AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vicky Kaushal: ಕತ್ರೀನಾ ಜೊತೆಗಿನ ಎಂಗೇಜ್​ಮೆಂಟ್ ಕುರಿತು ಕೊನೆಗೂ ಮೌನ ಮುರಿದ ವಿಕ್ಕಿ ಕೌಶಲ್

Katrina Kaif: ಬಾಲಿವುಡ್​ನಲ್ಲಿ ಸದ್ಯ ಚರ್ಚೆಯಲ್ಲಿರುವ ಗಾಸಿಪ್ ಜೋಡಿಗಳಲ್ಲಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಜೋಡಿಯೂ ಒಂದು. ಇತ್ತೀಚೆಗೆ ವಿಕ್ಕಿ ಕೌಶಲ್ ನಿಶ್ಚಿತಾರ್ಥದ ಕುರಿತು ಮಾತನಾಡಿದ್ದು, ಗಾಸಿಪ್​ಗಳು ಅಂತ್ಯವಾಗುವ ಸಂದರ್ಭ ಗೋಚರಿಸಿದೆ.

Vicky Kaushal: ಕತ್ರೀನಾ ಜೊತೆಗಿನ ಎಂಗೇಜ್​ಮೆಂಟ್ ಕುರಿತು ಕೊನೆಗೂ ಮೌನ ಮುರಿದ ವಿಕ್ಕಿ ಕೌಶಲ್
ವಿಕ್ಕಿ ಕೌಶಲ್, ಕತ್ರಿನಾ ಕೈಫ್
TV9 Web
| Edited By: |

Updated on: Oct 17, 2021 | 10:16 PM

Share

ಸದ್ಯ ಬಾಲಿವುಡ್ ನಟ ವಿಕ್ಕಿ ಕೌಶಲ್ ತಮ್ಮ ಚಿತ್ರ ‘ಸರ್ದಾರ್ ಉಧಮ್’ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಈ ನಡುವೆ ಅವರು ಬಹಳ ಚರ್ಚೆಯಾಗುತ್ತಿರುವ ಕತ್ರೀನಾ ಕೈಫ್ ಹಾಗೂ ಅಅವರ ಸಂಬಂಧದ ಕುರಿತು ಬಹಿರಂಗವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಚ್ಚರಿಯ ವಿಚಾರವೆಂದರೆ ಅವರು, ತಮ್ಮ ಮಾತಿನಲ್ಲಿ ಗಾಸಿಪ್​ಗಳನ್ನು ನಿರಾಕರಿಸಿಲ್ಲ. ಹಾಗಂತ ಒಪ್ಪಿಕೊಂಡೂ ಇಲ್ಲ. ಅದಾಗ್ಯೂ ಅಭಿಮಾನಿಗಳು ಖುಷಿಪಡುವಂತಹ ಸುದ್ದಿಯೊಂದನ್ನು ಅವರು ನೀಡಿದ್ದಾರೆ. ಏನದು? ಮುಂದೆ ಓದಿ.

ಇತ್ತೀಚೆಗೆ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ವಿಕ್ಕಿ ಕೌಶಲ್, ಕತ್ರೀನಾ ಜೊತೆಗಿನ ಸಂಬಂಧದ ಕುರಿತು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಅವರು ಈ ಹಿಂದೆ ಕತ್ರಿನಾ ಜೊತೆಗೆ ಎಂಗೇಜ್​ಮೆಂಟ್ ಆಗಿತ್ತು ಎಂಬ ಸುದ್ದಿ ಹರಿದಾಡಿದ್ದಕ್ಕೂ ಉತ್ತರ ನೀಡಿದ್ದಾರೆ. ‘ಈ ಎಲ್ಲದಕ್ಕೂ ಸಮಯ ಬರುತ್ತದೆ. ಆಗ ತಾನು ಉತ್ತರಿಸಲಿದ್ದೇನೆ’ ಎಂದು ಅವರು ನುಡಿದಿರುವುದಲ್ಲದೇ, ಸದ್ಯದಲ್ಲೇ ನಿಶ್ಚಿತಾರ್ಥವನ್ನೂ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. ವಿಕ್ಕಿಯವರ ಈ ಮಾತು ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದ್ದು, ಕತ್ರಿನಾ- ವಿಕ್ಕಿ ಸದ್ಯದಲ್ಲೇ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ಧಾರೆ ಎನ್ನುತ್ತಿದ್ದಾರೆ.

ಕತ್ರಿನಾ ಹಾಗೂ ವಿಕ್ಕಿ ಕೌಶಲ್ ಜೊತೆಯಾಗಿ ಓಡಾಡಲು ಪ್ರಾರಂಭಿಸಿ ಕೆಲವು ಸಮಯ ಕಳೆದಿದೆ. ಇತ್ತೀಚೆಗೆ ಸರ್ದಾರ್ ಉಧಮ್  ಚಿತ್ರದ ಪ್ರೀಮಿಯರ್​​ನಲ್ಲಿ ಕತ್ರಿನಾ ಕಾಣಿಸಿಕೊಂಡಿದ್ದರು. ನಂತರ ಇನ್ಸ್ಟಾಗ್ರಾಂನಲ್ಲಿ ವಿಕ್ಕಿ ಕೌಶಲ್ ನಟನೆಯನ್ನು ಹೊಗಳಿದ್ದರು. ಅಲ್ಲದೇ, ಪ್ರೀಮಿಯರ್ ಸಂದರ್ಭದಲ್ಲಿ ವಿಕ್ಕಿ ಹಾಗೂ ಕತ್ರೀನಾ ಜೊತೆಗಿರುವ ಚಿತ್ರಗಳು ವೈರಲ್ ಆಗಿದ್ದವು.

‘ಸರ್ದಾರ್ ಉಧಮ್’ ಚಿತ್ರದ ಪ್ರೀಮಿಯರ್​ನಲ್ಲಿ ಕತ್ರೀನಾ:

ವಿಕ್ಕಿ ಕೌಶಲ್ ಹಾಗೂ ಕತ್ರಿನಾ 2019ರಿಂದಲೇ ಜೊತೆಯಾಗಿ ಸುತ್ತಾಡುತ್ತಿದ್ದಾರೆ. ಆದರೆ ಈರ್ವರು ಕೂಡ ಇದುವರೆಗೂ ತಮ್ಮ ಸಂಬಂಧದ ಬಗ್ಗೆ ಗಪ್​ಚುಪ್ ಎಂದಿಲ್ಲ. ಕೆಲ ಸಮಯದ ಹಿಂದೆ ಈ ಜೋಡಿ ಎಂಗೇಜ್​ಮೆಂಟ್ ಆಗಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು.  ಆದರೆ ಎರಡೂ ಕಡೆಯ ಕುಟುಂಬದವರು ಹಾಗೂ ಆಪ್ತರು ಅದನ್ನು ನಿರಾಕರಿಸಿದ್ದರು. ಈ ಬಾರಿ ವಿಕ್ಕಿ ಕೌಶಲ್ ಸ್ವತಃ ಎಂಗೇಜ್​ಮೆಂಟ್ ವಿಚಾರ ಮಾತನಾಡಿರುವುದರಿಂದ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

ಇದನ್ನೂ ಓದಿ:

ಸಾಕುನಾಯಿಗೆ ಬರೋಬ್ಬರಿ ₹ 15 ಕೋಟಿ ಆಸ್ತಿ ಬರೆಯಲು ಮುಂದಾದ ಮಾಡೆಲ್; ಇದರ ಹಿಂದಿದೆ ಅಚ್ಚರಿಯ ಕಾರಣ

ಶಸ್ತ್ರಚಿಕಿತ್ಸೆಗೆ ಒಳಗಾದ ಮೆಗಾಸ್ಟಾರ್​ ಚಿರಂಜೀವಿ; ಚಿಂತೆಗೊಳಗಾದ ಫ್ಯಾನ್ಸ್​

ಶೋ ನಡುವೆ ಮಲೈಕಾ ಕೆನ್ನೆ ಮುಟ್ಟಿ, ನಮಸ್ಕಾರ ಮಾಡಿದ ಸ್ಪರ್ಧಿ; ಅನಿರೀಕ್ಷಿತ ಘಟನೆಗೆ ನಟಿಯ ರಿಯಾಕ್ಷನ್ ಏನಿತ್ತು?

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ