Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೋರ್ವ ಹಿರಿಯ ನಟ-ನಿರ್ದೇಶಕ ಕೊವಿಡ್​ಗೆ ಬಲಿ

ಲಲಿತ್​ ಮಗ ಹಾಗೂ ನಿರ್ದೆಶಕ ಕಣು ಬಹಲ್​ ಈ ವಿಚಾರವನ್ನು ಅಧಿಕೃತಗೊಳಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿರುವ ಕಣು, ನನ್ನ ತಂದೆ ಕಳೆದ ಒಂದು ವಾರದಿಂದ ಕೊರೊನಾದಿಂದ ಬಳಲುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಮತ್ತೋರ್ವ ಹಿರಿಯ ನಟ-ನಿರ್ದೇಶಕ ಕೊವಿಡ್​ಗೆ ಬಲಿ
ಲಲಿತ್​ ಬೇಲ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 24, 2021 | 4:20 PM

ಕೊರೊನಾ ವೈರಸ್​ ತನ್ನ ರಣ ಕೇಕೆಯನ್ನು ಮುಂದುವರಿಸಿದೆ. ಮೊದಲನೇ ಅಲೆಗಿಂತ ಎರಡನೇ ಅಲೆ ಭೀಕರವಾಗಿ ಕಾಡುತ್ತಿದೆ. ಈಗಾಗಲೇ ಚಿತ್ರರಂಗದ ಸಾಕಷ್ಟು ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಈಗ ಹಿರಿಯ ನಟ ಹಾಗೂ ನಿರ್ದೆಶಕ ಲಲಿತ್​ ಬಹಲ್​ ಕೊರೊನಾಗೆ ಮೃತಪಟ್ಟಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಲಲಿತ್​ ಮಗ ಹಾಗೂ ನಿರ್ದೆಶಕ ಕಣು ಬಹಲ್​​ ಈ ವಿಚಾರವನ್ನು ಅಧಿಕೃತಗೊಳಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿರುವ ಕಣು, ನನ್ನ ತಂದೆ ಕಳೆದ ಒಂದು ವಾರದಿಂದ ಕೊರೊನಾದಿಂದ ಬಳಲುತ್ತಿದ್ದರು. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಸಾಕಷ್ಟು ತೊಂದರೆಗಳು ಇದ್ದವು. ಹೀಗಾಗಿ, ಅವರಿಗೆ ಕೊರೊನಾ ಕಾಣಿಸಿಕೊಂಡಿದ್ದರಿಂದ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಹೀಗಾಗಿ, ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಲಲಿತ್​ ರಂಗಭೂಮಿ ಹಿನ್ನೆಲೆಯಿಂದ ಬಂದವರು. ನಂತರ ದೂರದರ್ಶನಕ್ಕಾಗಿ ಸಾಕಷ್ಟು ಟೆಲಿ ಫಿಲ್ಮ್​ಗಳನ್ನು ಅವರು ನಿರ್ಮಾಣ ಹಾಗೂ ನಿರ್ದೇಶನ ಮಾಡಿದರು. ತಿತ್ಲಿ, ಅಮೇಜಾನ್​ ಪ್ರೈಂ ವಿಡಿಯೋದ ಮೇಡ್​ ಇನ್​​ ಹೆವನ್​, ಜಡ್ಜ್​ಮೆಂಟಲ್​ ಹೈ ಕ್ಯಾ ಮುಂತಾದ ಪ್ರಾಜೆಕ್ಟ್​ಗಳಲ್ಲಿ ನಟಿಸಿದ್ದಾರೆ.

ಕೊರೊನಾ ಕಾರಣದಿಂದ ಚಿತ್ರರಂಗದ ಅನೇಕರು ಸಾವಿನ ಹಾದಿ ಹಿಡಿಯುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಹಿರಿಯ ನಟ ಕಿಶೋರ್ ನಂದಲಸ್ಕರ್ ಅವರು ಕೊವಿಡ್​ನಿಂದ ಮೃತರಾದರು. ಗುರುವಾರ (ಏ.22) ರಾತ್ರಿ ಹಿರಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ನಿಧನರಾದರು. ಅಲ್ಲದೆ ಅಮಿತ್ ಮಿಸ್ತ್ರೀ ಹೃದಯಾಘಾತದಿಂದ ನಿಧನರಾಗಿದ್ದು ಬಾಲಿವುಡ್​ಗೆ ಮೇಲಿಂದ ಮೇಲೆ ಕಹಿ ಸುದ್ದಿ ಕೇಳಿಬರುತ್ತಿದೆ.

ಇದನ್ನೂ ಓದಿ: Shravan Rathod: ಖ್ಯಾತ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಕೊರೊನಾ ವೈರಸ್​ನಿಂದ ನಿಧನ; ಚಿತ್ರರಂಗಕ್ಕೆ ಆಘಾತ

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ