AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುರಂಧರ್ 2: ಪ್ರೊಪಗಾಂಡ ಸಿನಿಮಾಗಳ ವಿರುದ್ಧ ನಿರ್ದೇಶಕ ವೆಟ್ರಿಮಾರನ್ ಕಿಡಿ; ವಿಡಿಯೋ ವೈರಲ್

‘ಧುರಂಧರ್ 2’ ಸಿನಿಮಾವನ್ನು ಅನೇಕ ಸೆಲೆಬ್ರಿಟಿಗಳು ಹೊಗಳುತ್ತಿದ್ದಾರೆ. ಆದರೆ ಕೆಲವರು ವಿರೋಧಿಸಿದ್ದಾರೆ. ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರು ಪರೋಕ್ಷವಾಗಿ ಈ ಸಿನಿಮಾವನ್ನು ಟೀಕಿಸಿ ಮಾತನಾಡಿದ್ದಾರೆ. ವಿಡಿಯೋ ವೈರಲ್ ಆಗಿದೆ. ವೆಟ್ರಿಮಾರನ್ ಅವರ ಈ ಹೇಳಿಕೆಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಹುಟ್ಟುಹಾಕಿದೆ.

ಧುರಂಧರ್ 2: ಪ್ರೊಪಗಾಂಡ ಸಿನಿಮಾಗಳ ವಿರುದ್ಧ ನಿರ್ದೇಶಕ ವೆಟ್ರಿಮಾರನ್ ಕಿಡಿ; ವಿಡಿಯೋ ವೈರಲ್
VetrimaaranImage Credit source: Thi Cinemas
ಮದನ್​ ಕುಮಾರ್​
|

Updated on:Mar 29, 2026 | 9:13 AM

Share

ಶ್ರೀಲಂಕಾ ನಾಗರಿಕ ಯುದ್ಧದ ಕಹಿ ಘಟನೆಗಳನ್ನಾಧರಿಸಿದ ‘ನೀಲಿರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ತಮಿಳು ನಿರ್ದೇಶಕ ವೆಟ್ರಿಮಾರನ್ ಪಾಲ್ಗೊಂಡಿದ್ದರು. ಈ ವೇಳೆ ಅವರು ಸಿನಿಮಾರಂಗದಲ್ಲಿ ಹೆಚ್ಚುತ್ತಿರುವ ಪ್ರೊಪಗಾಂಡ (Propaganda) ಮತ್ತು ದ್ವೇಷ ಬಿತ್ತುವ ಚಿತ್ರಗಳ ಬಗ್ಗೆ ನೇರವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ವೆಟ್ರಿಮಾರನ್ (Vetrimaaran) ಅವರ ಈ ಮಾತುಗಳು ಈಗ ಇಂಟರ್ನೆಟ್‌ನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿವೆ. ಆದಿತ್ಯ ಧರ್ ಮತ್ತು ರಣವೀರ್ ಸಿಂಗ್ ಅವರ ‘ಧುರಂಧರ್ 2’ (Dhurandhar 2) ಚಿತ್ರವನ್ನೇ ಗುರಿಯಾಗಿಸಿಕೊಂಡು ಅವರು ಟೀಕಿಸಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯಪಡುತ್ತಿದ್ದಾರೆ.

ವೇದಿಕೆಯ ಮೇಲೆ ಮಾತನಾಡಿದ ವೆಟ್ರಿಮಾರನ್, ‘ನಮ್ಮ ಕಥೆಗಳನ್ನು ನಾವೇ ಹೇಳುವವರೆಗೆ, ನಮ್ಮ ಜೀವನ ಎಂತಹುದು ಎಂಬುದನ್ನು ನಮ್ಮ ಶತ್ರುಗಳೇ ನಿರ್ಧರಿಸುತ್ತಾರೆ. ನಮ್ಮ ಕಥೆಗಳನ್ನು ಮುಕ್ತವಾಗಿ ಹೇಳುವ ಪ್ರಜಾಪ್ರಭುತ್ವದ ಹಕ್ಕು ನಮಗಿಲ್ಲದಂತಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು. ಇಂತಹ ಸಂಕಷ್ಟದ ನಡುವೆಯೂ ಶ್ರೀಲಂಕಾದ ಕಥೆಯನ್ನು ಆಯ್ಕೆ ಮಾಡಿಕೊಂಡ ‘ನೀಲಿರ’ ಚಿತ್ರತಂಡವನ್ನು ಅವರು ಶ್ಲಾಘಿಸಿದರು. ಅಲ್ಲದೆ, ತೆಲುಗು ರಾಜ್ಯದವರಾಗಿದ್ದರೂ ಇಂತಹ ಕಥೆಗೆ ಬೆನ್ನೆಲುಬಾಗಿ ನಿಂತ ನಟ ರಾಣಾ ದಗ್ಗುಬಾಟಿ ಅವರ ಬೆಂಬಲವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಇತ್ತೀಚಿನ ಕೆಲವು ಸಿನಿಮಾಗಳ ಬಗ್ಗೆ ಮಾತನಾಡಿದ ಅವರು, ‘ಇಂದು ಕೋಟ್ಯಂತರ ರೂಪಾಯಿ ಖರ್ಚು ಮಾಡಿ, ಕೇವಲ ದ್ವೇಷ ಅಥವಾ ಹಿಂಸೆಯನ್ನು ಮಾರಾಟ ಮಾಡುವ ಮೂಲಕ ನೂರಾರು ಕೋಟಿ ಗಳಿಸುವ ಉದ್ದೇಶದ ಚಿತ್ರಗಳು ಬರುತ್ತಿವೆ. ಆದರೆ ನೀಲಿರ ಚಿತ್ರವು ಯಾವುದೇ ಧರ್ಮ, ಸಮುದಾಯ ಅಥವಾ ಜನಾಂಗವನ್ನು ಕೆಟ್ಟದಾಗಿ ಚಿತ್ರಿಸುವುದಿಲ್ಲ’ ಎಂದರು.

ಮುಖ್ಯವಾಗಿ, ನೋಟ್ ಬ್ಯಾನ್ ಬಗ್ಗೆ ವೆಟ್ರಿಮಾರನ್ ಅವರು ನೀಡಿದ ಹೇಳಿಕೆಯಿಂದ ಈ ವಿಡಿಯೋ ವೈರಲ್ ಆಗಿದೆ. ‘ನೋಟ್ ಬ್ಯಾನ್ ಸಮಯದಲ್ಲಿ ಯಾರು ಹೆಚ್ಚು ತೊಂದರೆ ಅನುಭವಿಸಿದರು ಮತ್ತು ಕ್ಯೂನಲ್ಲಿ ನಿಂತು ಎಷ್ಟು ಜೀವಗಳು ಹೋದವು ಎಂಬುದು ನಮಗೆಲ್ಲರಿಗೂ ಗೊತ್ತು. ಆದರೆ ಇಂದು ಸಿನಿಮಾಗಳ ಮೂಲಕ ಆ ನೆನಪನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಹೇಳಿದರು.

ಇದನ್ನೂ ಓದಿ: ‘ಧುರಂಧರ್’ ನಿರ್ಮಾಪಕರ ಜೊತೆ ಕೈ ಜೋಡಿಸಿದ ರಾಮ್ ಚರಣ್; ಸಿಕ್ತು ದೊಡ್ಡ ಸುದ್ದಿ

ಭಯೋತ್ಪಾದನೆಯನ್ನು ತಡೆಯಲು ಮತ್ತು ನಕಲಿ ನೋಟು ಹಾವಳಿಯನ್ನು ನಿಲ್ಲಿಸಲು ನೋಟ್ ಬ್ಯಾನ್ ಮಾಡಲಾಯಿತು ಎಂಬಂತೆ ‘ಧುರಂಧರ್ 2’ ಸಿನಿಮಾದಲ್ಲಿ ಚಿತ್ರಿಸಲಾಗಿದೆ. ಈ ಹಿನ್ನೆಲೆಯಲ್ಲಿ ವೆಟ್ರಿಮಾರನ್ ಅವರ ಮಾತುಗಳು ನೇರವಾಗಿ ಈ ಚಿತ್ರಕ್ಕೇ ಅನ್ವಯಿಸುತ್ತವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:11 am, Sun, 29 March 26

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!