AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು; ಹೇಗಿದೆ ಅವರ ಆರೋಗ್ಯ ಪರಿಸ್ಥಿತಿ?

ಧರ್ಮೇಂದ್ರ ಅವರಿಗೆ ಕೆಲ ದಿನಗಳ ಹಿಂದೆ ಅನಾರೋಗ್ಯ ಉಂಟಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದೆವು. ಮುಂದಿನ ಕೆಲವು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್​ ಮಾಡಲಾಗುವುದು.

 ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು; ಹೇಗಿದೆ ಅವರ ಆರೋಗ್ಯ ಪರಿಸ್ಥಿತಿ?
ಧರ್ಮೇಂದ್ರ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 01, 2022 | 9:55 PM

Share

ಬಾಲಿವುಡ್​ನಲ್ಲಿ (Bollywood) ಹಲವು ದಶಕಗಳ ಶ್ರಮಿಸಿರುವ ಹಿರಿಯ ನಟ ಧರ್ಮೇಂದ್ರ ಅವರು (Dharmendra) ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವಾರವೇ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ನುರಿತ ವೈದ್ಯರ ತಂಡ ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಈಗ ಕೊಂಚ ಚೇತರಿಕೆ ಕಂಡಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

‘ಧರ್ಮೇಂದ್ರ ಅವರಿಗೆ ಕೆಲ ದಿನಗಳ ಹಿಂದೆ ಅನಾರೋಗ್ಯ ಉಂಟಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದೆವು. ಮುಂದಿನ ಕೆಲವು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್​ ಮಾಡಲಾಗುವುದು. ಮಂಗಳವಾರ ಅವರನ್ನು ಆಸ್ಪತ್ರೆಯಿಂದ ಕರೆದೊಯ್ಯುವ ಸಾಧ್ಯತೆ ಇದೆ. ಅಭಿಮಾನಿಗಳು ಚಿಂತಿಸುವ ಅಗತ್ಯವಿಲ್ಲ’ ಎಂದು ಅವರ ಕುಟುಂಬದ ಆಪ್ತರು ಹೇಳಿರುವುದಾಗಿ ಇಂಡಿಯ್​ ಎಕ್ಸ್​ಪ್ರೆಸ್ ವರದಿ ಮಾಡಿದೆ. ಧರ್ಮೇಂದ್ರ ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಅವರ ವಯಸ್ಸು 85 ವರ್ಷ ದಾಟಿದೆ. ಈ ಕಾರಣಕ್ಕೆ ಅವರಿಗೆ ವಯೋ ಸಹಜ ಕಾಯಿಲೆಗಳು ಸುತ್ತಿಕೊಳ್ಳುತ್ತಿವೆ ಎನ್ನಲಾಗಿದೆ.

ಧರ್ಮೇಂದ್ರ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು 1960ರಲ್ಲಿ. ‘ದಿಲ್​ ಬಿ ತೇರಾ ಹಮ್ ಭಿ ತೆರೆ’ ಸಿನಿಮಾ ಅವರ ಮೊದಲ ಚಿತ್ರ. ಈ ಸಿನಿಮಾ 1960ರಲ್ಲಿ ತೆರೆಗೆ ಬಂತು. ನಂತರ 2009ರವರೆಗೂ ಅವರು ಹಲವು ಚಿತ್ರಗಳಲ್ಲಿ ನಟಿಸಿದರು. 2010ರಿಂದ ಈಚೆಗೆ ನಟನೆಯಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. 2018ರಲ್ಲಿ ತೆರೆಗೆ ಬಂದ ‘ಯಮ್ಲಾ ಪಗ್ಲಾ ದಿವಾನಾ: ಫಿರ್​ ಸೆ’ ಸಿನಿಮಾದ ಬಳಿಕ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡರು.

ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ನಟಿಸುತ್ತಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ಧರ್ಮೇಂದ್ರ ಅವರು ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಕರಣ್ ಜೋಹರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶನಕ್ಕೆ ಕರಣ್ ಅವರ ಮರಳುತ್ತಿದ್ದಾರೆ. ಜಯಾ ಬಚ್ಚನ್ ಕೂಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸನ್ನಿ ಡಿಯೋಲ್ ಹಾಗೂ ಬಾಬಿ ಡಿಯೋಲ್ ಧರ್ಮೇಂದ್ರ ಅವರ ಮಕ್ಕಳು.

ಇದನ್ನೂ ಓದಿ: ಅಕ್ಷಯ್​​ ಬಳಿಕ ಯಶ್​ಗೆ ಪಾನ್​ ಮಸಾಲ ಆಫರ್; ಎಷ್ಟು ಕೋಟಿ ಕೊಟ್ರೂ ಈ ಕೆಲಸ ಮಾಡಲ್ಲ ಎಂದ ನಟ​

ಮದುವೆ ಬಳಿಕ ಕೆಲಸಕ್ಕೆ ಹೊರಟ ಆಲಿಯಾ ಭಟ್​; ವಿಮಾನ ನಿಲ್ದಾಣದ ಎದುರು ಕಾಣಿಸಿಕೊಂಡ ಸುಂದರಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!