AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vicky Kaushal: ಕತ್ರೀನಾ ಜೊತೆಗಿನ ಎಂಗೇಜ್​ಮೆಂಟ್ ಕುರಿತು ಕೊನೆಗೂ ಮೌನ ಮುರಿದ ವಿಕ್ಕಿ ಕೌಶಲ್

Katrina Kaif: ಬಾಲಿವುಡ್​ನಲ್ಲಿ ಸದ್ಯ ಚರ್ಚೆಯಲ್ಲಿರುವ ಗಾಸಿಪ್ ಜೋಡಿಗಳಲ್ಲಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಜೋಡಿಯೂ ಒಂದು. ಇತ್ತೀಚೆಗೆ ವಿಕ್ಕಿ ಕೌಶಲ್ ನಿಶ್ಚಿತಾರ್ಥದ ಕುರಿತು ಮಾತನಾಡಿದ್ದು, ಗಾಸಿಪ್​ಗಳು ಅಂತ್ಯವಾಗುವ ಸಂದರ್ಭ ಗೋಚರಿಸಿದೆ.

Vicky Kaushal: ಕತ್ರೀನಾ ಜೊತೆಗಿನ ಎಂಗೇಜ್​ಮೆಂಟ್ ಕುರಿತು ಕೊನೆಗೂ ಮೌನ ಮುರಿದ ವಿಕ್ಕಿ ಕೌಶಲ್
ವಿಕ್ಕಿ ಕೌಶಲ್, ಕತ್ರಿನಾ ಕೈಫ್
TV9 Web
| Edited By: |

Updated on: Oct 17, 2021 | 10:16 PM

Share

ಸದ್ಯ ಬಾಲಿವುಡ್ ನಟ ವಿಕ್ಕಿ ಕೌಶಲ್ ತಮ್ಮ ಚಿತ್ರ ‘ಸರ್ದಾರ್ ಉಧಮ್’ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಈ ನಡುವೆ ಅವರು ಬಹಳ ಚರ್ಚೆಯಾಗುತ್ತಿರುವ ಕತ್ರೀನಾ ಕೈಫ್ ಹಾಗೂ ಅಅವರ ಸಂಬಂಧದ ಕುರಿತು ಬಹಿರಂಗವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಚ್ಚರಿಯ ವಿಚಾರವೆಂದರೆ ಅವರು, ತಮ್ಮ ಮಾತಿನಲ್ಲಿ ಗಾಸಿಪ್​ಗಳನ್ನು ನಿರಾಕರಿಸಿಲ್ಲ. ಹಾಗಂತ ಒಪ್ಪಿಕೊಂಡೂ ಇಲ್ಲ. ಅದಾಗ್ಯೂ ಅಭಿಮಾನಿಗಳು ಖುಷಿಪಡುವಂತಹ ಸುದ್ದಿಯೊಂದನ್ನು ಅವರು ನೀಡಿದ್ದಾರೆ. ಏನದು? ಮುಂದೆ ಓದಿ.

ಇತ್ತೀಚೆಗೆ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ವಿಕ್ಕಿ ಕೌಶಲ್, ಕತ್ರೀನಾ ಜೊತೆಗಿನ ಸಂಬಂಧದ ಕುರಿತು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಅವರು ಈ ಹಿಂದೆ ಕತ್ರಿನಾ ಜೊತೆಗೆ ಎಂಗೇಜ್​ಮೆಂಟ್ ಆಗಿತ್ತು ಎಂಬ ಸುದ್ದಿ ಹರಿದಾಡಿದ್ದಕ್ಕೂ ಉತ್ತರ ನೀಡಿದ್ದಾರೆ. ‘ಈ ಎಲ್ಲದಕ್ಕೂ ಸಮಯ ಬರುತ್ತದೆ. ಆಗ ತಾನು ಉತ್ತರಿಸಲಿದ್ದೇನೆ’ ಎಂದು ಅವರು ನುಡಿದಿರುವುದಲ್ಲದೇ, ಸದ್ಯದಲ್ಲೇ ನಿಶ್ಚಿತಾರ್ಥವನ್ನೂ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. ವಿಕ್ಕಿಯವರ ಈ ಮಾತು ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದ್ದು, ಕತ್ರಿನಾ- ವಿಕ್ಕಿ ಸದ್ಯದಲ್ಲೇ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ಧಾರೆ ಎನ್ನುತ್ತಿದ್ದಾರೆ.

ಕತ್ರಿನಾ ಹಾಗೂ ವಿಕ್ಕಿ ಕೌಶಲ್ ಜೊತೆಯಾಗಿ ಓಡಾಡಲು ಪ್ರಾರಂಭಿಸಿ ಕೆಲವು ಸಮಯ ಕಳೆದಿದೆ. ಇತ್ತೀಚೆಗೆ ಸರ್ದಾರ್ ಉಧಮ್  ಚಿತ್ರದ ಪ್ರೀಮಿಯರ್​​ನಲ್ಲಿ ಕತ್ರಿನಾ ಕಾಣಿಸಿಕೊಂಡಿದ್ದರು. ನಂತರ ಇನ್ಸ್ಟಾಗ್ರಾಂನಲ್ಲಿ ವಿಕ್ಕಿ ಕೌಶಲ್ ನಟನೆಯನ್ನು ಹೊಗಳಿದ್ದರು. ಅಲ್ಲದೇ, ಪ್ರೀಮಿಯರ್ ಸಂದರ್ಭದಲ್ಲಿ ವಿಕ್ಕಿ ಹಾಗೂ ಕತ್ರೀನಾ ಜೊತೆಗಿರುವ ಚಿತ್ರಗಳು ವೈರಲ್ ಆಗಿದ್ದವು.

‘ಸರ್ದಾರ್ ಉಧಮ್’ ಚಿತ್ರದ ಪ್ರೀಮಿಯರ್​ನಲ್ಲಿ ಕತ್ರೀನಾ:

ವಿಕ್ಕಿ ಕೌಶಲ್ ಹಾಗೂ ಕತ್ರಿನಾ 2019ರಿಂದಲೇ ಜೊತೆಯಾಗಿ ಸುತ್ತಾಡುತ್ತಿದ್ದಾರೆ. ಆದರೆ ಈರ್ವರು ಕೂಡ ಇದುವರೆಗೂ ತಮ್ಮ ಸಂಬಂಧದ ಬಗ್ಗೆ ಗಪ್​ಚುಪ್ ಎಂದಿಲ್ಲ. ಕೆಲ ಸಮಯದ ಹಿಂದೆ ಈ ಜೋಡಿ ಎಂಗೇಜ್​ಮೆಂಟ್ ಆಗಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು.  ಆದರೆ ಎರಡೂ ಕಡೆಯ ಕುಟುಂಬದವರು ಹಾಗೂ ಆಪ್ತರು ಅದನ್ನು ನಿರಾಕರಿಸಿದ್ದರು. ಈ ಬಾರಿ ವಿಕ್ಕಿ ಕೌಶಲ್ ಸ್ವತಃ ಎಂಗೇಜ್​ಮೆಂಟ್ ವಿಚಾರ ಮಾತನಾಡಿರುವುದರಿಂದ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

ಇದನ್ನೂ ಓದಿ:

ಸಾಕುನಾಯಿಗೆ ಬರೋಬ್ಬರಿ ₹ 15 ಕೋಟಿ ಆಸ್ತಿ ಬರೆಯಲು ಮುಂದಾದ ಮಾಡೆಲ್; ಇದರ ಹಿಂದಿದೆ ಅಚ್ಚರಿಯ ಕಾರಣ

ಶಸ್ತ್ರಚಿಕಿತ್ಸೆಗೆ ಒಳಗಾದ ಮೆಗಾಸ್ಟಾರ್​ ಚಿರಂಜೀವಿ; ಚಿಂತೆಗೊಳಗಾದ ಫ್ಯಾನ್ಸ್​

ಶೋ ನಡುವೆ ಮಲೈಕಾ ಕೆನ್ನೆ ಮುಟ್ಟಿ, ನಮಸ್ಕಾರ ಮಾಡಿದ ಸ್ಪರ್ಧಿ; ಅನಿರೀಕ್ಷಿತ ಘಟನೆಗೆ ನಟಿಯ ರಿಯಾಕ್ಷನ್ ಏನಿತ್ತು?

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!