AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangal Dhillon: ಹಿರಿಯ ನಟ, ನಿರ್ಮಾಪಕ ಮಂಗಲ್​ ದಿಲೋನ್​ ನಿಧನ; ಕಂಬನಿ ಮಿಡಿದ ಚಿತ್ರರಂಗ

Mangal Dhillon Death: ಕ್ಯಾನ್ಸರ್​ನಿಂದ ಬಳಲುತ್ತಿದ್ದ ಮಂಗಲ್​ ದಿಲೋನ್​ ಅವರು ಕೊನೆಯುಸಿರು ಎಳೆದಿದ್ದಾರೆ. ಲೂದಿಯಾನಾದ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

Mangal Dhillon: ಹಿರಿಯ ನಟ, ನಿರ್ಮಾಪಕ ಮಂಗಲ್​ ದಿಲೋನ್​ ನಿಧನ; ಕಂಬನಿ ಮಿಡಿದ ಚಿತ್ರರಂಗ
ಮಂಗಲ್​ ದಿಲೋನ್​
ಮದನ್​ ಕುಮಾರ್​
|

Updated on: Jun 12, 2023 | 7:22 AM

Share

ಪಂಜಾಬಿ ಮತ್ತು ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಟ (Senior Actor) ಹಾಗೂ ನಿರ್ಮಾಪಕ ಮಂಗಲ್​ ದಿಲೋನ್​ ಅವರು ಭಾನುವಾರ (ಜೂನ್​ 11) ನಿಧನರಾಗಿದ್ದಾರೆ. ಬಹುಕಾಲದಿಂದ ಅವರಿಗೆ ಅನಾರೋಗ್ಯ ಉಂಟಾಗಿತ್ತು. ಕ್ಯಾನ್ಸರ್​ನಿಂದ (Cancer) ಬಳಲುತ್ತಿದ್ದ ಅವರು ಕೊನೆಯುಸಿರು ಎಳೆದಿದ್ದಾರೆ. ಲೂದಿಯಾನಾದ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬೇಸರದ ಸಂಗತಿ ಏನೆಂದರೆ ಅವರ ಜನ್ಮದಿನಕ್ಕೆ ಕೆಲವೇ ದಿನಗಳ ಬಾಕಿ ಇರುವಾಗ ಅವರ ನಿಧನವಾರ್ತೆ ಕೇಳಿಬಂದಿದೆ. ಬದುಕಿದ್ದರೆ ಜೂನ್​ 18ರಂದು ಮಂಗಲ್​ ದಿಲೋನ್​ (Mangal Dhillon) ಅವರು ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿತ್ತು. ಅವರ ನಿಧನಕ್ಕೆ ಚಿತ್ರರಂಗದ ಹಲವರು ಸಂತಾಪ ಸೂಚಿಸಿದ್ದಾರೆ.

80ರ ದಶಕದಲ್ಲಿ ಮಂಗಲ್​ ದಿಲೋನ್​ ಅವರು ಪ್ರಖ್ಯಾತಿ ಹೊಂದಿದ್ದರು. ಅವರ ನಟನೆಗೆ ಅಪಾರ ಅಭಿಮಾನಿಗಳು ಮನ ಸೋತಿದ್ದರು. ಪಂಜಾಬಿ ಮತ್ತು ಹಿಂದಿ ಚಿತ್ರರಂಗದಲ್ಲಿ ಮಂಗಲ್​ ದಿಲೋನ್​ ಅವರು ತಮ್ಮ ಛಾಪು ಮೂಡಿಸಿದ್ದರು. ಮೊದಲು ಪಂಜಾಬಿ ಭಾಷೆಯ ಸಿನಿಮಾಗಳಲ್ಲಿ ಫೇಮಸ್​ ಆಗಿದ್ದ ಅವರು ನಂತರ ಬಾಲಿವುಡ್​ಗೂ ಕಾಲಿಟ್ಟು ಖ್ಯಾತಿ ಗಳಿಸಿದರು. ‘ಕೂನ್​ ಬರಿ ಮಾಂಗ್​’, ‘ಟ್ರೇನ್​ ಟು ಪಾಕಿಸ್ತಾನ್​’, ‘ಕಹಾ ಹೈ ಕಾನೂನ್​’ ಮುಂತಾದ ಸಿನಿಮಾಗಳಲ್ಲಿನ ಅವರ ನಟನೆಯನ್ನು ಪ್ರೇಕ್ಷಕರು ಈಗಲೂ ನೆನಪಿಸಿಕೊಳ್ಳುತ್ತಾರೆ.

ಮಂಗಲ್​ ದಿಲೋನ್​ ಅವರ ವೃತ್ತಿಜೀವನ ಕೇವಲ ನಟನೆಗೆ ಮಾತ್ರ ಸೀಮಿತ ಆಗಿರಲಿಲ್ಲ. ತಮ್ಮದೇ ಆದ ನಿರ್ಮಾಣ ಸಂಸ್ಥೆ ಆರಂಭಿಸುವ ಮೂಲಕ ಅವರು ಸಿನಿಮಾಗಳಿಗೆ ಬಂಡವಾಳ ಹೂಡಲು ಆರಂಭಿಸಿದ್ದರು. ಕಮರ್ಷಿಯಲ್​ ಸಕ್ಸಸ್​ ಕಾಣುವಂತಹ ಹಾಗೂ ವಿಮರ್ಶೆ ದೃಷ್ಟಿಯಿಂದಲೂ ಅತ್ಯುತ್ತಮ ಎನಿಸಿಕೊಳ್ಳುವಂತಹ ಸಿನಿಮಾಗಳನ್ನು ಅವರು ನಿರ್ಮಿಸಿದ್ದರು. ಚಿತ್ರರಂಗದಲ್ಲಿನ ಕೊಡುಗೆಯನ್ನು ಗುರುತಿಸಿ ಮಂಗಲ್​ ದಿಲೋನ್​ ಅವರಿಗೆ ಪಂಜಾಬ್​ ಸರ್ಕಾರವು ‘ಬಾಬಾ ಫರೀದ್​ ಪ್ರಶಸ್ತಿ’ನೀಡಿ ಗೌರವಿಸಿತ್ತು.

ಇದನ್ನೂ ಓದಿ: Chiranjeevi: ಕ್ಯಾನ್ಸರ್​ ಸುದ್ದಿ ಹಬ್ಬಿದ್ದಕ್ಕೆ ಚಿರಂಜೀವಿ ಅಭಿಮಾನಿಗಳಲ್ಲಿ ಆತಂಕ; ತಮ್ಮ ಹೆಲ್ತ್​ ಅಪ್​ಡೇಟ್​ ನೀಡಿದ ‘ಮೆಗಾ ಸ್ಟಾರ್​’

ರಂಗಭೂಮಿಯ ಹಿನ್ನೆಲೆಯಿಂದ ಬಂದವರು ಮಂಗಲ್​ ದಿಲೋನ್​. ಅನೇಕ ನಾಟಕಗಳಲ್ಲಿ ಅಭಿನಯಿಸುವ ಮೂಲಕ ಅವರು ನಟನೆಯ ಪಾಠಗಳನ್ನು ಕರಗತ ಮಾಡಿಕೊಂಡಿದ್ದರು. ಬಳಿಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅವರಿಗೆ ಪ್ರೇಕ್ಷಕರ ಚಪ್ಪಾಳೆ ಸಿಕ್ಕಿತು. ಕಿರುತೆರೆಯಲ್ಲೂ ನಟಿಸಿ ಅವರು ಖ್ಯಾತಿ ಗಳಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ