AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್​ ಗಂಗೂಲಿ ಪಾತ್ರಕ್ಕಾಗಿ ವಿಕ್ಕಿ, ಸಿದ್ದಾರ್ಥ್​​ ಜತೆ ಮಾತುಕತೆ; ಬಯೋಪಿಕ್​ನಲ್ಲಿ ಯಾರಾಗ್ತಾರೆ ದಾದಾ?​

ಸೌರವ್​ ಗಂಗೂಲಿ ಬಯೋಪಿಕ್​ನಲ್ಲಿ ರಣಬೀರ್​ ಕಪೂರ್​ ನಟಿಸುತ್ತಾರೆ ಎಂಬ ಮಾಹಿತಿ ಈ ಹಿಂದೆ ಹರಿದಾಡಿತ್ತು. ಆದರೆ ಈಗ ವಿಕ್ಕಿ ಕೌಶಲ್​ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಹೆಸರುಗಳು ಕೇಳಿಬರುತ್ತಿವೆ. ನಿರ್ಮಾಣದ ಹೊಣೆಯನ್ನು ಲವ್​ ರಂಜನ್​ ಹೊತ್ತುಕೊಂಡಿದ್ದಾರೆ.

ಸೌರವ್​ ಗಂಗೂಲಿ ಪಾತ್ರಕ್ಕಾಗಿ ವಿಕ್ಕಿ, ಸಿದ್ದಾರ್ಥ್​​ ಜತೆ ಮಾತುಕತೆ; ಬಯೋಪಿಕ್​ನಲ್ಲಿ ಯಾರಾಗ್ತಾರೆ ದಾದಾ?​
ವಿಕ್ಕಿ ಕೌಶಲ್​, ಸೌರವ್​ ಗಂಗೂಲಿ, ಸಿದ್ಧಾರ್ಥ್​ ಮಲ್ಹೋತ್ರಾ
TV9 Web
| Updated By: ಮದನ್​ ಕುಮಾರ್​|

Updated on:Oct 10, 2021 | 10:10 AM

Share

ಮಾಜಿ ಕ್ರಿಕೆಟಿಗ ಸೌರವ್​ ಗಂಗೂಲಿ ಅವರ ಜೀವನವನ್ನು ಆಧರಿಸಿ ಸಿನಿಮಾ ನಿರ್ಮಾಣ ಆಗುವ ಬಗ್ಗೆ ಕಳೆದೊಂದು ವರ್ಷದಿಂದಲೂ ಭಾರಿ ಚರ್ಚೆ ಆಗುತ್ತಿದೆ. ಈಗಾಗಲೇ ಈ ಚಿತ್ರಕ್ಕೆ ನಟರ ಆಯ್ಕೆ ಪ್ರಕ್ರಿಯೆ ಕೂಡ ಶುರುವಾಗಿದೆ ಎಂಬ ಮಾತು ಬಾಲಿವುಡ್​ ಅಂಗಳದಿಂದ ಹೇಳಿಬರುತ್ತಿದೆ. ನಿರ್ಮಾಪಕ-ನಿರ್ದೇಶಕ ಲವ್​ ರಂಜನ್​ ಅವರು ಬಯೋಪಿಕ್​ನ ಹಕ್ಕುಗಳನ್ನು ಖರೀಸಿದಿದ್ದಾರೆ. ಸೌರವ್​ ಗಂಗೂಲಿ ಪಾತ್ರದಲ್ಲಿ ಬಾಲಿವುಡ್​ ನಟರಾದ ಸಿದ್ದಾರ್ಥ್​ ಮಲ್ಹೋತ್ರಾ ಅಥವಾ ವಿಕ್ಕಿ ಕೌಶಲ್​ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮೊದಲು ರಣಬೀರ್​ ಕಪೂರ್ ಹೆಸರು ಕೇಳಿಬಂದಿತ್ತು.

ಈ ಮೊದಲು ಕೇಳಿಬಂದ ಮಾಹಿತಿ ಪ್ರಕಾರ ನಿರ್ಮಾಪಕ ಕರಣ್​ ಜೋಹರ್​ ಅವರು ಸೌರವ್​ ಗಂಗೂಲಿ ಬಯೋಪಿಕ್​ಗೆ ಬಂಡವಾಳ ಹೂಡಬೇಕಿತ್ತು. ಒಂದು ವೇಳೆ ಅವರು ನಿರ್ಮಾಣ ಮಾಡಿದ್ದರೆ ರಣಬೀರ್​ ಕಪೂರ್​ಗೆ ನಾಯಕನಾಗಿ ನಟಿಸುವ ಅವಕಾಶ ನೀಡುತ್ತಿದ್ದರು. ಆದರೆ ಈಗ ನಿರ್ಮಾಣದ ಹೊಣೆಯನ್ನು ಲವ್​ ರಂಜನ್​ ಹೊತ್ತುಕೊಂಡಿರುವುದರಿಂದ ಅವರು ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ವಿಕ್ಕಿ ಕೌಶಲ್​ ಕಡೆಗೆ ಆಸಕ್ತಿ ತೋರಿಸಿದ್ದಾರೆ ಎನ್ನಲಾಗುತ್ತಿದೆ.

ಈಗಾಗಲೇ ವಿಕ್ಕಿ ಕೌಶಲ್​ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಒಂದು ಸುತ್ತಿನ ಮಾತುಕತೆ ಮಾಡಲಾಗಿದೆ. ಸಿನಿಮಾ ಹೇಗೆ ಮೂಡಿಬರಲಿದೆ ಎಂಬುದನ್ನು ಕೂಡ ವಿವರಿಸಲಾಗಿದೆ. ಆದರೆ ಆ ನಟರಿಂದ ಯಾವ ರೀತಿ ಪ್ರತಿಕ್ರಿಯೆ ಬರಲಿದೆ ಎಂಬುದರ ಆಧಾರದ ಮೇಲೆ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬ ಗುಸುಗುಸು ಬಾಲಿವುಡ್​ ಅಂಗಳದಲ್ಲಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

ತಮ್ಮ ಬಯೋಪಿಕ್​ ಆಗುತ್ತಿರುವುದಕ್ಕೆ ಗಂಗೂಲಿ ಅವರಿಗೆ ಖುಷಿ ಇದೆ. ‘ಕ್ರಿಕೆಟ್ ನನ್ನ ಜೀವನ. ಈ ಕ್ರೀಡೆಯು ನನಗೆ ಆತ್ಮವಿಶ್ವಾಸ ನೀಡಿದೆ. ಎಲ್ಲರ ಮುಂದೆ ತಲೆಯೆತ್ತಿ ನಡೆಯುವಂತೆ ಮಾಡಿದೆ. ಇದೀಗ ಅದೇ ಕಥೆಯನ್ನು ಲವ್ ಫಿಲಂಸ್ ಚಿತ್ರವಾಗಿಸುತ್ತಿದೆ. ನನ್ನ ಜೀವನವನ್ನು ದೊಡ್ಡ ಪರದೆಯಲ್ಲಿ ತೋರಿಸುತ್ತಿರುವ ಬಗ್ಗೆ ನಾನು ಕೂಡ ಥ್ರಿಲ್ ಆಗಿದ್ದೇನೆ’ ಎಂದು ಅವರು ಈ ಹಿಂದೆ ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ:

‘ಕತ್ರಿನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಸ್ವೀಟ್​ ಕೊಡಪ್ಪ’; ಮಗನ ಕಾಲೆಳೆದ ವಿಕ್ಕಿ ತಂದೆ-ತಾಯಿ

Kiara Advani: ‘ಕಿಯಾರಾ ಜೊತೆ ಬಲವಂತವಾಗಿ ಕಿಸ್​ ಮಾಡಬೇಕಾಯ್ತು’: ಎಲ್ಲವನ್ನೂ ಒಪ್ಪಿಕೊಂಡ ಶೇರ್​ಷಾ ಹೀರೋ ಸಿದ್ದಾರ್ಥ್​

Published On - 9:01 am, Sun, 10 October 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು