AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VG Siddhartha Biopic: ಸಿನಿಮಾ ಆಗ್ತಿದೆ ಕಾಫಿ ಡೇ ಸಿದ್ದಾರ್ಥ​ ಬದುಕಿನ ಕಥೆ; ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ಯಾರು?

Cafe Coffee Day | VG Siddhartha: ‘ಕೆಫೆ ಕಾಫಿ ಡೇ’ ಮಾಲಿಕ ಸಿದ್ದಾರ್ಥ ಜೀವನದ ಏಳು-ಬೀಳಿನ ವಿವರಗಳಿಗೆ ಸಿನಿಮಾ ರೂಪ ಸಿಗುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆಗಳು ಇದಕ್ಕಾಗಿ ಕೈ ಜೋಡಿಸಿರುವುದರಿಂದ ನಿರೀಕ್ಷೆ ಹೆಚ್ಚಿದೆ.

VG Siddhartha Biopic: ಸಿನಿಮಾ ಆಗ್ತಿದೆ ಕಾಫಿ ಡೇ ಸಿದ್ದಾರ್ಥ​ ಬದುಕಿನ ಕಥೆ; ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ಯಾರು?
ವಿ.ಜಿ. ಸಿದ್ದಾರ್ಥ
TV9 Web
| Updated By: ಮದನ್​ ಕುಮಾರ್​|

Updated on:Jun 17, 2022 | 1:06 PM

Share

ಅನೇಕ ಬಯೋಪಿಕ್​ಗಳು ಜನರ ಮನಗೆದ್ದಿವೆ. ಸಾಧಕರ ಕಥೆಯನ್ನು ಬೆಳ್ಳಿಪರದೆ ಮೇಲೆ ನೋಡುವುದರಿಂದ ಪ್ರೇಕ್ಷಕರಿಗೆ ಸ್ಫೂರ್ತಿ ಹೆಚ್ಚುತ್ತದೆ. ಹಲವಾರು ಮಹಾನ್​ ವ್ಯಕ್ತಿಗಳ ಜೀವನದ ವಿವರವನ್ನು ಇಟ್ಟುಕೊಂಡು ಈಗಾಗಲೇ ಸಿನಿಮಾ ಮಾಡಲಾಗಿದೆ. ಬಾಲಿವುಡ್​ನಲ್ಲಿ ಬಯೋಪಿಕ್​ ಟ್ರೆಂಡ್​ ಜೋರಾಗಿದೆ. ಈಗ ‘ಕೆಫೆ ಕಾಫಿ ಡೇ’ (Cafe Coffee Day) ಸಂಸ್ಥಾಪಕ ವಿ.ಜಿ. ಸಿದ್ದಾರ್ಥ ಅವರ ಕುರಿತು ಬಯೋಪಿಕ್​ ಮಾಡಲು ಸಿದ್ಧತೆ ನಡೆಯುತ್ತಿದೆ. ಈ ಬಗ್ಗೆ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ. ಉದ್ಯಮ ಲೋಕದಲ್ಲಿ ಸಾಧನೆ ಮಾಡಿದ ಸಿದ್ದಾರ್ಥ (VG Siddhartha) ಅವರ ಜೀವನ ದುರಂತ ಅಂತ್ಯ ಕಂಡಿದ್ದು ಮಾತ್ರ ನೋವಿನ ಸಂಗತಿ. ಆದರೆ ಅವರು ಸಾಗಿ ಬಂದ ಹಾದಿ ನಿಜಕ್ಕೂ ಕೋಟ್ಯಂತರ ಜನರಿಗೆ ಮಾದರಿ ಆಗುವಂಥದ್ದು. ಹಾಗಾಗಿ ಅವರ ಬಯೋಪಿಕ್​ (VG Siddhartha Biopic) ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಮುಂದೆಬಂದಿವೆ.

ವಿ.ಜಿ. ಸಿದ್ದಾರ್ಥ ಅವರ ಜೀವನದ ಕುರಿತು ‘ಕಾಫಿ ಕಿಂಗ್​’ ಪುಸ್ತಕ ಸಿದ್ಧವಾಗುತ್ತಿದೆ. ಈ ಪುಸ್ತಕದಲ್ಲಿನ ವಿವರಗಳನ್ನು ಆಧಾರವಾಗಿ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ರೆಡಿಯಾಗಿದೆ. ‘ಟಿ-ಸಿರೀಸ್​’ ಮತ್ತು ‘ಆಲ್​ಮೈಟಿ ಮೋಷನ್​ ಪಿಕ್ಚರ್​’ ಸಂಸ್ಥೆಗಳು ಈ ಸಿನಿಮಾಗೆ ಬಂಡವಾಳ ಹೂಡಲಿವೆ. ಅದರ ಜೊತೆಗೆ ‘ಕರ್ಮ ಮೀಡಿಯಾ ಎಂಟರ್​ಟೇನ್​ಮೆಂಟ್​’ ಕೂಡ ಕೈ ಜೋಡಿಸುತ್ತಿದೆ. ಈ ಕುರಿತು ಟಿ-ಸಿರೀಸ್​ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ​ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಾಗಿದೆ.

‘ಸಾಕಷ್ಟು ಅಧ್ಯಯನ ನಡೆಸಿ ‘ಕಾಫಿ ಕಿಂಗ್​’ ಪುಸ್ತಕವನ್ನು ಬರೆಯಲಾಗಿದೆ. ಮಹಾನ್​ ಉದ್ಯಮಿ ಸಿದ್ದಾರ್ಥ ಬದುಕಿನ ಬಗ್ಗೆ ಗೊತ್ತಿರದ ಅನೇಕ ವಿಚಾರಗಳನ್ನು ಇದು ಒಳಗೊಂಡಿದೆ’ ಎಂದು ನಿರ್ಮಾಪಕ ಪ್ರಭಲೀನ್​ ಕೌರ್​ ಸಂಧು ಹೇಳಿದ್ದಾರೆ. ಈ ಸಿನಿಮಾದಲ್ಲಿ ವಿ.ಜಿ. ಸಿದ್ದಾರ್ಥ ಅವರ ಪಾತ್ರವನ್ನು ಯಾರು ಮಾಡಲಿದ್ದಾರೆ ಎಂಬ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ಸಿದ್ದಾರ್ಥ ಬದುಕಿನ ದುರಂತ ಅಂತ್ಯ:

‘ಕೆಫೆ ಕಾಫಿ ಡೇ’ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ ಸಿದ್ದಾರ್ಥ ಅವರು ಸಾಲದ ಸುಳಿಗೆ ಸಿಲುಕಿದ್ದರು. ಬಿಸ್ನೆಸ್​ನಲ್ಲಿ ನಷ್ಟ ಆಗಿದ್ದರಿಂದ ಅವರು ಆತ್ಯಹತ್ಯೆ ಮಾಡಿಕೊಂಡರು. 2019ರ ಜುಲೈ 31ರಂದು ತಮ್ಮ 59ನೇ ವಯಸ್ಸಿನಲ್ಲಿ ಅವರು ನಿಧನರಾದರು. ಅವರ ಜೀವನದ ಏಳು-ಬೀಳಿನ ವಿವರಗಳಿಗೆ ಸಿನಿಮಾ ರೂಪ ಸಿಗುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆಗಳು ಇದಕ್ಕಾಗಿ ಕೈ ಜೋಡಿಸಿರುವುದರಿಂದ ನಿರೀಕ್ಷೆ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:06 pm, Fri, 17 June 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ