AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ವಿಕ್ಕಿ- ಕತ್ರಿನಾ ಕಲ್ಯಾಣ; ಅತಿಥಿಗಳ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಸಲ್ಮಾನ್ ಭಾಗಿಯಾಗಲಿದ್ದಾರಂತೆ!

Vicky Kaushal | Katrina Kaif: ಬಾಲಿವುಡ್​ನ ಪ್ರೇಮ ಪಕ್ಷಿಗಳೆಂದೇ ಹೇಳಲಾಗುವ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ದಾಂಪತ್ಯಕ್ಕೆ ಕಾಲಿಡಲಿದ್ಧಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕತ್ರಿನಾ ಮಾಜಿ ಗೆಳೆಯ ಸಲ್ಮಾನ್ ಖಾನ್ ಮದುವೆಯಲ್ಲಿ ಭಾಗವಹಿಸುತ್ತಾರೆಯೇ ಎಂಬ ಚರ್ಚೆ ಬಾಲಿವುಡ್ ಅಂಗಳದಲ್ಲಿ ಜೋರಾಗಿದೆ.

Salman Khan: ವಿಕ್ಕಿ- ಕತ್ರಿನಾ ಕಲ್ಯಾಣ; ಅತಿಥಿಗಳ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಸಲ್ಮಾನ್ ಭಾಗಿಯಾಗಲಿದ್ದಾರಂತೆ!
ವಿಕ್ಕಿ ಕೌಶಲ್, ಕತ್ರಿನಾ ಕೈಫ್, ಸಲ್ಮಾನ್ ಖಾನ್
TV9 Web
| Updated By: shivaprasad.hs|

Updated on: Nov 14, 2021 | 9:47 AM

Share

ಬಾಲಿವುಡ್​​ನಲ್ಲಿ ಮತ್ತೊಂದು ತಾರಾ ಜೋಡಿ ಹಸೆಮಣೆ ಏರಲು ಸಜ್ಜಾಗುತ್ತಿದೆ, ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿಬರುತ್ತಿದೆ. ಡಿಸೆಂಬರ್ ಮೊದಲ ಹಾಗೂ ಎರಡನೇ ವಾರದ ಅವಧಿಯಲ್ಲಿ ಮದುವೆ ನಡೆಯಲಿದೆ ಎನ್ನಲಾಗಿದ್ದು, ಇದಕ್ಕಾಗಿ ಸವಾಯಿ ಮಾಧೋಪುರದ ಬರ್ವಾರಾ ಕೋಟೆ ಸಜ್ಜಾಗಿದೆ. ಅಚ್ಚರಿಯ ವಿಷಯವೆಂದರೆ, ವಿಕ್ಕಿ ಹಾಗೂ ಕತ್ರಿನಾ ಕಲ್ಯಾಣ ಕೇವಲ ಆಪ್ತ ವರ್ಗ ಹಾಗೂ ಬಾಲಿವುಡ್ ತಾರೆಯರ ಸಮ್ಮುಖದಲ್ಲಿ ನಡೆಯಲಿದೆ. ಹಿಂದೂ ಹಾಗೂ ಇಸ್ಲಾಂ ಸಂಪ್ರದಾಯದಂತೆ ಐದು ದಿನಗಳ ಕಾಲ ಮದುವೆ ನಡೆಯಲಿದೆ ಎನ್ನಲಾಗಿದೆ. ಕೆಲವು ವರದಿಗಳ ಪ್ರಕಾರ ಸಲ್ಮಾನ್ ಖಾನ್ ಮದುವೆಯಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗಿತ್ತು. ಕತ್ರಿನಾರ ಮಾಜಿ ಗೆಳೆಯನೆಂದೇ ಹೇಳಲಾಗುವ ಸಲ್ಮಾನ್ ಭಾಗುಯಾಗುವ ಬಗ್ಗೆ ಕುತೂಹಲ ಮೂಡಿತ್ತು. ಆದರೆ ಇದೀಗ ಮತ್ತೊಂದು ಅಚ್ಚರಿಯ ವಿಚಾರ ಹೊರಬಿದ್ದಿದೆ.

ವಿಕ್ಕಿ ಹಾಗೂ ಕತ್ರಿನಾ ಮದುವೆಗೆ ಬಾಲಿವುಡ್ ತಾರೆಯರಾದ ಕಬೀರ್ ಖಾನ್, ರೋಹಿತ್ ಶೆಟ್ಟಿ, ವರುಣ್ ಧವನ್, ನತಾಶಾ ದಲಾಲ್, ಕರಣ್ ಜೋಹರ್ ಮೊದಲಾದವರಿಗೆ ಈಗಾಗಲೇ ಆಹ್ವಾನ ಹೋಗಿದೆಯಂತೆ. ಕತ್ರಿನಾರ ಮಾಜಿ ಗೆಳೆಯ ರಣಬೀರ್​ಗೂ ಆಹ್ವಾನ ಹೋಗಿದ್ದು, ಆಲಿಯಾ ಭಟ್​ರೊಂದಿಗೆ ಅವರೂ ಮದುವೆಗೆ ಹಾಜರಿರಲಿದ್ದಾರೆ. ನಟ ಸಿದ್ಧಾರ್ಥ್ ಮಲ್ಹೋತ್ರಾರಿಗೂ ಆಹ್ವಾನ ಹೋಗಿದ್ದು, ಅವರ ಗೆಳತಿಯೆಂದು ಹೇಳಲಾಗುವ ಕಿಯಾರಾ ಅಡ್ವಾನಿಯೊಂದಿಗೆ ಭಾಗಿಯಾಗಲಿದ್ದಾರೆ.ಈಗಾಗಲೇ ಕುಟುಂಬದವರು ರಾಜಸ್ಥಾನ ತಲುಪಿದ್ದು, ತಯಾರಿ ನಡೆಸುತ್ತಿದ್ದಾರೆ. ದೀಪಾವಳಿಯ ಸಮಯದಲ್ಲಿ ಕತ್ರಿನಾ ಹಾಗೂ ವಿಕ್ಕಿ ಕೌಶಲ್ ಎಂಗೇಜ್​ಮೆಂಟ್ ಆಗಿದ್ದಾರೆ ಎನ್ನಲಾಗಿದೆ. ಆ ಸಮಯದಲ್ಲಿ ಕಬೀರ್ ಖಾನ್ ಉಪಸ್ಥಿತರಿದ್ದರು.

ನಟ ಸಲ್ಮಾನ್ ಖಾನ್ ಕತ್ರಿನಾಗೆ ಬಾಲಿವುಡ್​ನಲ್ಲಿ ಗುರು ಎಂದೇ ಹೇಳಬಹುದು. ಆದ್ದರಿಂದಲೇ ಸಲ್ಮಾಲ್​ರನ್ನು​ ಅತಿಥಿ ಎನ್ನುವುದಕ್ಕಿಂತ ಕುಟುಂಬದವರು ಎಂದೇ ಹೇಳಬಹುದು. ಕಾರಣ, ಕತ್ರಿನಾರ ನಟನೆಯ ಏಳುಬೀಳುಗಳಲ್ಲಿ ಜೊತೆಯಾಗಿ ನಿಂತು ಧೈರ್ಯ ತುಂಬಿದ್ದು, ಸಲ್ಮಾನ್ ಖಾನ್ ಹಾಗೂ ಅವರ ಕುಟುಂಬ. ಆದ್ದರಿಂದಲೇ ಸಲ್ಮಾನ್ ಮತ್ತು ಕುಟುಂಬ ತಮ್ಮದೇ ಕುಟುಂಬದ ಮದುವೆಯಂತೆ ತಯಾರಿಯಲ್ಲಿ ತೊಡಗಿದ್ದಾರೆ ಎಂದು ಬಾಲಿವುಡ್ ಲೈಫ್ ವರದಿ ಮಾಡಿದೆ. ಆದ್ದರಿಂದಲೇ ಸಲ್ಮಾನ್ ಅತಿಥಿಯಾಗಿ ಮದುವೆಯಲ್ಲಿ ಭಾಗವಹಿಸುವುದಕ್ಕಿಂತ ಕುಟುಂಬದ ಸದಸ್ಯರಾಗಿ ಕಲ್ಯಾಣದಲ್ಲಿ ಹಾಜರಿರಲಿದ್ದಾರಂತೆ!

ಇದನ್ನೂ ಓದಿ:

ಕತ್ರಿನಾ ಮದುವೆಯಾಗುತ್ತಿರುವ ಹೋಟೆಲ್​ನಲ್ಲಿ ಒಂದು ರಾತ್ರಿ ಕಳೆಯಲು ಐದು ಲಕ್ಷ ಪಾವತಿಸಬೇಕು

ಮದುವೆ ಬಳಿಕ ಹನಿಮೂನ್​ಗೆ ಹೋಗಲ್ಲ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​; ಕಾರಣ ಏನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ