AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು; ಹೇಗಿದೆ ಅವರ ಆರೋಗ್ಯ ಪರಿಸ್ಥಿತಿ?

ಧರ್ಮೇಂದ್ರ ಅವರಿಗೆ ಕೆಲ ದಿನಗಳ ಹಿಂದೆ ಅನಾರೋಗ್ಯ ಉಂಟಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದೆವು. ಮುಂದಿನ ಕೆಲವು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್​ ಮಾಡಲಾಗುವುದು.

 ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು; ಹೇಗಿದೆ ಅವರ ಆರೋಗ್ಯ ಪರಿಸ್ಥಿತಿ?
ಧರ್ಮೇಂದ್ರ
TV9 Web
| Edited By: |

Updated on: May 01, 2022 | 9:55 PM

Share

ಬಾಲಿವುಡ್​ನಲ್ಲಿ (Bollywood) ಹಲವು ದಶಕಗಳ ಶ್ರಮಿಸಿರುವ ಹಿರಿಯ ನಟ ಧರ್ಮೇಂದ್ರ ಅವರು (Dharmendra) ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವಾರವೇ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ನುರಿತ ವೈದ್ಯರ ತಂಡ ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಈಗ ಕೊಂಚ ಚೇತರಿಕೆ ಕಂಡಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

‘ಧರ್ಮೇಂದ್ರ ಅವರಿಗೆ ಕೆಲ ದಿನಗಳ ಹಿಂದೆ ಅನಾರೋಗ್ಯ ಉಂಟಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದೆವು. ಮುಂದಿನ ಕೆಲವು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್​ ಮಾಡಲಾಗುವುದು. ಮಂಗಳವಾರ ಅವರನ್ನು ಆಸ್ಪತ್ರೆಯಿಂದ ಕರೆದೊಯ್ಯುವ ಸಾಧ್ಯತೆ ಇದೆ. ಅಭಿಮಾನಿಗಳು ಚಿಂತಿಸುವ ಅಗತ್ಯವಿಲ್ಲ’ ಎಂದು ಅವರ ಕುಟುಂಬದ ಆಪ್ತರು ಹೇಳಿರುವುದಾಗಿ ಇಂಡಿಯ್​ ಎಕ್ಸ್​ಪ್ರೆಸ್ ವರದಿ ಮಾಡಿದೆ. ಧರ್ಮೇಂದ್ರ ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಅವರ ವಯಸ್ಸು 85 ವರ್ಷ ದಾಟಿದೆ. ಈ ಕಾರಣಕ್ಕೆ ಅವರಿಗೆ ವಯೋ ಸಹಜ ಕಾಯಿಲೆಗಳು ಸುತ್ತಿಕೊಳ್ಳುತ್ತಿವೆ ಎನ್ನಲಾಗಿದೆ.

ಧರ್ಮೇಂದ್ರ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು 1960ರಲ್ಲಿ. ‘ದಿಲ್​ ಬಿ ತೇರಾ ಹಮ್ ಭಿ ತೆರೆ’ ಸಿನಿಮಾ ಅವರ ಮೊದಲ ಚಿತ್ರ. ಈ ಸಿನಿಮಾ 1960ರಲ್ಲಿ ತೆರೆಗೆ ಬಂತು. ನಂತರ 2009ರವರೆಗೂ ಅವರು ಹಲವು ಚಿತ್ರಗಳಲ್ಲಿ ನಟಿಸಿದರು. 2010ರಿಂದ ಈಚೆಗೆ ನಟನೆಯಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. 2018ರಲ್ಲಿ ತೆರೆಗೆ ಬಂದ ‘ಯಮ್ಲಾ ಪಗ್ಲಾ ದಿವಾನಾ: ಫಿರ್​ ಸೆ’ ಸಿನಿಮಾದ ಬಳಿಕ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡರು.

ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ನಟಿಸುತ್ತಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ಧರ್ಮೇಂದ್ರ ಅವರು ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಕರಣ್ ಜೋಹರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶನಕ್ಕೆ ಕರಣ್ ಅವರ ಮರಳುತ್ತಿದ್ದಾರೆ. ಜಯಾ ಬಚ್ಚನ್ ಕೂಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸನ್ನಿ ಡಿಯೋಲ್ ಹಾಗೂ ಬಾಬಿ ಡಿಯೋಲ್ ಧರ್ಮೇಂದ್ರ ಅವರ ಮಕ್ಕಳು.

ಇದನ್ನೂ ಓದಿ: ಅಕ್ಷಯ್​​ ಬಳಿಕ ಯಶ್​ಗೆ ಪಾನ್​ ಮಸಾಲ ಆಫರ್; ಎಷ್ಟು ಕೋಟಿ ಕೊಟ್ರೂ ಈ ಕೆಲಸ ಮಾಡಲ್ಲ ಎಂದ ನಟ​

ಮದುವೆ ಬಳಿಕ ಕೆಲಸಕ್ಕೆ ಹೊರಟ ಆಲಿಯಾ ಭಟ್​; ವಿಮಾನ ನಿಲ್ದಾಣದ ಎದುರು ಕಾಣಿಸಿಕೊಂಡ ಸುಂದರಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ