AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vicky Kaushal: ರೋಹಿತ್​ ಶೆಟ್ಟಿ ಕಾಪ್​ ಯೂನಿವರ್ಸ್​ನಲ್ಲಿ ವಿಕ್ಕಿ ಕೌಶಲ್​? ಬಾಲಿವುಡ್​ ಅಂಗಳದಲ್ಲಿ ಕೇಳಿಬರ್ತಿದೆ ಗಾಸಿಪ್​

Rohit Shetty Cop Universe: ಜೊತೆಯಾಗಿ ಒಂದು ಸಿನಿಮಾ ಮಾಡಬೇಕು ಎಂದು ರೋಹಿತ್​ ಶೆಟ್ಟಿ ಮತ್ತು ವಿಕ್ಕಿ ಕೌಶಲ್​ ಅವರು ಲಾಕ್​ಡೌನ್​ಗಿಂತಲೂ ಮುನ್ನವೇ ಪ್ಲ್ಯಾನ್​ ಮಾಡುತ್ತಿದ್ದರು. ಅದಕ್ಕೆ ಈಗ ಕಾಲ ಕೂಡಿಬಂದಿದೆ.

Vicky Kaushal: ರೋಹಿತ್​ ಶೆಟ್ಟಿ ಕಾಪ್​ ಯೂನಿವರ್ಸ್​ನಲ್ಲಿ ವಿಕ್ಕಿ ಕೌಶಲ್​? ಬಾಲಿವುಡ್​ ಅಂಗಳದಲ್ಲಿ ಕೇಳಿಬರ್ತಿದೆ ಗಾಸಿಪ್​
ವಿಕ್ಕಿ ಕೌಶಲ್, ರೋಹಿತ್ ಶೆಟ್ಟಿ
ಮದನ್​ ಕುಮಾರ್​
|

Updated on: May 17, 2023 | 2:46 PM

Share

ನಿರ್ದೇಶಕ ರೋಹಿತ್​ ಶೆಟ್ಟಿ (Rohit Shetty) ಅವರು ಮಾಸ್​ ಸಿನಿಮಾಗಳನ್ನು ಮಾಡುವಲ್ಲಿ ಸಖತ್​ ಫೇಮಸ್​. ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಕಾಪ್​ ಯೂನಿವರ್ಸ್​ (Cop Universe) ಸೃಷ್ಟಿ ಮಾಡಿದ್ದಾರೆ. ‘ಸಿಂಘಂ’ ಚಿತ್ರದಲ್ಲಿ ಅಜಯ್​ ದೇವಗನ್​, ‘ಸಿಂಬಾ’ ಸಿನಿಮಾದಲ್ಲಿ ರಣವೀರ್​ ಸಿಂಗ್​ ಹಾಗೂ ‘ಸೂರ್ಯವಂಶಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್ ಅವರು ಪೊಲೀಸ್​ ಪಾತ್ರಗಳನ್ನು ಮಾಡಿ ಜನರ ಗಮನ ಸೆಳೆದಿದ್ದಾರೆ. ಈಗ ಈ ಸಾಲಿಗೆ ಹೊಸ ಹೊಸ ಕಲಾವಿದರು ಸೇರ್ಪಡೆ ಆಗುತ್ತಿದ್ದಾರೆ. ಆ ಪೈಕಿ ನಟ ವಿಕ್ಕಿ ಕೌಶಲ್​ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ರೋಹಿತ್​ ಶೆಟ್ಟಿ ಅವರ ಕಾಪ್​ ಯೂನಿವರ್ಸ್​ನಲ್ಲಿ ವಿಕ್ಕಿ ಕೌಶಲ್​ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ರೋಹಿತ್​ ಶೆಟ್ಟಿ ಅವರಾಗಲೀ, ವಿಕ್ಕಿ ಕೌಶಲ್​ (Vicky Kaushal) ಅವರಾಗಲೀ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಬೆಂಕಿ ಇಲ್ಲದೇ ಹೊಗೆ ಆಡುವುದಿಲ್ಲ ಎನ್ನುತ್ತಿದ್ದಾರೆ ಗಾಸಿಪ್​ ಮಂದಿ.

ಈ ಮೊದಲು ‘ಸರ್ಕಸ್‌’ ಸಿನಿಮಾದ ಪ್ರಚಾರದ ವೇಳೆ ದೀಪಿಕಾ ಪಡುಕೋಣೆ ಅವರು ಕಾಪ್​ ಯೂನಿವರ್ಸ್​ ಸೇರಿಕೊಳ್ಳುತ್ತಾರೆ ಎಂದು ರೋಹಿತ್ ಶೆಟ್ಟಿ ಅವರು ಖಚಿತಪಡಿಸಿದ್ದರು. ಈಗ ವಿಕ್ಕಿ ಕೌಶಲ್ ಮತ್ತು ರೋಹಿತ್ ಶೆಟ್ಟಿ ‘ಸಿಂಘಂ ಅಗೇನ್’ ಸಿನಿಮಾಗಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

ಇದನ್ನೂ ಓದಿ: Vicky Kaushal: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ವಿಚ್ಛೇದನದ ಬಗ್ಗೆ ನೇರ ಪ್ರಶ್ನೆ; ಎಲ್ಲರ ಎದುರು ನಟ ನೀಡಿದ ಉತ್ತರ ಏನು?

ವಿಕ್ಕಿ ಕೌಶಲ್​ ಅವರಿಗಾಗಿ ರೋಹಿತ್​ ಶೆಟ್ಟಿ ಅವರು ಒಂದು ಒಳ್ಳೆಯ ಪಾತ್ರವನ್ನು ಸೃಷ್ಟಿಸುತ್ತಿದ್ದಾರೆ. ಈ ಪಾತ್ರ ಈ ಹಿಂದಿನ ಅವರ ಸಿನಿಮಾಗಳಿಗಿಂತಲೂ ಸಂಪೂರ್ಣ ಭಿನ್ನವಾಗಿ ಇರಲಿದೆ. ವಿಕ್ಕಿ ಕೌಶಲ್​ ಅವರಲ್ಲಿ ಇರುವ ಹೀರೋಯಿಸಂ​ ಗುಣವನ್ನು ಈ ಸಿನಿಮಾದಲ್ಲಿ ತೋರಿಸಬೇಕು ಎಂದು ರೋಹಿತ್​ ಶೆಟ್ಟಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Katrina Kaif: ಕತ್ರಿನಾ-ವಿಕ್ಕಿ ಕೌಶಲ್​ ಮದುವೆಯ ರಾತ್ರಿ ನಡೆದಿತ್ತು ಜೋರು ಗಲಾಟೆ; ಕಾರಣ ವಿವರಿಸಿದ ನಟಿ

ಜೊತೆಯಾಗಿ ಒಂದು ಸಿನಿಮಾ ಮಾಡಬೇಕು ಎಂದು ರೋಹಿತ್​ ಶೆಟ್ಟಿ ಮತ್ತು ವಿಕ್ಕಿ ಕೌಶಲ್​ ಅವರು ಲಾಕ್​ಡೌನ್​ಗಿಂತಲೂ ಮುನ್ನವೇ ಪ್ಲ್ಯಾನ್​ ಮಾಡುತ್ತಿದ್ದರು. ಅಂತಿಮವಾಗಿ ಅದು ಈಗ ‘ಸಿಂಘಂ ಅಗೇನ್​’ ಚಿತ್ರದ ಮೂಲಕ ಸಾಧ್ಯವಾಗುತ್ತಿದೆ. ಸ್ಕ್ರಿಪ್ಟ್​ ಪೂರ್ಣಗೊಂಡ ಬಳಿಕ ಅವರಿಬ್ಬರು ಈ ಸಿನಿಮಾಗೆ ಸಹಿ ಮಾಡಲಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!