AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್​ ಗಂಗೂಲಿ ಪಾತ್ರಕ್ಕಾಗಿ ವಿಕ್ಕಿ, ಸಿದ್ದಾರ್ಥ್​​ ಜತೆ ಮಾತುಕತೆ; ಬಯೋಪಿಕ್​ನಲ್ಲಿ ಯಾರಾಗ್ತಾರೆ ದಾದಾ?​

ಸೌರವ್​ ಗಂಗೂಲಿ ಬಯೋಪಿಕ್​ನಲ್ಲಿ ರಣಬೀರ್​ ಕಪೂರ್​ ನಟಿಸುತ್ತಾರೆ ಎಂಬ ಮಾಹಿತಿ ಈ ಹಿಂದೆ ಹರಿದಾಡಿತ್ತು. ಆದರೆ ಈಗ ವಿಕ್ಕಿ ಕೌಶಲ್​ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಹೆಸರುಗಳು ಕೇಳಿಬರುತ್ತಿವೆ. ನಿರ್ಮಾಣದ ಹೊಣೆಯನ್ನು ಲವ್​ ರಂಜನ್​ ಹೊತ್ತುಕೊಂಡಿದ್ದಾರೆ.

ಸೌರವ್​ ಗಂಗೂಲಿ ಪಾತ್ರಕ್ಕಾಗಿ ವಿಕ್ಕಿ, ಸಿದ್ದಾರ್ಥ್​​ ಜತೆ ಮಾತುಕತೆ; ಬಯೋಪಿಕ್​ನಲ್ಲಿ ಯಾರಾಗ್ತಾರೆ ದಾದಾ?​
ವಿಕ್ಕಿ ಕೌಶಲ್​, ಸೌರವ್​ ಗಂಗೂಲಿ, ಸಿದ್ಧಾರ್ಥ್​ ಮಲ್ಹೋತ್ರಾ
TV9 Web
| Edited By: |

Updated on:Oct 10, 2021 | 10:10 AM

Share

ಮಾಜಿ ಕ್ರಿಕೆಟಿಗ ಸೌರವ್​ ಗಂಗೂಲಿ ಅವರ ಜೀವನವನ್ನು ಆಧರಿಸಿ ಸಿನಿಮಾ ನಿರ್ಮಾಣ ಆಗುವ ಬಗ್ಗೆ ಕಳೆದೊಂದು ವರ್ಷದಿಂದಲೂ ಭಾರಿ ಚರ್ಚೆ ಆಗುತ್ತಿದೆ. ಈಗಾಗಲೇ ಈ ಚಿತ್ರಕ್ಕೆ ನಟರ ಆಯ್ಕೆ ಪ್ರಕ್ರಿಯೆ ಕೂಡ ಶುರುವಾಗಿದೆ ಎಂಬ ಮಾತು ಬಾಲಿವುಡ್​ ಅಂಗಳದಿಂದ ಹೇಳಿಬರುತ್ತಿದೆ. ನಿರ್ಮಾಪಕ-ನಿರ್ದೇಶಕ ಲವ್​ ರಂಜನ್​ ಅವರು ಬಯೋಪಿಕ್​ನ ಹಕ್ಕುಗಳನ್ನು ಖರೀಸಿದಿದ್ದಾರೆ. ಸೌರವ್​ ಗಂಗೂಲಿ ಪಾತ್ರದಲ್ಲಿ ಬಾಲಿವುಡ್​ ನಟರಾದ ಸಿದ್ದಾರ್ಥ್​ ಮಲ್ಹೋತ್ರಾ ಅಥವಾ ವಿಕ್ಕಿ ಕೌಶಲ್​ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮೊದಲು ರಣಬೀರ್​ ಕಪೂರ್ ಹೆಸರು ಕೇಳಿಬಂದಿತ್ತು.

ಈ ಮೊದಲು ಕೇಳಿಬಂದ ಮಾಹಿತಿ ಪ್ರಕಾರ ನಿರ್ಮಾಪಕ ಕರಣ್​ ಜೋಹರ್​ ಅವರು ಸೌರವ್​ ಗಂಗೂಲಿ ಬಯೋಪಿಕ್​ಗೆ ಬಂಡವಾಳ ಹೂಡಬೇಕಿತ್ತು. ಒಂದು ವೇಳೆ ಅವರು ನಿರ್ಮಾಣ ಮಾಡಿದ್ದರೆ ರಣಬೀರ್​ ಕಪೂರ್​ಗೆ ನಾಯಕನಾಗಿ ನಟಿಸುವ ಅವಕಾಶ ನೀಡುತ್ತಿದ್ದರು. ಆದರೆ ಈಗ ನಿರ್ಮಾಣದ ಹೊಣೆಯನ್ನು ಲವ್​ ರಂಜನ್​ ಹೊತ್ತುಕೊಂಡಿರುವುದರಿಂದ ಅವರು ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ವಿಕ್ಕಿ ಕೌಶಲ್​ ಕಡೆಗೆ ಆಸಕ್ತಿ ತೋರಿಸಿದ್ದಾರೆ ಎನ್ನಲಾಗುತ್ತಿದೆ.

ಈಗಾಗಲೇ ವಿಕ್ಕಿ ಕೌಶಲ್​ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಒಂದು ಸುತ್ತಿನ ಮಾತುಕತೆ ಮಾಡಲಾಗಿದೆ. ಸಿನಿಮಾ ಹೇಗೆ ಮೂಡಿಬರಲಿದೆ ಎಂಬುದನ್ನು ಕೂಡ ವಿವರಿಸಲಾಗಿದೆ. ಆದರೆ ಆ ನಟರಿಂದ ಯಾವ ರೀತಿ ಪ್ರತಿಕ್ರಿಯೆ ಬರಲಿದೆ ಎಂಬುದರ ಆಧಾರದ ಮೇಲೆ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬ ಗುಸುಗುಸು ಬಾಲಿವುಡ್​ ಅಂಗಳದಲ್ಲಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

ತಮ್ಮ ಬಯೋಪಿಕ್​ ಆಗುತ್ತಿರುವುದಕ್ಕೆ ಗಂಗೂಲಿ ಅವರಿಗೆ ಖುಷಿ ಇದೆ. ‘ಕ್ರಿಕೆಟ್ ನನ್ನ ಜೀವನ. ಈ ಕ್ರೀಡೆಯು ನನಗೆ ಆತ್ಮವಿಶ್ವಾಸ ನೀಡಿದೆ. ಎಲ್ಲರ ಮುಂದೆ ತಲೆಯೆತ್ತಿ ನಡೆಯುವಂತೆ ಮಾಡಿದೆ. ಇದೀಗ ಅದೇ ಕಥೆಯನ್ನು ಲವ್ ಫಿಲಂಸ್ ಚಿತ್ರವಾಗಿಸುತ್ತಿದೆ. ನನ್ನ ಜೀವನವನ್ನು ದೊಡ್ಡ ಪರದೆಯಲ್ಲಿ ತೋರಿಸುತ್ತಿರುವ ಬಗ್ಗೆ ನಾನು ಕೂಡ ಥ್ರಿಲ್ ಆಗಿದ್ದೇನೆ’ ಎಂದು ಅವರು ಈ ಹಿಂದೆ ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ:

‘ಕತ್ರಿನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಸ್ವೀಟ್​ ಕೊಡಪ್ಪ’; ಮಗನ ಕಾಲೆಳೆದ ವಿಕ್ಕಿ ತಂದೆ-ತಾಯಿ

Kiara Advani: ‘ಕಿಯಾರಾ ಜೊತೆ ಬಲವಂತವಾಗಿ ಕಿಸ್​ ಮಾಡಬೇಕಾಯ್ತು’: ಎಲ್ಲವನ್ನೂ ಒಪ್ಪಿಕೊಂಡ ಶೇರ್​ಷಾ ಹೀರೋ ಸಿದ್ದಾರ್ಥ್​

Published On - 9:01 am, Sun, 10 October 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!