ ಹೇಳುವ ಸುದೀಪ್ತೋ ಸೇನ್ ಅವರು, ‘ಸೀಕ್ವೆಲ್ ಎನ್ನುವುದು ಸೂಕ್ಷ್ಮ ವಿಷಯ. ಕೇರಳದಿಂದ ಹೊರಗಿನ ರಾಜ್ಯಗಳ ಕಥೆಯನ್ನು ಹೇಳುವಾಗ ಆಳವಾದ ಅಧ್ಯಯನ ಬೇಕು. ಕೇವಲ ವಾಟ್ಸಾಪ್ ಸಂದೇಶಗಳು ಅಥವಾ ಪತ್ರಿಕಾ ವರದಿಗಳನ್ನು ನಂಬಿ ಸಿನಿಮಾ ಮಾಡಲು ನಾನು ತಯಾರಿಲ್ಲ. ಜವಾಬ್ದಾರಿಯುತ ನಿರ್ದೇಶಕನಾಗಿ ನಾನು ಅಂತಹ ಕೆಲಸ ಮಾಡುವುದಿಲ್ಲ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ