Sign In

By signing in or creating an account, you agree with Associated Broadcasting Company's Terms & Conditions and Privacy Policy.

VG Siddhartha Biopic: ಸಿನಿಮಾ ಆಗ್ತಿದೆ ಕಾಫಿ ಡೇ ಸಿದ್ದಾರ್ಥ​ ಬದುಕಿನ ಕಥೆ; ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ಯಾರು?

Cafe Coffee Day | VG Siddhartha: ‘ಕೆಫೆ ಕಾಫಿ ಡೇ’ ಮಾಲಿಕ ಸಿದ್ದಾರ್ಥ ಜೀವನದ ಏಳು-ಬೀಳಿನ ವಿವರಗಳಿಗೆ ಸಿನಿಮಾ ರೂಪ ಸಿಗುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆಗಳು ಇದಕ್ಕಾಗಿ ಕೈ ಜೋಡಿಸಿರುವುದರಿಂದ ನಿರೀಕ್ಷೆ ಹೆಚ್ಚಿದೆ.

VG Siddhartha Biopic: ಸಿನಿಮಾ ಆಗ್ತಿದೆ ಕಾಫಿ ಡೇ ಸಿದ್ದಾರ್ಥ​ ಬದುಕಿನ ಕಥೆ; ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ಯಾರು?
ವಿ.ಜಿ. ಸಿದ್ದಾರ್ಥ
Follow us
TV9 Web
| Updated By: ಮದನ್​ ಕುಮಾರ್​

Updated on:Jun 17, 2022 | 1:06 PM

ಅನೇಕ ಬಯೋಪಿಕ್​ಗಳು ಜನರ ಮನಗೆದ್ದಿವೆ. ಸಾಧಕರ ಕಥೆಯನ್ನು ಬೆಳ್ಳಿಪರದೆ ಮೇಲೆ ನೋಡುವುದರಿಂದ ಪ್ರೇಕ್ಷಕರಿಗೆ ಸ್ಫೂರ್ತಿ ಹೆಚ್ಚುತ್ತದೆ. ಹಲವಾರು ಮಹಾನ್​ ವ್ಯಕ್ತಿಗಳ ಜೀವನದ ವಿವರವನ್ನು ಇಟ್ಟುಕೊಂಡು ಈಗಾಗಲೇ ಸಿನಿಮಾ ಮಾಡಲಾಗಿದೆ. ಬಾಲಿವುಡ್​ನಲ್ಲಿ ಬಯೋಪಿಕ್​ ಟ್ರೆಂಡ್​ ಜೋರಾಗಿದೆ. ಈಗ ‘ಕೆಫೆ ಕಾಫಿ ಡೇ’ (Cafe Coffee Day) ಸಂಸ್ಥಾಪಕ ವಿ.ಜಿ. ಸಿದ್ದಾರ್ಥ ಅವರ ಕುರಿತು ಬಯೋಪಿಕ್​ ಮಾಡಲು ಸಿದ್ಧತೆ ನಡೆಯುತ್ತಿದೆ. ಈ ಬಗ್ಗೆ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ. ಉದ್ಯಮ ಲೋಕದಲ್ಲಿ ಸಾಧನೆ ಮಾಡಿದ ಸಿದ್ದಾರ್ಥ (VG Siddhartha) ಅವರ ಜೀವನ ದುರಂತ ಅಂತ್ಯ ಕಂಡಿದ್ದು ಮಾತ್ರ ನೋವಿನ ಸಂಗತಿ. ಆದರೆ ಅವರು ಸಾಗಿ ಬಂದ ಹಾದಿ ನಿಜಕ್ಕೂ ಕೋಟ್ಯಂತರ ಜನರಿಗೆ ಮಾದರಿ ಆಗುವಂಥದ್ದು. ಹಾಗಾಗಿ ಅವರ ಬಯೋಪಿಕ್​ (VG Siddhartha Biopic) ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಮುಂದೆಬಂದಿವೆ.

ವಿ.ಜಿ. ಸಿದ್ದಾರ್ಥ ಅವರ ಜೀವನದ ಕುರಿತು ‘ಕಾಫಿ ಕಿಂಗ್​’ ಪುಸ್ತಕ ಸಿದ್ಧವಾಗುತ್ತಿದೆ. ಈ ಪುಸ್ತಕದಲ್ಲಿನ ವಿವರಗಳನ್ನು ಆಧಾರವಾಗಿ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ರೆಡಿಯಾಗಿದೆ. ‘ಟಿ-ಸಿರೀಸ್​’ ಮತ್ತು ‘ಆಲ್​ಮೈಟಿ ಮೋಷನ್​ ಪಿಕ್ಚರ್​’ ಸಂಸ್ಥೆಗಳು ಈ ಸಿನಿಮಾಗೆ ಬಂಡವಾಳ ಹೂಡಲಿವೆ. ಅದರ ಜೊತೆಗೆ ‘ಕರ್ಮ ಮೀಡಿಯಾ ಎಂಟರ್​ಟೇನ್​ಮೆಂಟ್​’ ಕೂಡ ಕೈ ಜೋಡಿಸುತ್ತಿದೆ. ಈ ಕುರಿತು ಟಿ-ಸಿರೀಸ್​ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ​ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಾಗಿದೆ.

‘ಸಾಕಷ್ಟು ಅಧ್ಯಯನ ನಡೆಸಿ ‘ಕಾಫಿ ಕಿಂಗ್​’ ಪುಸ್ತಕವನ್ನು ಬರೆಯಲಾಗಿದೆ. ಮಹಾನ್​ ಉದ್ಯಮಿ ಸಿದ್ದಾರ್ಥ ಬದುಕಿನ ಬಗ್ಗೆ ಗೊತ್ತಿರದ ಅನೇಕ ವಿಚಾರಗಳನ್ನು ಇದು ಒಳಗೊಂಡಿದೆ’ ಎಂದು ನಿರ್ಮಾಪಕ ಪ್ರಭಲೀನ್​ ಕೌರ್​ ಸಂಧು ಹೇಳಿದ್ದಾರೆ. ಈ ಸಿನಿಮಾದಲ್ಲಿ ವಿ.ಜಿ. ಸಿದ್ದಾರ್ಥ ಅವರ ಪಾತ್ರವನ್ನು ಯಾರು ಮಾಡಲಿದ್ದಾರೆ ಎಂಬ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ಸಿದ್ದಾರ್ಥ ಬದುಕಿನ ದುರಂತ ಅಂತ್ಯ:

‘ಕೆಫೆ ಕಾಫಿ ಡೇ’ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ ಸಿದ್ದಾರ್ಥ ಅವರು ಸಾಲದ ಸುಳಿಗೆ ಸಿಲುಕಿದ್ದರು. ಬಿಸ್ನೆಸ್​ನಲ್ಲಿ ನಷ್ಟ ಆಗಿದ್ದರಿಂದ ಅವರು ಆತ್ಯಹತ್ಯೆ ಮಾಡಿಕೊಂಡರು. 2019ರ ಜುಲೈ 31ರಂದು ತಮ್ಮ 59ನೇ ವಯಸ್ಸಿನಲ್ಲಿ ಅವರು ನಿಧನರಾದರು. ಅವರ ಜೀವನದ ಏಳು-ಬೀಳಿನ ವಿವರಗಳಿಗೆ ಸಿನಿಮಾ ರೂಪ ಸಿಗುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆಗಳು ಇದಕ್ಕಾಗಿ ಕೈ ಜೋಡಿಸಿರುವುದರಿಂದ ನಿರೀಕ್ಷೆ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:06 pm, Fri, 17 June 22

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !